Wayanad ದುರಂತ ಸ್ಥಳಗಳನ್ನು ಕಂಡು ಸಂಕಷ್ಟ ಆಲಿಸಿದ ಪ್ರಧಾನಿ ಮೋದಿ
ಈ ದುರಂತ ಸಾಮಾನ್ಯವಲ್ಲ... ವೈಮಾನಿಕ ಸಮೀಕ್ಷೆ.. ಸಂತ್ರಸ್ತರ ಭೇಟಿಯಾದ ಪ್ರಧಾನಿ
Team Udayavani, Aug 10, 2024, 5:28 PM IST
ವಯನಾಡ್: ಭೀಕರ ಭೂಕುಸಿತದಿಂದ ತತ್ತರಿಸಿ ಹೋಗಿರುವ ವಯನಾಡ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ(ಆಗಸ್ಟ್ 10) ಭೇಟಿ ನೀಡಿ ವೈಮಾನಿಕ ಪರಿಶೀಲನೆ ನಡೆಸಿ ಸಂತ್ರಸ್ತರನ್ನು ಭೇಟಿಯಾಗಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಸಿಎಂ ಪಿಣರಾಯಿ ವಿಜಯನ್, ಕೇಂದ್ರ ಸಚಿವ ಸುರೇಶ್ ಗೋಪಿ ಕೂಡ ಭಾಗಿಯಾಗಿದ್ದರು.
ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ”ಭೀಕರ ಪ್ರಕೃತಿ ವಿಕೋಪ ನಡೆದ ದಿನ ಬೆಳಗ್ಗೆ ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ಮಾತುಕತೆ ನಡೆಸಿದ್ದೆ. ನೆರವು ನೀಡುವುದಾಗಿ, ಆದಷ್ಟು ಬೇಗ ಸ್ಥಳಕ್ಕೆ ತಲುಪಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದೆ. ಎನ್ಡಿಆರ್ಎಫ್, ಎಸ್ಡಿಆರ್ಎಫ್, ಸೇನೆ, ಪೊಲೀಸರು, ವೈದ್ಯರು ಎಲ್ಲರೂ ಸಂತ್ರಸ್ತರ ಕುಟುಂಬಗಳಿಗೆ ಹೆಚ್ಚಿನ ರೀತಿಯಲ್ಲಿ ಸಹಾಯ ಮಾಡಲು ಪ್ರಯತ್ನಿಸಿದರು, ನಾವೆಲ್ಲರೂ ಅವರೊಂದಿಗೆ ನಿಂತಿದ್ದು, ಕೇಂದ್ರ ಸರ್ಕಾರವು ಕೇರಳ ಸರ್ಕಾರದ ಜತೆ ನಿಂತಿದೆ ಮತ್ತು ಹಣದ ಕೊರತೆಯಿಂದ ಯಾವುದೇ ಕೆಲಸಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳುತ್ತೇವೆ” ಎಂದು ಹೇಳಿದರು.
“ಭೂಕುಸಿತದ ಬಗ್ಗೆ ನನಗೆ ತಿಳಿದಾಗಿನಿಂದ ನಾನು ಮಾಹಿತಿ ತೆಗೆದುಕೊಳ್ಳುತ್ತಿದ್ದೇನೆ, ದುರಂತದಲ್ಲಿ ಸಹಾಯ ಮಾಡಬಹುದಾದ ಕೇಂದ್ರ ಸರ್ಕಾರದ ಎಲ್ಲಾ ಏಜೆನ್ಸಿಗಳನ್ನು ತತ್ ಕ್ಷಣವೇ ಸಜ್ಜುಗೊಳಿಸಲಾಯಿತು. ಈ ದುರಂತ ಸಾಮಾನ್ಯವಲ್ಲ. ಸಾವಿರಾರು ಕುಟುಂಬಗಳ ಕನಸುಗಳು ಭಗ್ನಗೊಂಡಿವೆ. ನಾನು ಸ್ಥಳದಲ್ಲೇ ಪರಿಸ್ಥಿತಿ ನೋಡಿದ್ದೇನೆ. ಈ ದುರಂತವನ್ನು ಎದುರಿಸಿದ ಸಂತ್ರಸ್ತರನ್ನು ನಾನು ಪರಿಹಾರ ಶಿಬಿರಗಳಲ್ಲಿ ಭೇಟಿ ಮಾಡಿದ್ದೇನೆ. ನಾನು ಆಸ್ಪತ್ರೆಯಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನೂ ಭೇಟಿ ಮಾಡಿದ್ದೇನೆ” ಎಂದು ಹೇಳಿದರು.
ಭೂಕುಸಿತ ಪೀಡಿತ ಪ್ರದೇಶಕ್ಕೂ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ತೆರವು ಕಾರ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.ಪರಿಹಾರ ಶಿಬಿರಕ್ಕೆ ಭೇಟಿ ನೀಡಿ ಸಂತ್ರಸ್ತರನ್ನು ಭೇಟಿ ಮಾಡಿ ಮಾತುಕಥೆ ನಡೆಸಿದರು.
#WATCH | Kerala: Prime Minister Narendra Modi holds a review meeting with officials regarding the landslide-affected area in Wayanad.
Governor Arif Mohammed Khan, CM Pinarayi Vijayan and Union Minister Suresh Gopi are also present.
(Source: DD News) pic.twitter.com/Yv6c0sU36Y
— ANI (@ANI) August 10, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.