Aranthodu: ಕೂರ್ನಡ ಮುಳುಗು ಸೇತುವೆ ಶಿಥಿಲ
ದ.ಕ, ಕೊಡಗು, ಕಾಸರಗೋಡು ಸಂಪರ್ಕ ಕೊಂಡಿ ಮುರಿಯುವ ಭೀತಿ
Team Udayavani, Aug 11, 2024, 12:57 PM IST
ಅರಂತೋಡು: ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೂರ್ನಡ್ಕ ಹಾಗೂ ಕೊಡಗಿನ ಪೆರಾಜೆಯ ಸಂಪರ್ಕ ಸೇರಿದಂತೆ ಮೂರು ಜಿಲ್ಲೆಗಳ ಸಂಪರ್ಕ ಸೇತುವಾದ ಕೂರ್ನಡ್ಕದ ಮುಳುಗು ಸೇತುವೆ ಇದೀಗ ಶಿಥಿಲಗೊಂಡಿದೆ. ಭಾರೀ ಮಳೆಗೆ ಸೇತುವೆಗೆ ಹಾನಿಯಾಗಿದ್ದು, ಒಂದು ಭಾಗ ಕುಸಿದಿದೆ. ಈಗ ಇಲ್ಲಿ ಘನ ವಾಹನಗಳ ಸಂಚಾರ ಮಾಡದಂತೆ ಸೂಚಿಸಲಾಗಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಈ ಮುಳುಗು ಸೇತುವೆಯಲ್ಲಿ ಕಸ ಕಡ್ಡಿಗಳು ಸಿಲುಕಿದ್ದವು. ಸ್ಥಳೀಯರು ಕಸಕಡ್ಡಿಗಳನ್ನು ತೆರವು ಮಾಡಿ ತಾತ್ಕಾಲಿಕವಾಗಿ ದುರಸ್ತಿ ಮಾಡಿದ್ದಾರೆ. ಆದರೆ ಈ ಬಾರಿ ಸೇತುವೆಗೆ ದೊಡ್ಡ ಮಟ್ಟದ ಹಾನಿ ಸಂಭವಿಸಿದ್ದರಿಂದ ಇಲ್ಲಿ ಸರ್ವ ಋತು ಸೇತುವೆ ನಿರ್ಮಾಣ ಆಗಬೇಕು ಎಂಬ ಬೇಡಿಕೆಗೆ ಬಲ ಬಂದಿದೆ.
ಇಲಾಖೆಗಳಲ್ಲಿ ದಾಖಲಾತಿ ಇಲ್ಲ
ನಾಲ್ಕು ದಶಕಗಳ ಹಿಂದೆ ಸ್ಥಳೀಯರು ಸೇರಿ ಖರ್ಚು ಮಾಡಿ ನಿರ್ಮಿಸಿದ ಈ ಮುಳುಗು ಸೇತುವೆ ಇದು. ಮೊದಲು ಈ ಸೇತುವೆ ಮತ್ತು ರಸ್ತೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿತ್ತು. ಬಳಿಕ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ ಎನ್ನಲಾಗಿದೆ. ಆದರೆ ಈಗ ಇದರ ದಾಖಲೆಗಳು ಲೋಕೋಪಯೋಗಿ ಇಲಾಖೆಯಲ್ಲೂ ಇಲ್ಲ ಮತ್ತು ಜಿಲ್ಲಾ ಪಂಚಾಯತ್ ಇಲಾಖೆಯಲ್ಲೂ ಇಲ್ಲ ಎಂದು ಹೇಳಲಾಗುತ್ತಿದೆ.
ಮುಳುಗು ಸೇತುವೆ ಮಹತ್ವ
ಮೂರು ಜಿಲ್ಲೆಗಳ ಸಂಪರ್ಕ ಕಲ್ಪಿಸುವ ಕೂರ್ನಡ್ಕ ಹೊಳೆಗೆ ಈಗಿರುವುದು ಮುಳುಗು ಸೇತುವೆ.
