Bangladesh; ರಕ್ತ ಕೊಟ್ಟೇವು, ಬಾಂಗ್ಲಾ ಬಿಡೆವು: ಬೀದಿಗಿಳಿದು ಹಿಂದೂಗಳ ಪ್ರತಿಭಟನೆ
ಅಲ್ಪಸಂಖ್ಯಾಕರಿಗೆ ಕಾನೂನಾತ್ಮಕ ರಕ್ಷಣೆ ಒದಗಿಸಲು ಆಗ್ರಹ
Team Udayavani, Aug 11, 2024, 6:45 AM IST
ಢಾಕಾ: “ಈ ದೇಶ ಯಾರಪ್ಪನ ಸ್ವತ್ತೂ ಅಲ್ಲ, ಈ ನಾಡಿಗಾಗಿ ನಾವು ರಕ್ತ ಹರಿಸಿದ್ದೇವೆ. ಅಗತ್ಯ ಬಿದ್ದರೆ ಮತ್ತೆ ದೇಶಕ್ಕಾಗಿ ರಕ್ತ ಚೆಲ್ಲಲು ಸಿದ್ಧರಿದ್ದೇವೆ. ಆದರೆ ಯಾವುದೇ ಕಾರಣಕ್ಕೂ ಬಾಂಗ್ಲಾವನ್ನು ತೊರೆಯುವುದಿಲ್ಲ’ ಹೀಗೆಂದು ಬಾಂಗ್ಲಾದಲ್ಲಿ ಅಲ್ಪಸಂಖ್ಯಾಕ ಹಿಂದೂಗಳು ಘೋಷಣೆ ಕೂಗುತ್ತಾ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ.
ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಸರಕಾರ ಪತನವಾಗುತ್ತಿದ್ದಂತೆಯೇ ಹಿಂದೂಗಳ ನಿವಾಸ, ಅಂಗಡಿ, ಉದ್ಯಮಗಳು ಹಾಗೂ ದೇವಾಲಯಗಳನ್ನು ಗುರಿಯಾಗಿಸಿ ಮೂಲಭೂತವಾದಿಗಳು ದಾಳಿ ನಡೆಸಿ ದ್ದರು. ದೇಶಾದ್ಯಂತ 52 ಜಿಲ್ಲೆಗಳಲ್ಲಿ ಅಲ್ಪಸಂಖ್ಯಾಕರ ವಿರುದ್ಧ 205ಕ್ಕೂ ಅಧಿಕ ದಾಳಿಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಢಾಕಾದ ಶಹಬಾಗ್ನಲ್ಲಿ ಹಿಂದೂ ಸಮುದಾಯಗಳ ಜನರು “ನಾವು ಯಾರು? ಬೆಂಗಾಲಿ-ಬೆಂಗಾಲಿ’, “ಹಿಂದೂಗಳನ್ನು ರಕ್ಷಿಸಿ’ ಎನ್ನುವಂಥ ಬರಹಗಳಿರುವ ಫಲಕಗಳನ್ನು ಹಿಡಿದು, “ಹರೇ ಕೃಷ್ಣ, ಹರೇ ಕೃಷ್ಣ’ ಎಂದು ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ.
ಬೇಡಿಕೆಗಳೇನು:ಅಲ್ಪಸಂಖ್ಯಾಕರ ರಕ್ಷಣೆಗಾಗಿ ಸಮಿತಿ ಹಾಗೂ ಅಲ್ಪಸಂಖ್ಯಾಕರ ಸಚಿವಾಲಯವನ್ನು ರಚಿಸುವಂತೆ ಹಾಗೂ ಅಲ್ಪಸಂಖ್ಯಾಕರ ಮೇಲಾಗುತ್ತಿ ರುವ ದೌರ್ಜನ್ಯಗಳನ್ನು ತಡೆಗಟ್ಟಲು ಕಠಿನ ಕಾನೂನು ಕ್ರಮ ರೂಪಿಸುವಂತೆಯೂ ಬೇಡಿಕೆ ಇಟ್ಟಿದ್ದಾರೆ. ಜತೆಗೆ ಸಂಸತ್ತಿನಲ್ಲಿ ಅಲ್ಪಸಂಖ್ಯಾಕರಿಗಾಗಿ ಶೇ.10 ಸ್ಥಾನ ಮೀಸಲು ಇಡಬೇಕು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.