Ghataprabha Flood; ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕೆ ಸರ್ಕಾರ ಬದ್ಧ: ತಿಮ್ಮಾಪುರ

ರೈತರು-ಸಂತ್ರಸ್ತರು ಸರ್ಕಾರಕ್ಕೆ ಸಹಕಾರ ನೀಡಿ

Team Udayavani, Aug 11, 2024, 9:18 PM IST

Ghataprabha Flood; ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕೆ ಸರ್ಕಾರ ಬದ್ಧ: ತಿಮ್ಮಾಪುರ

ಮುಧೋಳ: ಘಟಪ್ರಭಾ ಪ್ರವಾಹದಿಂದ ಉಂಟಾಗಿರುವ ಹಾನಿಗೆ ಸೂಕ್ತ ಪರಿಹಾರ ಒದಗಿಸಲು ನಾನೂ ಸಹ ನಿರಂತರವಾಗಿ ಶ್ರಮಿಸುತ್ತಿದ್ದು, ರೈತರು ಹಾಗೂ ಸಂತ್ರಸ್ತರು ಸರ್ಕಾರದೊಂದಿಗೆ ಸಹಕಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪುರ ಮನವಿ ಮಾಡಿಕೊಂಡಿದ್ದಾರೆ.

ಸರ್ಕಾರದ ಮಟ್ಟದಲ್ಲಿ ಸಂತ್ರಸ್ತರಿಗೆ ಹಾಗೂ ಬೆಳೆಹಾನಿಯಾದ ರೆೈತರಿಗೆ ಎನ್‌ಡಿಆರ್‌ ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ಅನ್ವಯ ಪರಿಹಾರ ಒದಗಿಸುವ ಸಲುವಾಗಿ ಹಾಗೂ ಪರಿಹಾರ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸುವ ಸಲುವಾಗಿ ಆ. 6ರಂದು ನಗರದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ರೆೈತರು, ಸಂತ್ರಸ್ತರು ಹಾಗೂ ಅಧಿ ಕಾರಿಗಳೊಂದಿಗೆ ಸಭೆ ನಡೆಸಲಾಗಿದೆ.

ಸಭೆಯಲ್ಲಿ ರೆೈತರ ಬೇಡಿಕೆ ಆಲಿಸಲು ಮುಖ್ಯಮಂತ್ರಿಗಳನ್ನು ಮುಧೋಳ ನಗರಕ್ಕೆ ಕರೆತರಲು ಸಮಯ ಕೇಳಲಾಗುವುದು ಎಂದು ಭರವಸೆ ನೀಡಿದ್ದೆ. ಈ ಕಾರ್ಯದಲ್ಲಿ ನಾನು ನಿರತನಾಗಿದ್ದೇನೆ ಎಂದು ತಿಳಿಯಪಡಿಸುವೆ ಎಂದು ತಿಳಿಸಿದ್ದಾರೆ.

ಅಂದಿನ ಸಭೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅಶೋಕ ಕಿವಡಿ, ಕಾಂಗ್ರೆಸ್‌ ಮುಖಂಡ ಸದುಗೌಡ ಪಾಟೀಲ, ರೆೈತ ಮುಖಂಡರಾದ ಸುಭಾಷ ಶಿರಬೂರ, ದುಂಡಪ್ಪ ಲಿಂಗರಡ್ಡಿ, ದುಂಡಪ್ಪ ಯರಗಟ್ಟಿ, ಉಪವಿಭಾಗಾ ಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ್‌ ವಿನೋದ ಹತ್ತಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸಭೆಯಲ್ಲಿ ರೆೈತಮುಖಂಡರು ಸಕ್ರಿಯವಾಗಿ ಸ್ಪಂದನೆ ನೀಡಿದ್ದರು.

ಘಟಪ್ರಭಾ ಪ್ರವಾಹದಲ್ಲಿ 14 ದಿನಗಳ ಕಾಲ ನೀರು ನಿಂತ ಪರಿಣಾಮ ಕಬ್ಬು ಬೆಳೆ ಹಾನಿಯಾಗಿದೆ. ರೆೈತರ ನಷ್ಟ ತಗ್ಗಿಸುವ ಸಲುವಾಗಿ ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಪರಿಹಾರ ವಿತರಣೆ ಕುರಿತು ನೀರಾವರಿ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಕಾತರಕಿ-ಕಲಾದಗಿ ಸೇತುವೆಗೆ ಖುದ್ದು ಭೇಟಿ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾ ಧಿಕಾರಿಗಳೊಂದಿಗೆ ಚರ್ಚಿಸಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬಂದಾಗ ಪ್ರವಾಹ ಉಂಟಾಗುವುದಕ್ಕೆ ಕಾರಣವೇನು ಎಂಬುದನ್ನು ಅಧ್ಯಯನ ಮಾಡಿ ವರದಿ ನೀಡುವಂತೆ ನೀರಾವರಿ ಇಲಾಖೆ ಅ ಧಿಕಾರಿಗಳು ಹಾಗೂ ಕೆಬಿಜೆಎನ್‌ಎಲ್‌ ಅಧಿ ಕಾರಿಗಳಿಗೆ ಸೂಚನೆ ನೀಡಿರುವೆ. ಶೀಘ್ರ ನೀರಾವರಿ ಸಮಿತಿ ವರದಿ ಬರಲಿದ್ದು, ಆ ಬಳಿಕ ಪ್ರವಾಹ ತಡೆಗೆ ಯಾವ ರೀತಿ ಕ್ರಮ ಕೆೈಗೊಳ್ಳಬೇಕು ಎಂಬುದರ ಕುರಿತು ಚರ್ಚಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಕಾತರಕಿ-ನಿಂಗಾಪುರ ಬಳಿ ಬ್ಯಾರೇಜ್‌ ಅಗಲೀಕರಣ ಹಾಗೂ ಮುಧೋಳ-ಯಾದವಾಡ, ಚಿಂಚಖಂಡಿ ಸೇತುವೆ ಎತ್ತರಕ್ಕೆ ವರದಿ ಬಂದ ಬಳಿಕ ಕ್ರಮ ಕೆೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಘಟಪ್ರಭಾ ಪ್ರವಾಹದಿಂದ ಸಂತ್ರಸ್ತರಾದವರ ನೆರವಿಗೆ ನಮ್ಮ ಸರ್ಕಾರ ಸದಾ ಸಿದ್ದವಿದೆ. ರೆೈತರು ಹಾಗೂ ನೆರೆ ಸಂತ್ರಸ್ತರು ಎದೆಗುಂದದೆ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಪ್ರಕಟಣೆ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ನಾಳೆ‌‌‌ (ಆ. 12ರಂದು) ಮುಧೋಳ ಬಂದ್‌

