Bengaluru: ಇಡಿ, ಆರ್‌ಬಿಐ ಹೆಸರು ಬಳಸಿ ವಂಚಿಸುತ್ತಿದ್ದ 7 ಮಂದಿ ಬಂಧನ

ಹೂಡಿಕೆ ನೆಪದಲ್ಲಿ 4 ಕೋಟಿ ರೂ. ವಸೂಲಿ ; ಹೆಬ್ಟಾಳ ಪೊಲೀಸರಿಂದ ಕಾರ್ಯಾಚರಣೆ

Team Udayavani, Aug 10, 2024, 12:07 PM IST

7-bng

ಬೆಂಗಳೂರು: ತಮ್ಮ ಬಳಿ ಹೂಡಿಕೆ ಮಾಡಿದರೆ ಜಾರಿ ನಿರ್ದೇಶನಾಲಯ (ಇ.ಡಿ), ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾದವರು (ಆರ್‌ಬಿಐ) ಜಪ್ತಿ ಮಾಡಿರುವ ಹಣ ಪಡೆದು ದುಪ್ಪಟ್ಟು ಲಾಭಾಂಶ ಕೊಡುವುದಾಗಿ ವಂಚಿಸಿದ್ದ 7 ಮಂದಿ ಆರೋಪಿ ಗಳನ್ನು ಹೆಬ್ಟಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಿವೃತ್ತ ಬ್ಯಾಂಕ್‌ ವ್ಯವಸ್ಥಾಪಕ ನಾಗೇಶ್ವರ ರಾವ್‌, ಹಾಸನ ಜಿಲ್ಲೆ ಚನ್ನರಾಯಪಣ್ಣದ ಕಲ್ಪನಾ, ದಿಲೀಪ್‌, ತರುಣಾ, ಗೌತಮ್, ಚಾಲಕ ಮಂಜು ಬಂಧಿತರು.‌

ಆರ್‌ಬಿಐ, ಇ.ಡಿ ಇಲಾಖೆಯ ಬಳಿ ಜಪ್ತಿಯಾಗಿರುವ ಕೋಟ್ಯಂತರ ರೂ. ದುಡ್ಡಿದೆ. ನೀವು ನಮ್ಮ ಬಳಿ ಮೊದಲು ಹೂಡಿಕೆ ಮಾಡಿದರೆ ನಿರ್ದೇಶನಾಲಯ (ಇ.ಡಿ), ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾದವರು (ಆರ್‌ಬಿಐ) ಜಪ್ತಿ ಮಾಡಿರುವ ದುಡ್ಡಿನಲ್ಲಿ ದುಪ್ಪಟ್ಟು ಹಣ ನೀಡುತ್ತೇವೆ. ಜಮೀನು ಕೊಡಿಸುತ್ತೇವೆ ಎಂದು ಆರೋಪಿಗಳು ಕೆಲವು ಜನರನ್ನು ನಂಬಿಸಿದ್ದರು. ಒಂದು ಬಾರಿ ಇವರ ಕೈಗೆ ದುಡ್ಡು ಸಿಕ್ಕಿದ ಕೂಡಲೇ ವರಸೆ ಬದಲಿಸುತ್ತಿದ್ದ ಆರೋಪಿಗಳು, ದುಡ್ಡು ಮರಳಿಸುವುದಿಲ್ಲ ಎಂದು ಬೆದರಿಸಿ ಕಳಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಮನೋರಾಯನಪಾಳ್ಯದ ನಿವಾಸಿ ಶಾಂತಿ ಎಂಬವವರು ಕೊಟ್ಟ ದೂರಿನ ಆಧಾರದ ಮೇರೆಗೆ ಹೆಬ್ಟಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸದ್ಯ 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಹಣದ ಕಂತೆಗೆ ಔಷಧ ಸಿಂಪಡಿಸಬೇಕೆಂದು ನಂಬಿಸಿ 4 ಕೋಟಿ ಪಡೆದಿದ್ದ ವಂಚಕರು! ದೂರುದಾರೆ ಶಾಂತಿ ಅವರಿಗೆ ಆರೋಪಿಗಳಾದ ನಾಗೇಶ್ವರ ರಾವ್‌, ಸುಜರಿತಾ ಎಂಬುವವರು ಆರೋಪಿ ಕಲ್ಪನಾಳನ್ನು 2020ರಲ್ಲಿ ಪರಿಚಯವಾಗಿದ್ದರು. ಕಲ್ಪನಾ ಅವರು, ಕುಡುಮುಡಿ ಎಂಬಲ್ಲಿ 100 ಕೋಟಿ ರೂ. ಮೌಲ್ಯದ ಆಸ್ತಿಯಿದೆ. ನ್ಯಾಯಾಲಯದಲ್ಲಿ ಪ್ರಕರಣ ನಮ್ಮ ಪರವಾಗಿದೆ. ದಾಖಲಾತಿ ಪಡೆಯಲು ತುರ್ತು ದುಡ್ಡಿನ ಅವಶ್ಯಕತೆಯಿದೆ. ಸದ್ಯ 15 ಲಕ್ಷ ರೂ. ನೀಡಿದರೆ 15 ದಿನಗಳೊಳಗೆ ಬಡ್ಡಿ ಸಹಿತ ಹಣ ವಾಪಸ್‌ ನೀಡುವುದಾಗಿ ನಂಬಿಸಿದ್ದರು.

