Bigg Boss Tamil: ಕಮಲ್ ಹಾಸನ್ ಜಾಗಕ್ಕೆ ಬರಲಿದ್ದಾರಾ ಈ ಜನಪ್ರಿಯ ನಟ?
Team Udayavani, Aug 11, 2024, 4:12 PM IST
ಚೆನ್ನೈ: ತಮಿಳು ಬಿಗ್ ಬಾಸ್ ಕಾರ್ಯಕ್ರಮ (Bigg Boss Tamil) ಆರಂಭಕ್ಕೂ ಮುನ್ನ ವೀಕ್ಷಕರಿಗೆ ಬಿಗ್ ಶಾಕ್ ಸಿಕ್ಕಿದೆ. ಕಳೆದ 7 ಸೀಸನ್ ಗಳಿಂದ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ಕಮಲ್ ಹಾಸನ್ ಈ ಬಾರಿ ಬಿಗ್ ಬಾಸ್ಗೆ ವಿರಾಮ ನೀಡಿದ್ದಾರೆ.
ಬಿಗ್ ಬಾಸ್ ಕಾರ್ಯಕ್ರಮವನ್ನು ಆಯಾ ಭಾಷೆಯಲ್ಲಿ ಖ್ಯಾತ ಕಲಾವಿದರು ನಿರೂಪಣೆ ಮಾಡುತ್ತಾರೆ. ತಮಿಳಿನಲ್ಲಿ ಕಮಲ್ ಹಾಸನ್ (KAMAL HASAN) ಕಳೆದ ಏಳು ಸೀಸನ್ ಗಳಿಂದ ನಿರೂಪಣೆ ಮಾಡುತ್ತಾ ಬಂದಿದ್ದಾರೆ. ಈ ಬಾರಿ ಅವರು ನಿರೂಪಣೆಯಿಂದ ಬ್ರೇಕ್ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: Actress Nikkita Ghag: ಬೆತ್ತಲೆ ಫೋಟೋ ಹಂಚಿಕೊಂಡು ʼಸೆನ್ಸಾರ್ʼ ಹಾಕಿದ ನಟಿ.!
ಕಮಲ್ ಹಾಸನ್ ಹೇಳಿದ್ದೇನು?:
ಕಳೆದ 7 ವರ್ಷಗಳಿಂದ ನಿಮ್ಮ ಮನೆಗಳಲ್ಲಿ ನಿಮ್ಮನ್ನು ತಲುಪುವ ಸೌಭಾಗ್ಯ ನನಗೆ ಸಿಕ್ಕಿದೆ. ನಿಮ್ಮ ಪ್ರೀತಿ ಪ್ರೋತ್ಸಾಹಕ್ಕೆ ನಾನು ಕೃತಜ್ಞನಾಗಿದ್ದೇನೆ. ನಿಮ್ಮೆಲ್ಲರ ಬೆಂಬಲವು ಬಿಗ್ ಬಾಸ್ ತಮಿಳನ್ನು ಭಾರತದ ಅತ್ಯುತ್ತಮ ರಿಯಾಲಿಟಿ ಶೋಗಳಲ್ಲಿ ಒಂದನ್ನಾಗಿ ಮಾಡಿದೆ. ಕಾರ್ಯಕ್ರಮ ನಿರೂಪಣೆಯ ಹಾದಿಯಲ್ಲಿ ನಾನು ಹತ್ತಾರು ಪಾಠಗಳನ್ನುನ ಕಲಿತಿದ್ದೇನೆ. ಕಾರ್ಯಕ್ರಮದಲ್ಲಿ ಇದುವರೆಗೆ ಕಾಣಿಸಿಕೊಂಡ ಎಲ್ಲಾ ಸ್ಪರ್ಧಿಗಳಿಗೆ ನಾನು ಧನ್ಯವಾದವನ್ನು ಹೇಳುತ್ತೇನೆ. ಹಾಗೂ ಈ ಅವಕಾಶವನ್ನು ಕೊಟ್ಟ ವಿಜಯ್ ಟಿವಿ, ಸಿಬ್ಬಂದಿಗಳಿಗೂ ನಾನು ಧನ್ಯವಾದ ಸಲ್ಲಿಸುತ್ತೇನೆ. ಈ ಸೀಸನ್ ದೊಡ್ಡ ಯಶಸ್ಸಾಗಲಿ ಎಂದು ನಾನು ಹಾರೈಸುತ್ತೇನೆ ಎಂದು ಅವರು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
ಕಮಲ್ ಹಾಸನ್ ಬಳಿಕ ಬಿಗ್ ಬಾಸ್ ಯಾರು ನಡೆಸಿಕೊಡುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಅವರ ಜಾಗಕ್ಕೆ ಖ್ಯಾತ ನಟ ವಿಜಯ್ ಸೇತುಪತಿ (Vijay Sethupathi) ಅವರನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದು ʼಲೆಟ್ಸ್ ಸಿನಿಮಾʼ ವರದಿ ತಿಳಿಸಿದೆ.
ಇದಲ್ಲದೆ ಖ್ಯಾತ ನಟ ಸಿಲಂಬರಸನ್ ಟಿಆರ್(Silambarasan TR) ಕೂಡ ಬಿಗ್ ಬಾಸ್ ತಮಿಳು ಸೀಸನ್ -8 ನಡೆಸಿಕೊಳ್ಳುವವರ ಲಿಸ್ಟ್ ನಲ್ಲಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಸಿಂಬು ʼಬಿಗ್ ಬಾಸ್ ಅಲ್ಟಿಮೇಟ್ʼ ಓಟಿಟಿ ಸೀಸನ್ನ್ನು ಹೋಸ್ಟ್ ಮಾಡಿದ್ದರು.
ಸದ್ಯ ಈ ಬಗ್ಗೆ ಮುಂದಿನ ದಿನಗಳಲ್ಲಿ ಕಾರ್ಯಕ್ರಮದ ಆಯೋಜಕರೇ ಅಧಿಕೃತವಾಗಿ ಮಾಹಿತಿ ನೀಡುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್ಬಾಸ್ʼ; ಕುತೂಹಲ ಹುಟ್ಟಿಸಿದ ಪ್ರೋಮೊ
BBK11: ಈ ಬಾರಿ ಬಿಗ್ ಬಾಸ್ ಮನೆಯೊಳಗೆ ಹೋಗೋರು ಇವರೇ? ಇಲ್ಲಿದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ
BBK-11: ಕೊನೆಗೂ ಬಿಗ್ ಬಾಸ್ ಆ್ಯಂಕರ್ ಮುಖ ರಿವೀಲ್… ಶೋ ಆರಂಭಕ್ಕೆ ಡೇಟ್ ಫಿಕ್ಸ್
Bigg Boss 18: ಬಿಗ್ಬಾಸ್ನಲ್ಲಿ ಭಾಗಿಯಾಗಲು ನಟನಿಗೆ 5 ಕೋಟಿ ಆಫರ್; ಯಾರೀತ?
Tv Actor Varun: ಪ್ರೀತಿಸಿ ದ್ರೋಹ, ಧಮ್ಕಿ; ನಟ ವರುಣ್ ಮೇಲೆ ಕೇಸ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ
Rummy Aata Movie: ಸೆ.20ರಿಂದ ರಮ್ಮಿ ಆಟ ಶುರು
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.