Mangaluru: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಅನ್ಯ ಧರ್ಮದ ಯುವಕನ ಜತೆ ವಿವಾಹ
Team Udayavani, Aug 10, 2024, 7:07 PM IST
ಮಂಗಳೂರು: ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದೂ ಧರ್ಮದ ವಿದ್ಯಾರ್ಥಿನಿಯೊಬ್ಬಳು ಕೇರಳದಲ್ಲಿ ಅನ್ಯ ಧರ್ಮದ ಯುವಕನೊಂದಿಗೆ ವಿವಾಹವಾದ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.
ಮಂಗಳೂರಿನ ವಿಸ್ಮಯ ಎನ್ನುವ ವಿದ್ಯಾರ್ಥಿನಿ ಕೇರಳದ ಅಶ್ಪಕ್ ಎನ್ನುವ ಯುವಕನ ಜತೆ ಮದುವೆಯಾಗಿದ್ದಾಳೆ. ಈ ಪ್ರಸಂಗ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದು, ವಿವಾಹಕ್ಕೆ ಕೋರ್ಟ್ ಅನುಮತಿ ನೀಡಿದೆ.
ಘಟನೆ ಏನು?: ವಿದ್ಯಾರ್ಥಿನಿ ವಿಸ್ಮಯಳನ್ನು ಜೂ.30ರಂದು ಉಳ್ಳಾಲದಿಂದ ಕಾಸರಗೋಡು ವಿದ್ಯಾನಗರ ನಿವಾಸಿ ಮುಹಮ್ಮದ್ ಅಶ್ಫಕ್ ಅಪಹರಿಸಿದ್ದ ಬಗ್ಗೆ ವಿದ್ಯಾರ್ಥಿನಿಯ ತಂದೆ ವಿನೋದ್ ಅವರು ಮಂಗಳೂರಿನ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದರು. ಮಗಳನ್ನು ಮತಾಂತರಗೊಳಿಸುವುದಕ್ಕಾಗಿ ಅಶ್ಪಕ್ ಮತ್ತು ಆತನ ತಂಡ ಅಪಹರಣ ನಡೆಸಿದೆ ಎಂದು ದೂರಿನಲ್ಲಿ ಹೇಳಿದ್ದರು.
ಅಶ್ಫಕ್ ಈಗಾಗಲೇ ಒಂದು ವಿವಾಹವಾಗಿದ್ದು ಈತನ ಮೇಲೆ 15ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ ಎಂದು ದೂರಿನಲ್ಲಿ ತಿಳಿಸಿದ್ದರು.
ಘಟನೆ ನೆನೆದು ವಿಸ್ಮಯ ತಂದೆ ಮಾಧ್ಯಮ, ವಿಶ್ವ ಹಿಂದೂ ಪರಿಷತ್ ಪದಾಧಿಕಾರಿಗಳ ಎದುರು ಕಣ್ಣೀರು ಹಾಕಿ ಮಗಳನ್ನು ರಕ್ಷಿಸುವಂತೆ ಮನವಿ ಮಾಡಿದ್ದರು.
ಇದು ಮತ್ತೊಂದು ಲವ್ ಜೆಹಾದ್ ಪ್ರಕರಣವಾಗಿದ್ದು ತನಿಖೆ ನಡೆಸಬೇಕೆಂದು ವಿಎಚ್ಪಿ ಆಗ್ರಹಿಸಿತ್ತು.
ಬಳಿಕ ಈಕೆಯನ್ನು ಪೊಲೀಸರು ಪತ್ತೆ ಹಚ್ಚಿ ಸಲಹಾ ಕೇಂದ್ರಕ್ಕೆ ಕಳುಹಿಸಿಕೊಟ್ಟಿದ್ದರು. ಇದೀಗ ಆಕೆಯನ್ನು ಅಶ್ಫಕ್ ಕೇರಳಕ್ಕೆ ಕರೆದೊಯ್ದು ವಿವಾಹವಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.