Bigg Boss Kannada: ಬಿಗ್ಬಾಸ್ ನಿರೂಪಣೆಗೆ ಸುದೀಪ್ ಇರಲ್ವಾ? ಚರ್ಚೆ ಜೋರು
Team Udayavani, Aug 10, 2024, 12:53 PM IST
ಬಿಗ್ಬಾಸ್ ಕನ್ನಡ ಎಂದಾಗ ಕಣ್ಣಮುಂದೆ ಬರುವ ಮುಖ ಕಿಚ್ಚ ಸುದೀಪ್ ಅವರದು. ಅದಕ್ಕೆ ಕಾರಣ ನಿರೂಪಣೆ. ಸತತ ಹತ್ತು ಸೀಸನ್ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುವ ಖ್ಯಾತಿ ಕೂಡಾ ಸುದೀಪ್ ಅವರದು. ಅದೆಷ್ಟೋ ಮಂದಿ ಸುದೀಪ್ ಅವರಿಗಾಗಿ, ಅವರ ಮಾತು, ಕಾಸ್ಟ್ಯೂಮ್ಗಾಗಿ ವೀಕೆಂಡ್ ಬಿಗ್ಬಾಸ್ ನೋಡುತ್ತಿದ್ದರು. ಹೀಗಿರುವಾಗಲೇ ಸುದ್ದಿಯೊಂದು ಕೇಳಿಬರುತ್ತಿದೆ. ಅದು ನಿರೂಪಕರ ಬದಲಾವಣೆ ಕುರಿತಾಗಿ.
ಬಿಗ್ಬಾಸ್ ಕನ್ನಡದ ನಿರೂಪಕರನ್ನು ಬದಲಿಸುವ ಯೋಚನೆ ವಾಹಿನಿಗೆ ಬಂದಿದೆ ಎಂದು. ಹಾಗಂತ ಇದು ಅಧಿಕೃತವಲ್ಲ, ಆದರೆ, ಇಂತಹ ಒಂದು ಸುದ್ದಿ ಮಾತ್ರ ಓಡಾಡುತ್ತಿದೆ. ಈಗಾಗಲೇ ಹಿಂದಿ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ನಿರೂಪಕರನ್ನು ಬದಲಿಸಲಾಗಿದೆ. ಆದರೆ, ಕನ್ನಡದಲ್ಲಿ ಸತತವಾಗಿ 10 ಸೀಸನ್ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟವರು ಸುದೀಪ್. ಹೀಗಿರುವಾಗಲೇ ನಿರೂಪಕರ ಬದಲಾವಣೆ ಕುರಿತಾದ “ಅಂತೆ-ಕಂತೆ’ ಸುದ್ದಿ ಒಂದಷ್ಟು ಮಂದಿಗೆ ಬೇಸರ ತರಿಸಿರುವುದು ಸುಳ್ಳಲ್ಲ.
ಆದರೆ, ಈ ಬಗ್ಗೆ ವಾಹಿನಿ ಕಡೆಯಿಂದಾಗಲೀ, ಸುದೀಪ್ ಅವರ ಕಡೆಯಿಂದಾಗಲೀ ಯಾವುದೇ ಹೇಳಿಕೆ ಬಂದಿಲ್ಲ. ಅಂದಹಾಗೆ, ಬಿಗ್ಬಾಸ್ ಸೀಸನ್-11 ಅಕ್ಟೋಬರ್ ನಿಂದ ಆರಂಭವಾಗಲಿದ್ದು, ಈಗಾಗಲೇ ಪೂರ್ವ ತಯಾರಿ ನಡೆಯುತ್ತಿದೆ. ವೇದಿಕೆ ಮೇಲೆ ನಿರೂಪಣೆ ಯಾರದ್ದಾಗಿರುತ್ತದೆ ಎಂಬ ಕುತೂಹಲ ಮುಂದುವರೆದಿದೆ.
ಇನ್ನು, ಸುದೀಪ್ ಅವರ ಸಿನಿಮಾ ವಿಚಾರಕ್ಕೆ ಬರುವುದಾದರೆ “ಮ್ಯಾಕ್ಸ್’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಕೆಲವು ದಿನಗಳ ಹಿಂದೆ ಚಿತ್ರದ ಆ್ಯಕ್ಷನ್ ಟೀಸರ್ ರಿಲೀಸ್ ಆಗಿ, ಮೆಚ್ಚುಗೆ ಪಡೆದಿತ್ತು. ಸುದೀಪ್ ಈ ಚಿತ್ರದಲ್ಲಿ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಂಡಿದ್ದಾರೆನ್ನಲಾಗಿದೆ. ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ ಮುಂತಾದವರು ಬಣ್ಣ ಹಚ್ಚಿದ್ದಾರೆ. ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಸುದೀಪ್ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್ಬಾಸ್ʼ; ಕುತೂಹಲ ಹುಟ್ಟಿಸಿದ ಪ್ರೋಮೊ
BBK11: ಈ ಬಾರಿ ಬಿಗ್ ಬಾಸ್ ಮನೆಯೊಳಗೆ ಹೋಗೋರು ಇವರೇ? ಇಲ್ಲಿದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ
BBK-11: ಕೊನೆಗೂ ಬಿಗ್ ಬಾಸ್ ಆ್ಯಂಕರ್ ಮುಖ ರಿವೀಲ್… ಶೋ ಆರಂಭಕ್ಕೆ ಡೇಟ್ ಫಿಕ್ಸ್
Bigg Boss 18: ಬಿಗ್ಬಾಸ್ನಲ್ಲಿ ಭಾಗಿಯಾಗಲು ನಟನಿಗೆ 5 ಕೋಟಿ ಆಫರ್; ಯಾರೀತ?
Tv Actor Varun: ಪ್ರೀತಿಸಿ ದ್ರೋಹ, ಧಮ್ಕಿ; ನಟ ವರುಣ್ ಮೇಲೆ ಕೇಸ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ
Rummy Aata Movie: ಸೆ.20ರಿಂದ ರಮ್ಮಿ ಆಟ ಶುರು
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.