ಮುಧೋಳ : ಘಟಪ್ರಭಾ ನದಿಯ ಪ್ರವಾಹದಲ್ಲಿ ಮುಳುಗಡೆಯಾಗಿರುವ ಬೆಳೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂಬ ಕೂಗು ಜೋರಾಗತೊಡಗಿದ್ದು, ಸರ್ಕಾರ ಹೋರಾಟಗಾರರ ಕೂಗಿಗೆ ಸ್ಪಂದಿಸುತ್ತಿಲ್ಲ ಎಂದು ಸೋಮವಾರ (ಆ. 12) ಮುಧೋಳ ಬಂದ್‌ ಮಾಡಿ ಉಗ್ರ ಹೋರಾಟ ನಡೆಸುವುದಾಗಿ ಪ್ರವಾಹಕ್ಕೊಳಗಾದ 30 ಗ್ರಾಮಗಳ ಸಂತ್ರಸ್ತರು, ರೆೈತರು ಒಮ್ಮತದ ನಿರ್ಧಾರ ಪ್ರಕಟಿಸಿದರು.

ನಗರದಲ್ಲಿ ಪ್ರವಾಹ ಸಂತ್ರಸ್ತರು ಹಾಗೂ ರೆೈತರ ಸಭೆಯಲ್ಲಿ ನಿರ್ಧಾರ ವ್ಯಕ್ತಪಡಿಸಿದ ಅವರು, ಆ.7ರಂದು ಸುರಿಯುವ ಮಳೆಯಲ್ಲಿಯೇ ನೆನೆದು ಹೋರಾಟ ಮಾಡಿದರೂ ಜನಪ್ರತಿನಿ ಧಿಗಳಾಗಲಿ, ಜಿಲ್ಲಾಡಳಿತವಾಗಲಿ ನಮ್ಮ ಹೋರಾಟಕ್ಕೆ ಸ್ಪಂದಿಸುವ ಕಾರ್ಯ ಮಾಡಿಲ್ಲ. ಅದಾದ ಬಳಿಕ ಅ.10ರವೆಗೆ ನಾವು ಸರ್ಕಾರಕ್ಕೆ ಗಡುವು ನೀಡಿದ್ದೆವು. ಆದರೆ ಸರ್ಕಾರ ನಮ್ಮ ಸಮಸ್ಯೆಗೆ ಧ್ವನಿಯಾಗುತ್ತಿಲ್ಲ. ಅದಕ್ಕಾಗಿ ಉಗ್ರ ಹೋರಾಟ ಅನಿವಾರ್ಯವಾಗಿದೆ.

ಸರ್ಕಾರ ಮುಂದಿನ ಅನಾಹುತಕ್ಕೆ ಎಡೆಮಾಡಿಕೊಡದೆ ನಮ್ಮ ಬೇಡಿಕೆಗೆ ಸ್ಪಂದಿಸಿ ಸಂತ್ರಸ್ತರ ಕಣ್ಣೀರು ಒರೆಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ದುಂಡಪ್ಪ ಯರಗಟ್ಟಿ, ಬಸವಂತ ಕಾಂಬಳೆ, ಮುತ್ತಪ್ಪ ಕೊಮಾರ, ಸುಭಾಸ ಶಿರಬೂರ, ಬಂಡು ಘಾಟಗೆ, ಸದಪ್ಪ ತೇಲಿ, ಮಹೇಶಗೌಡ ಪಾಟೀಲ, ಸುಗರಪ್ಪ ಅಕ್ಕಿಮರಡಿ, ತಿಮ್ಮಣ್ಣ ಬಟಕುರ್ಕಿ, ಸದಾಶಿವ ಇಟಗನ್ನವರ ಸೇರಿದಂತೆ ಇತರರು ಇದ್ದರು.

 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.