ನಾಗೇಶ್ವರ ರಾವ್‌, ಸಜರಿತಾ ಹಾಗೂ ಚಾಲಕ ಮಂಜು ಸಮ್ಮುಖದಲ್ಲಿ ಶಾಂತಿ ಅವರಿಂದ ಕಲ್ಪನಾ 15 ಲಕ್ಷ ರೂ. ಪಡೆದಿದ್ದರು. 15 ದಿನಗಳ ಬಳಿಕ ಹಣ ವಾಪಸ್‌ ಕೇಳಿದಾಗ, ಕಪ್ಪು ಹಣವನ್ನು ಕಾನೂನು ಬದ್ಧವಾಗಿ ಪರಿವರ್ತಿಸಲು 100 ಕೋಟಿಗೆ ಶೇ.30ರಂತೆ 30 ಕೋಟಿ ಪಾವತಿಸಬೇಕಿದೆ. ತಮ್ಮ ಹಣಕ್ಕೆ 10 ಪಟ್ಟು ಹೆಚ್ಚು ಹಣ ನೀಡುತ್ತೇವೆ. ಜೊತೆಗೆ 2 ಕೆ.ಜಿ ಚಿನ್ನ, 20 ಕೆ.ಜಿ ಬೆಳ್ಳಿ ವಿಗ್ರಹ ನೀಡುತ್ತೇವೆ. ಈ ವ್ಯವಹಾರದಲ್ಲಿ ಆರ್‌ಬಿಐ ಅಧಿಕಾರಿಗಳು ನಮ್ಮೊಂದಿಗೆ ಇದ್ದಾರೆ. ಬಂಧಿತರ ಪೈಕಿ ಒಬ್ಬ ಶಾಂತಿ ಅವರಿಗೆ ಕರೆ ಮಾಡಿ ತಾನು ಇ.ಡಿ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವುದಾಗಿ ನಂಬಿಸಿದ್ದ.

ಗೋದಾಮಿನಲ್ಲಿರುವ ಹಣದ ಕಂತೆಗಳಿಗೆ ಔಷಧಿ ಹಾಕಬೇಕು. ಇಲ್ಲದಿದ್ದರೆ ಹಣವು ಒಂದಕ್ಕೊಂದು ಅಂಟಿಕೊಂಡು ನಾಶವಾಗುತ್ತದೆ. ಹಣವನ್ನು ಈಗಲೇ ಕೊಟ್ಟರೆ 2 ದಿನಗಳಲ್ಲಿ 10 ಪಟ್ಟು ಹೆಚ್ಚಿನ ಹಣ ಕೊಡುವುದಾಗಿ ನಂಬಿಸಿದ್ದರು. ಇದನ್ನು ನಂಬಿದ ದೂರುದಾರೆ ಶಾಂತಿ ಸೇರಿದಂತೆ ನಾಲ್ವರು 4 ಕೋಟಿ ರೂ.ವನ್ನು ಹಂತ-ಹಂತವಾಗಿ ಆರೋಪಿಗಳಿಗೆ ನೀಡಿದ್ದರು.

ನಂತರ ಆರೋಪಿಗಳು ಲಾಭವನ್ನೂ ನೀಡದೇ, ಅಸಲು ದುಡ್ಡನ್ನು ಕೊಟ್ಟಿರಲಿಲ್ಲ. ಈ ಬಗ್ಗೆ ನಾಲ್ವರು ಪ್ರಶ್ನಿಸಿದಾಗ ದುಡ್ಡು ಕೊಡುವುದಿಲ್ಲ. ಇನ್ನು ಹಣ ಕೇಳಿದರೆ ಜೀವ ಸಹಿತ ಬಿಡುವುದಿಲ್ಲ ಎಂಬುದಾಗಿ ಬೆದರಿಕೆ ಹಾಕಿದ್ದರು. ಆರೋಪಿಗಳು ನಾಲ್ವರಿಂದ 4 ಕೋಟಿ ರೂ. ಪಡೆದು ವಂಚಿಸಿರುವುದು ಕಂಡು ಬಂದಿದೆ. ಘಟನೆ ಸಂಬಂಧ ಹೆಬ್ಟಾಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.