ಕಾನೂನು ನೈತಿಕತೆಯನ್ನು ಅವಲಂಬಿಸಿದಾಗ ನ್ಯಾಯ ಲಭ್ಯ : ನ್ಯಾ.ಅಬ್ದುಲ್‌ ನಝೀರ್‌

ಶಿರ್ತಾಡಿಯಲ್ಲಿ ಭುವನಜ್ಯೋತಿ ಟ್ರಸ್ಟ್‌ನ ಕಾನೂನು ಕಾಲೇಜು ಉದ್ಘಾಟನೆ

Team Udayavani, Aug 11, 2024, 6:17 AM IST

MuDubidre

ಮೂಡುಬಿದಿರೆ: ನೈತಿಕತೆ ಎಂಬುದು ಕಾನೂನಿಗಿಂತ ಮಿಗಿಲಾದುದು. ಕಾನೂನು ನೈತಿಕತೆಯನ್ನು ಅವಲಂಬಿಸಿದ್ದಾಗ ಮಾತ್ರ ನ್ಯಾಯಾಕಾಂಕ್ಷಿಗೆ ನಿಜವಾದ ನ್ಯಾಯ ಲಭಿಸಲು ಸಾಧ್ಯ ಎಂದು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ, ಆಂಧ್ರ ಪ್ರದೇಶದ ರಾಜ್ಯಪಾಲ ಎಸ್‌.ಅಬ್ದುಲ್‌ ನಝೀರ್‌ ಹೇಳಿದರು.

ಶಿರ್ತಾಡಿಯಲ್ಲಿ ಭುವನಜ್ಯೋತಿ ಟ್ರಸ್ಟ್‌ನ ಕಾನೂನು ಕಾಲೇಜಿನ ಉದ್ಘಾಟನ ಸಮಾರಂಭದಲ್ಲಿ ಮಾತನಾಡಿದ ಅವರು, ಕೋರ್ಟ್‌ ಕೇಸುಗಳೆಂದರೆ ಕ್ಯಾನ್ಸರ್‌ ಇದ್ದಂತೆ. ದೇಶದ ನ್ಯಾಯಾಲಯಗಳಲ್ಲಿ ಐದು ಕೋಟಿ ಪ್ರಕರಣಗಳು ಕೊಳೆಯುತ್ತಿವೆ ಎಂದರೆ ಕನಿಷ್ಠ 20 -25 ಕೋಟಿ ಮಂದಿ ಈ ಕ್ಯಾನ್ಸರ್‌ನಿಂದ ನರಳುತ್ತಿದ್ದಾರೆ ಎಂದೇ ಪರಿಭಾವಿಸಬೇಕಾಗಿದೆ. ಕಾನೂನು ಪ್ರಕ್ರಿಯೆಯ ಜಟಿಲ ಅಂಶಗಳೇ ಈ ವಿಳಂಬಕ್ಕೆ ಕಾರಣ. ಇದನ್ನು ಹೋಗಲಾಡಿಸಲು ಕಾನೂನು ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ ಆಗಬೇಕಾಗಿದೆ ಎಂದರು.

ಕಾನೂನು ಪರಿಪಾಲನೆ ಬರೇ ಕೋರ್ಟಿನ ವಿಷಯವಾಗುವುದಲ್ಲ, ನಮ್ಮ ನಮ್ಮ ಮನೆಯಿಂದಲೇ ಆರಂಭವಾಗಬೇಕು. ವಕೀಲರು ಉನ್ನತ ಮಟ್ಟದ ನ್ಯಾಯಸಮ್ಮತ ಸಂಸ್ಕೃತಿಯನ್ನು ರೂಢಿಸಿಕೊಂಡಿರಬೇಕಾಗಿದೆ. ವೃತ್ತಿ ರಹಸ್ಯದೊಂದಿಗೆ ತನ್ನ ಗ್ರಾಹಕರಿಗೆ ವಿಧೇಯನಾಗಿರುವುದೂ ಬಹಳ ಮುಖ್ಯ. ಒಂದುಕಾಲದಲ್ಲಿ ಯಾವುದಕ್ಕೂ ಸಲ್ಲದವನು ಕಾನೂನು ಕಾಲೇಜು ಸೇರುತ್ತಿದ್ದರು. ಅಲ್ಲೂ ಸಲ್ಲದವನು ಎಲ್ಲೂ ಸಲ್ಲನು ಎಂಬ ಮಾತಿತ್ತು. ಈಗ ಇದೊಂದು ಉದಾತ್ತ ಶಿಕ್ಷಣ ಶಾಖೆ ಎಂದು ಪರಿಗಣಿತವಾಗಿದೆ ಎಂದರು.

ಹೈಕೋರ್ಟ್‌ ನ್ಯಾಯಾಧೀಶ ಜ| ಕೃಷ್ಣ ಎಸ್‌.ದೀಕ್ಷಿತ್‌ ಮಾತನಾಡಿ, “ಭಾರತ ಎಂದರೆ ಜ್ಞಾನ ಅರಸುವವರ ನಾಡು. ಇಲ್ಲಿ ತಕ್ಷಶಿಲಾ, ನಳಂದಾ ಮೊದಲಾದ 24 ವಿಶ್ವವಿಖ್ಯಾತ ವಿವಿಗಳಿದ್ದವು. ಅನ್ಯದೇಶಗಳಿಂದಲೂ ಇಲ್ಲಿಗೆ ಜನ ಜ್ಞಾನಾರ್ಜನೆಗಾಗಿ ಬರುತ್ತಿದ್ದರು. ಪ್ರವಾದಿ ಮೊಹಮ್ಮದರು ತನ್ನ ನಾಡಿನಿಂದ ಮೊದಲು ಬಂದದ್ದೇ ಭಾರತಕ್ಕೆ ಎಂಬುದು ಈ ನಾಡು ಜ್ಞಾನಕಾಶಿ ಎಂಬುದಕ್ಕೆ ಸಾಕ್ಷಿ ಎಂದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.