Dharmasthala: ಪುಸ್ತಕದಿಂದ ಜ್ಞಾನ ವೃದ್ಧಿ , ಮಸ್ತಕ ವಿಕಸನ: ಹುಕ್ಕೇರಿ ಶ್ರೀ

ಧರ್ಮಸ್ಥಳದಲ್ಲಿ ಕೃತಿ ಬಿಡುಗಡೆ, ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಪುರಸ್ಕಾರ

Team Udayavani, Aug 11, 2024, 6:15 AM IST

Anche-Kunha

ಬೆಳ್ತಂಗಡಿ: ಸಾಧನೆ ಸಾಧಕರ ಸೊತ್ತು ಹೊರತು ಸೋಮಾರಿ ಗಳದ್ದಲ್ಲ. ವಿದ್ಯಾರ್ಥಿ ಜೀವನ ಮೌಲ್ಯ ಯುತವಾದುದು. ಡಿಜಿಟಲ್‌ ವ್ಯವಸ್ಥೆಯಡಿ ಇರುವ ಮಕ್ಕಳಿಗೆ ವ್ಯಕ್ತಿತ್ವ ವಿಕ ಸನಗೊಳಿಸುವಲ್ಲಿ ಸರಕಾರ ಮಾಡಬೇಕಾದ ಕೆಲಸವನ್ನು ಧರ್ಮಸ್ಥಳದ ವತಿಯಿಂದ ಡಾ| ಹೆಗ್ಗಡೆ ಮಾಡುತ್ತಿದ್ದಾರೆ ಎಂದು ಹುಕ್ಕೇರಿ ಮಠದ ಸದಾಶಿವ ಮಹಾಸ್ವಾಮೀಜಿ ನುಡಿದರು.

ಧರ್ಮಸ್ಥಳ ಮಹೋತ್ಸವ ಸಭಾ ಭವನದಲ್ಲಿ ಆ.10ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್‌ನಿಂದ ಪ್ರಕಟಿಸಿದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಜ್ಞಾನದರ್ಶಿನಿ ಮತ್ತು ಜ್ಞಾನವರ್ಷಿಣಿ ಕೃತಿಯನ್ನು ಬಿಡುಗಡೆಗೊಳಿಸಿ ಹಾಗೂ 21ನೇ ವರ್ಷದ ರಾಜ್ಯಮಟ್ಟದ ಅಂಚೆ- ಕುಂಚ ವಿಜೇತರಿಗೆ ಪುರಸ್ಕಾರ ನೀಡಿ ಮಾತನಾಡಿದರು. ಪುಸ್ತಕಗಳನ್ನು ಓದುವುದರಿಂದ ಜ್ಞಾನ ವೃದ್ಧಿಯೊಂದಿಗೆ ಮಸ್ತಕದ ವಿಕಾಸವೂ ಸಾಧ್ಯ. ಕಾಲಹರಣ ಮಾಡುವ ಮೊಬೈ ಲ್‌ ಬಳಕೆಯನ್ನು ಕಡಿಮೆ ಮಾಡಿ, ಉನ್ನತ ಸಾಧನೆಗೆ ಮುಂದಾಗಿ ಎಂದರು.

ಏಕಾಗ್ರತೆಗೆ ಒಲಿಯುವ ಕಲೆ
ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಮಾತ ನಾಡಿ, ಕಲೆಯನ್ನು ತಪಸ್ಸಿನಂತೆ ಏಕಾಗ್ರತೆ ಮತ್ತು ಸತತ ಪ್ರಯತ್ನದಿಂದ ಅಭ್ಯಾಸ ಮಾಡಿದರೆ ಉನ್ನತ ಸಾಧನೆ ಸಾಧ್ಯ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಡಿ.ಡಿ.ಪಿ.ಐ. ವೆಂಕಟೇಶ ಸುಬ್ರಾಯ ಪಟಗಾರ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಮಾನವೀಯತೆ ಇಲ್ಲದ ಜನ್ಮ ವ್ಯರ್ಥ. ಗುರು-ಹಿರಿಯರನ್ನು ಗೌರವಿಸುವುದು, ಸಮಾನ ಮನಸ್ಕರಲ್ಲಿ ಸ್ನೇಹಿತರಂತೆ ಪ್ರೀತಿ-ವಿಶ್ವಾಸದಿಂದ ವ್ಯವಹರಿಸುವುದು ಮುಖ್ಯ. ಎಸ್‌.ಡಿ.ಎಂ. ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ, ಶಿಸ್ತು ಮತ್ತು ಮಾನವೀಯ ಮೌಲ್ಯಗಳನ್ನೂ ಕಲಿಸಲಾಗುತ್ತದೆ ಎಂದರು.

ಡಿ. ಹರ್ಷೇಂದ್ರ ಕುಮಾರ್‌, ಸುಪ್ರಿಯಾ ಹರ್ಷೇಂದ್ರ ಕುಮಾರ್‌ ಮತ್ತು ಪೂರನ್‌ವರ್ಮ ಉಪಸ್ಥಿತ ರಿದ್ದರು. ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದ ಯೋಗ ನಿರ್ದೇಶಕ ಶಶಿಕಾಂತ್‌ ಜೈನ್‌, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯನ್ನು ಈ ವರ್ಷ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರಕ್ಕೂ ವಿಸ್ತರಿಸಲಾಗುವುದು ಎಂದರು. ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಾಧಕರಿಗೆ ಹೆಗ್ಗಡೆ ಅಭಿನಂದನೆ ಇದೇ ಸಂದರ್ಭದಲ್ಲಿ ಡಾ| ವೀರೇಂದ್ರ ಹೆಗ್ಗಡೆ ಅವರು ಒಲಿಂಪಿಕ್‌ ಸಾಧಕರನ್ನು ಅಭಿನಂದಿಸಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.