BJP-JDS Convention: ಸಿಎಂ ಸಿದ್ದರಾಮಯ್ಯರನ್ನು ಮನೆಗೆ ಕಳಿಸೊವರೆಗೂ ಹೋರಾಟ : ಬಿಎಸ್ವೈ
ಕಾಂಗ್ರೆಸ್ ನಾಯಕರೇ ನಿಮಗೆ ತಾಕತ್ತಿದ್ದರೇ ವಿಧಾನಸಭೆ ವಿಸರ್ಜಿಸಿ: ಮಾಜಿ ಸಿಎಂ ಯಡಿಯೂರಪ್ಪ
Team Udayavani, Aug 10, 2024, 7:29 PM IST
ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಿಂದ ಜನರು ಬೇಸತ್ತಿದ್ದು, ಸಿಎಂ ಸಿದ್ದರಾಮಯ್ಯನವರೇ ವಿಧಾನಸಭೆ ವಿಸರ್ಜಿಸಿ, ಹೊಸ ಚುನಾವಣೆ ಎದುರಿಸಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರಕಾರಕ್ಕೆ ಸವಾಲು ಹಾಕಿದರು.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ಬಿಜೆಪಿ-ಜೆಡಿಎಸ್ ಮೈತ್ರಿ ಹಮ್ಮಿಕೊಂಡಿದ್ದ “ಮೈಸೂರು ಚಲೋ ಯಾತ್ರೆ” ಸಮಾರೋಪದಲ್ಲಿ ಕಾಂಗ್ರೆಸ್ನ ಹಗರಣಗಳ ಕುರಿತು ಆರೋಪಿಸಿರುವ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಜನರು ಸ್ಪಷ್ಟ ಬಹುಮತ ಕೊಟ್ಟರೂ ಸಿಎಂ, ಡಿಸಿಎಂ ಆಡಳಿತದಿಂದ ರಾಜ್ಯದ ಜನರು ನಿರಾಶೆ ಹೊಂದಿದ್ದಾರೆ. ಕಳೆದ 14 ತಿಂಗಳುಗಳಿಂದ ರಾಜ್ಯ ಸರ್ಕಾರವು ಯಾವುದೇ ಅಭಿವೃದ್ಧಿ ಕಾರ್ಯಗಳ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ರಾಜ್ಯದ ಖಜಾನೆಯ ಲೂಟಿ ಹೊಡೆಯುತ್ತಿದ್ದಾರೆ. ಭ್ರಷ್ಟ ಸಿಎಂ, ಡಿಸಿಎಂ ಇರುವವರೆಗೂ ನಾಡಿನ ಅಭಿವೃದ್ಧಿ ಸಾಧ್ಯವಿಲ್ಲ. ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ-ಜೆಡಿಎಸ್ ಮೈತ್ರಿ ಗೆಲುವು ಸಾಧಿಸಲಿದೆ, ಕನ್ನಡಿಗರು ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸಲು ಸಿದ್ದರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಭ್ರಷ್ಟ ಸಿಎಂ, ಡಿಸಿಎಂ ಇರುವವರೆಗೂ ನಾಡಿನ ಅಭಿವೃದ್ಧಿ ಸಾಧ್ಯವಿಲ್ಲ. ಕನ್ನಡಿಗರು ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸಲು ಸಿದ್ದರಾಗಿದ್ದಾರೆ. ಕಾಂಗ್ರೆಸ್ ನಾಯಕರೇ ನಿಮಗೆ ತಾಕತ್ತಿದ್ದರೇ ವಿಧಾನಸಭೆ ವಿಸರ್ಜಿಸಿ, ಚುನಾವಣೆಗೆ ಹೋಗೋಣ.
– ಶ್ರೀ @BSYBJP , ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರು ಹಾಗೂ ಮಾಜಿ… pic.twitter.com/KdmvMhZKXN
— BJP Karnataka (@BJP4Karnataka) August 10, 2024
ರಾಜಕೀಯದಿಂದ ನಿವೃತ್ತಿ ಇಲ್ಲ:
ಶುಕ್ರವಾರ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡುತ್ತ, 82 ವರ್ಷದ ಯಡಿಯೂರಪ್ಪ ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗಬೇಕೆಂದು ಆಗ್ರಹಿಸಿದ್ದರು. ಇದಕ್ಕೆ ಸಮಾವೇಶದಲ್ಲಿ ಪ್ರತ್ಯುತ್ತರ ನೀಡಿದ ಬಿಎಸ್ವೈ, ಸಿಎಂ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯುವವರೆಗೂ ನಾನು ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ. ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗುವ ಮಾತಿರಲಿ, ಕೊನೆ ಉಸಿರು ಇರುವವರೆಗೂ ರಾಜಕಾರಣದಲ್ಲಿ ಇದ್ದು ನಿಮ್ಮನ್ನು ಮನೆಗೆ ಕಳಿಸುವ ಕೆಲಸ ಮಾಡುತ್ತೇನೆ ಎಂದರು. ತಾಕತ್ತಿದ್ದರೆ ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆಗೆ ಬನ್ನಿ. ಈಗಲೂ ಚುನಾವಣೆ ನಡೆದರೆ ಬಿಜೆಪಿ 130- 140 ಸ್ಥಾನ ಗೆಲ್ಲಲಿದೆ ಎಂದು ಭವಿಷ್ಯ ನುಡಿದರು.
ಸಿಎಂ ಸಿದ್ದರಾಮಯ್ಯ ಮುಡಾದಿಂದ 14 ನಿವೇಶನ ತನ್ನದೇ ಕುಟುಂಬಕ್ಕೆ ಹೇಗೆ ತೆಗೆದುಕೊಂಡಿದ್ದೀರಿ? ಪರಿಹಾರ ಕೊಟ್ಟರೆ ವಾಪಸ್ ಕೊಡುತ್ತೀನಿ ಎಂದು ಹೇಳುತ್ತಾರೆ. ಅದು ಹೇಗೆ ತಗೊಂಡಿದ್ದಿರಿ, ಯಾರಪ್ಪನ ದುಡ್ಡು ಪರಿಹಾರ ಕೊಡಕ್ಕೆ. ನಿಮ್ಮ ಮೈಯೆಲ್ಲಾ ಕಪ್ಪು ಚುಕ್ಕೆ ಇವೆ. ಡಿಸಿಎಂ ಡಿಕೆ ಶಿವಕುಮಾರ್ ಅವರೇ ನಿಮ್ಮ ಪಾಪದ ಕೊಡ ತುಂಬಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಾನು ಕಲ್ಲುಬಂಡೆ ಎಂದು ತಮ್ಮನ್ನೇ ತಾವೇ ಕರೆದುಕೊಳ್ಳುತ್ತಾರೆ. ವಿರೋಧ ಪಕ್ಷದವರನ್ನು ಹೇಯ್ ವಿಜಯೇಂದ್ರ, ಹೇಯ್ ಅಶೋಕ್ ಎಂದು ಏಕವಚನದಲ್ಲಿ ಲಘುವಾಗಿ ಮಾತನಾಡುತ್ತಾರೆ. ಇನ್ನೊಬ್ಬರ ಕುರಿತು ಹಗುರವಾಗಿ ಮಾತನಾಡುವುದು ಬಿಟ್ಟು, ಭವಿಷ್ಯದ ಬಗ್ಗೆ ಯೋಚನೆ ಮಾಡಿ ಎಂದು ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.