Udupi: ದೇಶದ ಆರ್ಥಿಕ ಅಭಿವೃದ್ಧಿ ಎಲ್ಲರ ಆದ್ಯತೆಯಾಗಲಿ: ಸುರೇಶ್‌ ಪ್ರಭು

ಮೈಕ್ರೋಸಾಫ್ಟ್, ಅಮೆಜಾನ್‌, ಇನ್ಫೋಸಿಸ್‌ಗಳ ಅಭಿವೃದ್ಧಿ ಸಾಧನೆಗಳು ಅಪಾರ: ಸಂವಾದದಲ್ಲಿ ರಾಷ್ಟ್ರೀಯ ಹೊಸ ಸಹಕಾರಿ ನೀತಿ ಅಧ್ಯಕ್ಷ

Team Udayavani, Aug 11, 2024, 6:45 AM IST

Suresh-Prabhu

ಉಡುಪಿ: ಆರ್ಥಿಕ ಅಭಿವೃದ್ಧಿ ಎಲ್ಲರ ಆದ್ಯತೆಯಾಗಬೇಕು. ದೇಶ ಆರ್ಥಿಕತೆಯಲ್ಲಿ ಬಹಳಷ್ಟು ಅಭಿವೃದ್ಧಿ ಸಾಧಿಸುತ್ತಿದೆ. ವಿವಿಧ ತಂತ್ರಜ್ಞಾನಗಳ ಮೂಲಕ ಆರ್ಥಿಕ ಕ್ಷೇತ್ರ ಅಭಿವೃದ್ಧಿಯಾಗುತ್ತಿದೆ. ಸಹಕಾರ ಕ್ಷೇತ್ರಗಳಲ್ಲೂ ಯುಪಿಐ ಮೂಲಕ ಹಲವಾರು ರೀತಿಯ ವ್ಯವಹಾರಗಳು ನಡೆದು ಜನರಿಗೆ ಮತ್ತಷ್ಟು ಅನುಕೂಲವಾಗುತ್ತಿದೆ. 2047ರಲ್ಲಿ ರಾಷ್ಟ್ರ ಮತ್ತಷ್ಟು ಅಭಿವೃದ್ಧಿ ಸಾಧಿಸಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದೆ. ಕೃತಕ ಬುದ್ಧಿಮತ್ತೆಯಿಂದ ಮುಂಬರುವ ದಿನಗಳಲ್ಲಿ ಮತ್ತಷ್ಟು ಕ್ರಾಂತಿ ಉಂಟಾಗಲಿದೆ. ಸುಸ್ಥಿರ ಅಭಿವೃದ್ಧಿಗೆ ಇದರ ಕೊಡುಗೆಯೂ ಅಪಾರ ಎಂದು ಕೇಂದ್ರದ ಮಾಜಿ ಸಚಿವ ಮತ್ತು ರಾಷ್ಟ್ರೀಯ ಹೊಸ ಸಹಕಾರಿ ನೀತಿಯ ಅಧ್ಯಕ್ಷ ಸುರೇಶ್‌ ಪ್ರಭು ಹೇಳಿದರು.

ಖಾಸಗಿ ಹೊಟೇಲ್‌ನಲ್ಲಿ ಶನಿವಾರ ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕ್‌ ವತಿಯಿಂದ ಜರಗಿದ ಸಂವಾದದಲ್ಲಿ ಮಾತನಾಡಿದ ಅವರು, ಆದಾಯ ತೆರಿಗೆ ನೇರ ತೆರಿಗೆಯಾಗಿದೆ. ಆದಾಯ ತೆರಿಗೆ ಮೂಲಕ ಎಲ್ಲ ಸರಕಾರಿ ಅಧಿಕಾರಿಗಳು ಸಹಿತ ಮೂಲ ಸೌಕರ್ಯಗಳು ನಡೆಯುತ್ತಿವೆ. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ತಂತ್ರಜ್ಞಾನ ಬಹಳಷ್ಟು ಪ್ರಾಮುಖ್ಯ ಪಡೆದುಕೊಂಡಿದೆ. ಸಹಕಾರ
ಸಂಸ್ಥೆಗಳು ಗ್ರಾಮಾಂತರ ಭಾಗದಲ್ಲಿ ಮತ್ತಷ್ಟು ಸೇವೆ ನೀಡಲು ಯುಪಿಐಗಳ ಪಾತ್ರ ಮಹತ್ತರವಾಗಿದೆ ಎಂದರು.

ಯುವಜನತೆ ಸ್ಟಾರ್ಟಪ್‌ ಮಾಡಲು ಬಹಳಷ್ಟು ಅವಕಾಶವಿದೆ. ಗುಜರಾತ್‌ನ ಎಲ್ಲ ಜಿಲ್ಲೆಗಳಲ್ಲಿ ಬಹಳಷ್ಟು ಮಂದಿ ಸ್ಟಾರ್ಟಪ್‌ಗ್ಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಲವು ವಿವಿ, ಶಾಲೆಗಳಲ್ಲಿ ಇನ್‌ಕ್ಯುಬೇಷನ್‌ ಸೆಂಟರ್‌ಗಳು ಆರಂಭಗೊಂಡಿವೆ. ಮೀನುಗಾರರ ಕೌಶಲ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು.

