Flood: ಬೆಳೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಿ; ಆ.12ಕ್ಕೆ ಮುಧೋಳ ಬಂದ್ ಎಚ್ಚರಿಕೆ
ಆ.11ರ ಮಧ್ಯಾಹ್ನವರೆಗೂ ರಾಜ್ಯ ಸರ್ಕಾರಕ್ಕೆ ಗಡುವು : ಸಂತ್ರಸ್ತರು , ರೈತರ ನಿರ್ಧಾರ
Team Udayavani, Aug 10, 2024, 9:31 PM IST
ಮುಧೋಳ (ಬಾಗಲಕೋಟೆ ಜಿಲ್ಲೆ) : ಘಟಪ್ರಭಾ ನದಿಯ ಪ್ರವಾಹಕ್ಕೆ ಮುಳುಗಡೆಯಾದ ಬೆಳೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂಬ ಕೂಗು ಹೆಚ್ಚಾಗ ತೊಡಗಿದ್ದು, ಸರ್ಕಾರ ಹೋರಾಟಗಾರರ ಕೂಗಿಗೆ ಸ್ಪಂದಿಸದಿದ್ದರೆ ಆಗಸ್ಟ್ 12ರಂದು ಮುಧೋಳ ಬಂದ್ ನಡೆಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರವಾಹಕ್ಕೊಳಗಾದ ಸಂತ್ರಸ್ತರು , ರೈತರು ಒಮ್ಮತದ ನಿರ್ಧಾರ ಪ್ರಕಟಿಸಿದರು.
ನಗರದ ಜಿಎಲ್ಬಿಸಿ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸಂತ್ರಸ್ತರು ಹಾಗೂ ರೈತರ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿ ಪರಿಹಾರಕ್ಕಾಗಿ ಒತ್ತಾಯಿಸಿ ಆ.7ರಂದು ಸುರಿವ ಮಳೆಯಲ್ಲಿಯೇ ಹೋರಾಟ ಮಾಡಿದರೂ ಜನಪ್ರತಿನಿಧಿಗಳಾಗಲಿ, ಜಿಲ್ಲಾಡಳಿತವಾಗಲಿ ನಮ್ಮ ಹೋರಾಟಕ್ಕೆ ಸ್ಪಂದಿಸುವ ಕಾರ್ಯ ಮಾಡಿಲ್ಲ. ಅದಾದ ಬಳಿಕ ಅ.10ರವೆಗೆ ನಾವು ಸರ್ಕಾರಕ್ಕೆ ಗಡುವು ನೀಡಿದ್ದೆವು. ಆದರೆ ರಾಜ್ಯ ಸರ್ಕಾರ ನಮ್ಮ ಸಮಸ್ಯೆಗೆ ಧ್ವನಿಯಾಗುತ್ತಿಲ್ಲ ಎಂದು ದೂರಿದರು.
ಈ ಹಿನ್ನೆಲೆಯಲ್ಲಿ ಆ.11ರ ಮಧ್ಯಾಹ್ನದವರೆಗೂ ಸರ್ಕಾರಕ್ಕೆ ಗಡುವು ನೀಡುತ್ತೇವೆ ಅಷ್ಟರೊಳಗೆ ನಮ್ಮ ಸಮಸ್ಯೆಗೆ ಸ್ಪಂದಿಸದಿದ್ದರೆ ಸೋಮವಾರ (ಆ.12) ಮುಧೋಳ ನಗರ ಬಂದ್ ಮಾಡಿ ಉಗ್ರ ಹೋರಾಟ ಕೈಗೊಳ್ಳಲಾಗುವುದು. ಸರ್ಕಾರ ಮುಂದಿನ ಅನಾಹುತಕ್ಕೆ ಅವಕಾಶ ಕೊಡದೆ ನಮ್ಮ ಬೇಡಿಕೆಗೆ ಸ್ಪಂದಿಸಿ ಸಂತ್ರಸ್ತರ ಕಣ್ಣೀರು ಒರೆಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ದುಂಡಪ್ಪ ಯರಗಟ್ಟಿ, ಬಸವಂತ ಕಾಂಬಳೆ, ಮುತ್ತಪ್ಪ ಕೊಮಾರ, ಸುಭಾಸ ಶಿರಬೂರ, ಬಂಡು ಘಾಟಗೆ, ಸದಪ್ಪ ತೇಲಿ, ಮಹೇಶಗೌಡ ಪಾಟೀಲ, ಸುಗರಪ್ಪ ಅಕ್ಕಿಮರಡಿ, ತಿಮ್ಮಣ್ಣ ಬಟಕುರ್ಕಿ, ಸದಾಶಿವ ಇಟಗನ್ನವರ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ
Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.