Tharun -Sonal Marriage: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್‌ವುಡ್‌ ಜೋಡಿ


Team Udayavani, Aug 11, 2024, 11:33 AM IST

01

ಬೆಂಗಳೂರು: ಸ್ಯಾಂಡಲ್‌ವುಡ್‌ (Sandalwood) ನಿರ್ದೇಶಕ ತರುಣ್‌ ಸುಧೀರ್‌(Tharun Sudhir), ಸೋನಲ್‌ ಮೊಂಥೆರೋ(Sonal Monteiro) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಶನಿವಾರ (ಆಗಸ್ಟ್‌ 10ರಂದು) ಬೆಂಗಳೂರಿನ ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಆರತಕ್ಷತೆ ನಡೆಯಿತು. ಈ ಕಾರ್ಯಕ್ರಮಕ್ಕೆ ಸ್ಯಾಂಡಲ್‌ ವುಡ್‌ ತಾರೆಯರು, ರಾಜಕೀಯ ಗಣ್ಯರು ಸೇರಿದಂತೆ ಹತ್ತಾರು ಮಂದಿ ಶುಭಕೋರಿ ನವ ಜೋಡಿಗೆ ಹಾರೈಸಿದ್ದರು.

ಭಾನುವಾರ(ಆ.11ರಂದು) ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಪೂರ್ಣಿಮಾ ಪ್ಯಾಲೇಸ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಹಿಂದೂ ಸಂಪ್ರದಾಯದಂತೆ ಎರಡು ಕುಟುಂಬದ ಗುರು – ಹಿರಿಯರ ಸಮ್ಮುಖದಲ್ಲಿ ನವಜೋಡಿ ಹೊಸ ಜೀವನಕ್ಕೆ ಕಾಲಿಟ್ಟರು.  ಬೆಳಗ್ಗೆ 10:50 ರಿಂದ 11:35 ಸಮಯದ ತುಲಾ ಲಗ್ನದಲ್ಲಿ ಮಾಂಗಲ್ಯ ಧಾರಣೆ ನೆರವೇರಿದೆ.

ಯಾರೆಲ್ಲಾ ಭಾಗಿಯಾಗಿದ್ದರು..?

ವಿವಾಹ ಕಾರ್ಯಕ್ರಮದಲ್ಲಿ ಹಿರಿಯ ನಟಿ ಶ್ರುತಿ, ಸುಧಾರಾಣಿ,‌ ಮಾಳವಿಕ ಅವಿನಾಶ್‌, ನಟ ಅವಿನಾಶ್‌, ಮೇಘನಾ ಗಾಂವ್ಕರ್‌, ಪ್ರೇಮ್‌, ಅಮೃತಾ ಪ್ರೇಮ್, ನಟಿ ನಿಶ್ವಿಕಾ ನಾಯ್ಡು, ನಟಿ ಆಶಿಕಾ ರಂಗನಾಥ್‌, ನಟ ಸಾಧುಕೋಕಿಲಾ, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ,ತೆಲುಗು ನಟ ಜಗಪತಿ ಬಾಬು, ನಟ ಶರಣ್‌, ಗೋಲ್ಡನ್‌ ಸ್ಟಾರ್‌ ಗಣೇಶ್‌, ನಟ ವಿನೋದ್‌ ರಾಜ್, ಗಾಯಕ ಚೇತನ್‌, ಗಾಯಕ ವಿಜಯ್‌ ಪ್ರಕಾಶ್ ಸೇರಿದಂತೆ ಹಲವು ಸ್ಯಾಂಡಲ್‌ ವುಡ್‌ ತಾರೆಯರು ಹಾಗೂ ಗಣ್ಯರು ಈ ಕ್ಷಣಕ್ಕೆ ಸಾಕ್ಷಿಯಾದರು.

ಮಂಗಳೂರು ಮೂಲದ ಸೋನಲ್‌ ಕೋಸ್ಟಲ್‌ ವುಡ್‌ ಚಿತ್ರರಂಗದಲ್ಲ ಮಿಂಚಿ, ಆ ಬಳಿಕ ಸ್ಯಾಂಡಲ್‌ ವುಡ್‌ ನಲ್ಲಿ ʼರಾಬರ್ಟ್‌ʼ, ʼಗರಡಿʼ, ʼಪಂಚತಂತ್ರʼದಂತಹ ಹಲವು ಸಿನಿಮಾಗಳಲ್ಲಿ  ಕಾಣಿಸಿಕೊಂಡು, ಬೇಡಿಕೆಯ ನಟಿಯಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.