ದಕ್ಷಿಣ ಕನ್ನಡದ ಆಲೆಟ್ಟಿ, ಕೊಡಗಿನ ಪೆರಾಜೆ ಹಾಗೂ ಕಾಸರಗೋಡಿನ ಪನತ್ತಡಿ ಪಂಚಾಯತ್ನ ಕಲ್ಲಪಳ್ಳಿ, ಕಮ್ಮಾಡಿ ಪ್ರದೇಶಗಳನ್ನು ಸಂಪರ್ಕಿಸುವ ರಸ್ತೆ ಇದು.
ಮಳೆಗಾಲದಲ್ಲಿ ಹೊಳೆ ತುಂಬಿ ಹರಿದರೆ ಸಂಪರ್ಕ ಕಡಿತಗೊಂಡು ಜನರಿಗೆ ಸಮಸ್ಯೆಯಾಗುತ್ತದೆ.
ಸೇತುವೆಯಲ್ಲಿ ಶಾಲಾ ವಾಹನಗಳು ಸೇರಿ ನೂರಕ್ಕೂ ಅಧಿಕ ವಾಹನಗಳು ದಿನವೂ ಓಡಾಡುತ್ತವೆ.
ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ನೂರಾರು ಮಂದಿಗೆ ಸಂಪರ್ಕ ಕೊಂಡಿ.
ಆಲೆಟ್ಟಿ, ಬಡ್ಡಡ್ಕ, ಕಲ್ಲಪಳ್ಳಿ, ಕಮ್ಮಾಡಿ ಭಾಗದಿಂದ ಹಾಗೂ ಪೆರಾಜೆ ಭಾಗದಿಂದ ಸಂಚಾರಕ್ಕೆ ಅಗತ್ಯ
ಕಲ್ಲು ಬಂಡೆ, ಮರ ಬಡಿದು ಹಾನಿ
ಕೂರ್ನಡ್ಕದ ಮುಳುಗು ಸೇತುವೆ ತೀರಾ ನಾದುರಸ್ತಿಯಲ್ಲಿದೆ. ಭಾರೀ ಮಳೆಗೆ ಮರ, ಕಲ್ಲು ಬಂಡೆ ಹರಿದುಬಂದು ಇನ್ನಷ್ಟು ಹಾನಿಯಾಗಿದೆ. ಮುಂಬರುವ ಮಳೆಗಾಲಕ್ಕೆ ಮೊದಲು ಇಲ್ಲಿ ನೂತನ ಸೇತುವೆ ನಿರ್ಮಾಣ ಮಾಡುವ ಬಹಳ ಅಗತ್ಯ ಇದೆ. ಹಲವು ವರ್ಷಗಳ ಬೇಡಿಕೆ ಈಡೇರಬೇಕಾಗಿದೆ.
– ಆಶೋಕ ಪೀಚೆ, ಆಲೆಟ್ಟಿ ಗ್ರಾಮಸ್ಥ
ಸೇತುವೆ ನಿರ್ಮಾಣ ಅಗತ್ಯ
ಈ ಮುಳುಗು ಸೇತುವೆಯನ್ನು ಕೆಡವಿ ಬೇರೆ ಸೇತುವೆ ನಿರ್ಮಾಣ ಮಾಡಬೇಕೆಂದು ಶಾಸಕರಿಗೆ, ಜಿಲ್ಲಾ ಪಂಚಾಯತ್, ಲೋಕೋಪಯೋಗಿ ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಸೇತುವೆ ಬಹಳ ನಾದುರಸ್ತಿಯಲ್ಲಿದ್ದು ಇಲ್ಲಿಗೆ ಅಗತ್ಯ ಸೇತುವೆ ನಿರ್ಮಾಣ ಆಗಬೇಕಾಗಿದೆ.
-ವೀಣಾ ವಸಂತ, ಅಲೆಟ್ಟಿ ಗ್ರಾ.ಪಂ. ಅಧ್ಯಕೆ
– ತೇಜೇಶ್ವರ್ ಕುಂದಲ್ಪಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು
Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು
Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Kalladka: ಹೊಟೇಲ್ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್
ಅಮ್ಮೆಮಾರ್ನಲ್ಲಿ ತಲವಾರು ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ಅಮಿತ್ ಸಿಂಗ್ ಭೇಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.