ಉಡುಪಿ ಸಹಿತ ಕರಾವಳಿ ಜಿಲ್ಲೆಯ ಹಲವಾರು ರಾಷ್ಟ್ರೀಕೃತ ಬ್ಯಾಂಕ್‌ಗಳಿವೆ. ಭವಿಷ್ಯದಲ್ಲಿ ಕೈಗಾರಿಕೆಗಿಂತಲೂ ಪ್ರವಾಸೋದ್ಯಮ ಸಹಿತ ಇತರ ಕ್ಷೇತ್ರಗಳಲ್ಲಿ ಉದ್ಯೋಗಾ ವಕಾಶ ಹೆಚ್ಚಳವಾಗಲಿದೆ. ಆರ್ಥಿಕತೆ ಬೇರೆ ಬೇರೆ ರೀತಿಯಲ್ಲಿ ವಿಭಿನ್ನವಾಗಿ ನಡೆಯುತ್ತಿದೆ. ಮೈಕ್ರೋಸಾಫ್ಟ್, ಅಮೆಜಾನ್‌, ಇನ್ಫೋಸಿಸ್‌ಗಳ ಅಭಿವೃದ್ಧಿ ಸಾಧನೆಗಳು ಅಪಾರವಾಗಿದೆ. ಕೈಗಾರಿಕೆಗಳ ಉದ್ದೇಶ ತಿಳಿಯಬೇಕು. ಸರ್ವಿಸ್‌ ಕ್ಷೇತ್ರ ಹಾಗೂ ಕೈಗಾರಿಕೆ ಕ್ಷೇತ್ರದಲ್ಲಿ ಎಲ್ಲಿ ಉದ್ಯೋಗಾವಕಾಶ ಅಧಿಕವಿದೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದರು.

ಮಹಾಲಕ್ಷ್ಮೀ ಕೋ-ಆಪ್‌ ಬ್ಯಾಂಕ್‌ ಅಧ್ಯಕ್ಷ, ಶಾಸಕ ಯಶ್‌ಪಾಲ್‌ ಎ.ಸುವರ್ಣ, ಬ್ಯಾಂಕಿಂಗ್‌ ಕ್ಷೇತ್ರದ ಗಣ್ಯರು, ನ್ಯಾಯವಾದಿಗಳು, ಕೈಗಾರಿ ಕೋದ್ಯಮಿಗಳು, ಸಹಕಾರ ಕ್ಷೇತ್ರದ ಮುಖಂಡರು ಉಪಸ್ಥಿತರಿದ್ದರು.

ಸಹಕಾರಿ ನೀತಿ ವರದಿ ಸಲ್ಲಿಕೆ
ರಾಷ್ಟ್ರೀಯ ಹೊಸ ಸಹಕಾರಿ ನೀತಿಯ ವರದಿಯನ್ನು ಈಗಾಗಲೇ ಕೇಂದ್ರ ಸರಕಾರಕ್ಕೆ ಒಪ್ಪಿಸಿದ್ದೇವೆ. ಕೇಂದ್ರ ಸರಕಾರ ಯಾವಾಗ ಬೇಕಾದರೂ ಇದರ ಘೋಷಣೆ ಮಾಡಬಹುದು. ಹೊಸ ನೀತಿಯಲ್ಲಿ ಡಿಜಿಟಲೀಕರಣ ಮತ್ತು ತಂತ್ರಜ್ಞಾನಕ್ಕೆ ಆದ್ಯತೆ ನೀಡಿದ್ದೇವೆ. ಯಾವುದೇ ಸಹಕಾರಿ ಸಂಸ್ಥೆಯು ಜಗತ್ತಿನ ತಂತ್ರಜ್ಞಾನದ ಸೌಲಭ್ಯವನ್ನು ಸುಲಭವಾಗಿ ಪಡೆಯುವಂತೆ ಆಗಬೇಕು.

ಕರ್ನಾಟಕದ ಮಾದರಿಯಲ್ಲಿ ಸಹಕಾರಿ ಕ್ಷೇತ್ರವು ಸ್ವಾಯತ್ತವಾಗಿ ಬೆಳೆಯಬೇಕು. ಮಾತ್ರವಲ್ಲದೇ ತೀರಾ ಅಗತ್ಯ ಎದುರಾದಾಗ ಮಾತ್ರ ಸರಕಾರ ಮಧ್ಯಪ್ರವೇಶ ಮಾಡಬೇಕು. ಸಹಕಾರಿ ವಲಯದ ಲಾಭ ಕೆಲವೇ ಕೆಲವರಿಗೆ ಆಗಬಾರದು. ಅದು ಸಮಾಜಕ್ಕೆ ಆಗಬೇಕು ಎಂಬ ನೆಲೆಯಲ್ಲಿ ಕೆಲವು ಶಿಫಾರಸು ಮಾಡಿದ್ದೇವೆ ಎಂದು ಸುರೇಶ್‌ ಪ್ರಭು ತಿಳಿಸಿದ್ದಾರೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.