PM Modi; ಇಂದು 109 ಅಧಿಕ ಇಳುವರಿ ತಳಿ ಬಿಡುಗಡೆ ; ಏನಿದು ಯೋಜನೆ?
ಹೊಳ ತಳಿಗಳಿಂದ ರೈತರಿಗೆ ಹೆಚ್ಚು ಲಾಭ... ವಿಜ್ಞಾನಿಗಳ ರೈತರ ಜತೆ ಪ್ರಧಾನಿ ಮೋದಿ ಸಂವಾದ
Team Udayavani, Aug 11, 2024, 6:45 AM IST
ಹೊಸದಿಲ್ಲಿ: ಪ್ರಧಾನಿ ಮೋದಿ ಅವರು ರವಿವಾರ ಅಧಿಕ ಇಳುವರಿ, ಹವಾಮಾನಕ್ಕೆ ಹೊಂದಿಕೊಳ್ಳುವ ಮತ್ತು ಜೈವಿಕ ಬಲವರ್ಧಿತ ಬೆಳೆಗಳ 109 ತಳಿಗಳನ್ನು ಬಿಡುಗಡೆ ಮಾಡಲಿದ್ದಾರೆ.
ದಿಲ್ಲಿಯ ಭಾರತೀಯ ಕೃಷಿ ಸಂಶೋಧನ ಸಂಸ್ಥೆಯಲ್ಲಿ ಬೆಳೆಗಳ ತಳಿಗಳನ್ನು ಬಿಡುಗಡೆ ಮಾಡುವುದರ ಜತೆಗೆ ಮೋದಿ ಅವರು, ರೈತರು ಮತ್ತು ವಿಜ್ಞಾನಿಗಳ ಜತೆ ಸಂವಾದ ಕೂಡ ನಡೆಸಲಿದ್ದಾರೆ. 27 ತೋಟಗಾರಿಕಾ ಬೆಳೆಗಳು, 34 ಕ್ಷೇತ್ರ ಬೆಳೆಗಳು ಮತ್ತು 61 ಬೆಳೆಗಳು ಸೇರಿ ಒಟ್ಟು 109 ತಳಿಗಳ ಬಿಡುಗಡೆ ನಡೆಯಲಿದೆ.
ಕ್ಷೇತ್ರ ಬೆಳೆಗಳು ಯಾವವು?: ಸಿರಿಧಾನ್ಯ ಸೇರಿ ವಿವಿಧ ನಮೂನೆಯ ಧಾನ್ಯಗಳು, ಮೇವು ಬೆಳೆ, ಎಣ್ಣೆ ಬೀಜ ಗಳು, ದ್ವಿದಳ ಧಾನ್ಯ, ಗೋಧಿ, ಭತ್ತ, ಕಬ್ಬು, ಹತ್ತಿ ಮತ್ತು ಇತರ ಬೆಳೆಗಳ ತಳಿಗಳು ಸೇರಿವೆ. ಈ ಬೆಳೆಗಳು ಆಹಾರ ಪೂರೈಕೆ, ಪಶು ಆಹಾರ ಹಾಗೂ ಕಚ್ಚಾ ವಸ್ತುಗಳ ಪೂರೈಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಈ ಬೆಳೆಗಳನ್ನು ಭಾರೀ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ.
ತೋಟಗಾರಿಕಾ ಬೆಳೆಗಳು ಯಾವುವು?: ವಿವಿಧ ನಮೂನೆಯ ಹಣ್ಣುಗಳು, ತರಕಾರಿ, ಗೆಡ್ಡೆ, ಮಸಾಲೆ ಬೆಳೆಗಳು, ಹೂ ಮತ್ತು ಗಿಡಮೂಲಿಕೆಗಳು ತಳಿಗಳು ಇದರಲ್ಲಿ ಸೇರಿವೆ. ತೋಟಗಾರಿಕಾ ಬೆಳೆಗಳು ವಿಶೇಷ ವಾಗಿ ಪೌಷ್ಟಿಕಾಂಶ, ಸೌಂದರ್ಯ ವರ್ಧಕ, ಔಷಧ ಕಂಪೆನಿಗಳಿಗೆ ಹೆಚ್ಚು ಮಹತ್ವದ್ದಾಗಿರುತ್ತವೆ.
ಜೈವಿಕ ಬಲವರ್ಧಿತ ತಳಿಗಳು: ಜೈವಿಕ ಬಲವರ್ಧಿತ ಬೆಳೆಗಳಲ್ಲಿನ ಪೋಷಂಕಾಶಗಳನ್ನು ಹೆಚ್ಚಿಸಲಾಗಿರುತ್ತದೆ. ಅಪೌಷ್ಟಿಕಾಂಶ ಕೊರತೆ ನೀಗಿಸುವ ನಿಟ್ಟಿನಲ್ಲಿ ಈ ಬೆಳೆಗಳು ಹೆಚ್ಚು ಪ್ರಾಮುಖ್ಯ ವಹಿಸಲಿವೆ. ಸರಕಾರಿ ಪ್ರಾಯೋಜಿತ ಬಿಸಿಯೂಟ, ಅಂಗನವಾಡಿ ಯೋಜನೆಗಳಿಗೆ ನೆರವು ನೀಡಲಿವೆ ಎಂಬುದು ಪ್ರಧಾನಿ ಅವರ ಆಶಯ.
ಏನಿದು ಯೋಜನೆ?
ಪ್ರಧಾನಿ ಸದಾ ಸುಸ್ಥಿರ ಕೃಷಿ ಹೆಚ್ಚು ಒತ್ತು ನೀಡು ತ್ತಾರೆ. ಈ ತಳಿಗಳು ರೈತರಿಗೆ ಹೆಚ್ಚು ಆದಾಯದ ಜತೆಗೆ ಔದ್ಯೋಗಿಕ ಅವಕಾಶಗಳಿಗೆ ಬಾಗಿಲು ತೆರೆಯಲಿದೆ. ಅದರ ಭಾಗವಾಗಿಯೇ ಅಧಿಕ ಇಳುವರಿ ತಳಿ ಬಿಡುಗಡೆ ಮಾಡಲಾಗುತ್ತಿದೆ.
ಕರ್ನಾಟಕದ ತಳಿಗಳು
ಪುತ್ತೂರಿನಲ್ಲಿರುವ ಗೇರು ಸಂಶೋಧನ ಕೇಂದ್ರ ಅಭಿವೃದ್ಧಿಪಡಿಸಿದ 2 ಗೇರು ತಳಿಗಳು, ಕಾಸರಗೋಡು ಸಿಪಿಸಿಆರ್ಐ ಅಭಿವೃದ್ಧಿಪಡಿಸಿದ ತಲಾ ಎರಡು ತೆಂಗು ಮತ್ತು ಕೊಕೊ ತಳಿಗಳು ರವಿವಾರ ಬಿಡುಗಡೆಯಾಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.