ʼರಾಬರ್ಟ್‌ʼ ಸಿನಿಮಾದಲ್ಲಿ ವಿನೋದ್‌ ಪ್ರಭಾಕರ್‌ ಅವರಿಗೆ ಜೋಡಿಯಾಗಿ ಸೋನಲ್‌ ನಟಿಸಿದ್ದರು. ಈ ಸಿನಿಮಾವನ್ನು ತರುಣ್‌ ಸುಧೀರ್‌ ನಿರ್ದೇಶನ ಮಾಡಿದ್ದರು.

ಪ್ರೇಮ್‌ ಕಹಾನಿ ಶುರುವಾಗಿದ್ದು ಹೇಗೆ..?:  

ಈ ಸಿನಿಮಾದ ಸೆಟ್‌ ನಲ್ಲೇ ಇಬ್ಬರ ನಡುವೆ ಆತ್ಮೀಯತೆ ಬೆಳೆದಿದೆ ಎನ್ನಲಾಗಿದೆ. ತರುಣ್‌ ಸುಧೀರ್‌ ಗೆ ಮದುವೆ ಮಾಡಿಸಬೇಕೆಂದು ಆಗಾಗ ನಟ ದರ್ಶನ್‌ (Darshan Thoogudeepa) ತಮಾಷೆ ಮಾಡುತ್ತಿದ್ದರಂತೆ. ಸೋನಲ್‌ ಹಾಗೂ ತರುಣ್‌ ಇಬ್ಬರನ್ನು ತಮಾಷೆಯಾಗಿ ಮದುವೆ ವಿಚಾರವಾಗಿ ಮಾತನಾಡುತ್ತಿದ್ದರಂತೆ. ದರ್ಶನ್‌ ಅವರ  ಮಾತಿನ ನಂತರ ಇಬ್ಬರು ಮತ್ತಷ್ಟು ಆತ್ಮೀಯರಾಗಿದ್ದು, ಈ ಸಂದರ್ಭದಲ್ಲೇ ಸೋನಲ್‌ ಹಾಗೂ ತರುಣ್‌ ಅವರ ನಡುವೆ ಪ್ರೀತಿ ಹುಟ್ಟಿತ್ತು.

ತರುಣ್‌ ಸ್ವಾತಂತ್ರ್ಯ ಹೋರಾಟಗಾರ ಸಿಂಧೂರ ಲಕ್ಷ್ಮಣನ ಜೀವನಾಧರಿತ ಚಿತ್ರ ತಯಾರಿಯಲ್ಲಿದ್ದರೆ, ಇತ್ತ ಸೋನಲ್‌ ‘ಬುದ್ಧಿವಂತ-2’ ಹಾಗೂ ‘ಮಾರ್ಗರೆಟ್ ಲವರ್ ಆಫ್ ರಾಮಾಚಾರಿ’ ಸೇರಿದಂತೆ ಸಾಲು ಸಾಲು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

 

ಟಾಪ್ ನ್ಯೂಸ್

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

7-uv-fusion

UV Fusion: ಇಳೆಗೆ ಮಳೆಯ ಸುಮಪಾತದ ಸೊಗಸು

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

5-uv-fusion

UV Fusion: ರಕ್ಷಕರೇ ಭಕ್ಷಕರಾಗುತ್ತಿದ್ದಾರೆ ಎಚ್ಚರಿಕೆ

ಕೆಕೆಆರ್ ಡಿಬಿ ಗೆ ಕೇಂದ್ರದ ಅನುದಾನ ಕೋರಿ ನಿಯೋಗ: ಡಾ. ಅಜಯಸಿಂಗ್

Kalyana Karnataka; ಕೆಕೆಆರ್ ಡಿಬಿ ಗೆ ಕೇಂದ್ರದ ಅನುದಾನ ಕೋರಿ ನಿಯೋಗ: ಡಾ. ಅಜಯಸಿಂಗ್

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

11

Kannada Short Movie: ದುಡ್ಡಿನ ಸುತ್ತ ಜೋಕರ್‌ ಆಲ್ಬಮ್‌

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Ranaksha

Ranaksha: ಫ್ಯಾಮಿಲಿ ಡ್ರಾಮಾದಲ್ಲಿ ಸೀರುಂಡೆ ರಘು

Sarvasva Kannada video song

Sarvasva: ಹಾಡಲ್ಲಿ ʼಸರ್ವಸ್ವʼ ಕನಸು; ನವತಂಡದ ಪ್ರಯತ್ನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

8-uv-fusion

Rain: ಇಳೆ ತಂಪೆರೆವ ಮಳೆರಾಯ

7-uv-fusion

UV Fusion: ಇಳೆಗೆ ಮಳೆಯ ಸುಮಪಾತದ ಸೊಗಸು

6-uv-fusion

WhatsApp Status: ಬಳಕೆಯ ಅರಿವು ಮುಖ್ಯ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.