Wayanad ಭೂಕುಸಿತ: ಕೊಚ್ಚಿ ಹೋಗಿದ್ದ ಹಸುಗಳಲ್ಲಿ 9 ಹಸುಗಳು ವಾಪಸ್!

ಚಾಮರಾಜನಗರ ಮೂಲದ ಕುಟುಂಬದ ಗೋವುಗಳು.. ಉಳಿದವುಗಳಿಗಾಗಿ ಹುಡುಕಾಟ

Team Udayavani, Aug 11, 2024, 8:13 PM IST

1-aaa

ಚಾಮರಾಜನಗರ: ಕೇರಳದ ವಯನಾಡಿನ ಚೂರಲ್ಮಲಾದಲ್ಲಿ ನಡೆದ ಭೂಕುಸಿತದಿಂದ ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ಹಸುಗಳ ಪೈಕಿ 9 ಹಸುಗಳು ವಾಪಸ್ ಬಂದಿವೆ.

ಜು.29ರ ಮಧ್ಯರಾತ್ರಿಯ ಬಳಿಕ ಚೂರಲ್ಮಲಾದಲ್ಲಿ ನಡೆದ ಭೂಕುಸಿತ ಪ್ರವಾಹದಲ್ಲಿ ಚಾಮರಾಜನಗರ ಜಿಲ್ಲೆ ಮೂಲದ ವಿನೋದ್ ಮತ್ತು ಜಯಶ್ರೀ ಅವರ ಕುಟುಂಬದ 20 ಹಸುಗಳು ಕೊಚ್ಚಿಕೊಂಡು ಹೋಗಿದ್ದವು. ಇದೇ ಹಸುಗಳು ಜೋರಾಗಿ ಕೂಗಿಕೊಂಡ ಕಾರಣ ಮನೆಯಲ್ಲಿದ್ದವರಿಗೆ ಎಚ್ಚರವಾಗಿ, ಹೊರಗೆಬಂದು ಪ್ರವಾಹದಿಂದ ಪಾರಾಗಿದ್ದರು. ಆ ಸಂದರ್ಭದಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುಗಳ ಹಗ್ಗವನ್ನು ಬಿಚ್ಚಿ ಹಾಕಿದ್ದರು. ಆ ರಾತ್ರಿಯ ಕತ್ತಲಿನಲ್ಲಿ ಆ ಹಸುಗಳು ನೀರಿನಲ್ಲಿ ಕೊಚ್ಚಿಕೊಂಡು ಎತ್ತ ಹೋದವು ಎಂಬುದು ತಿಳಿದಿರಲಿಲ್ಲ.
ಇವರೆಲ್ಲ ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿದ್ದಾರೆ. ವಿನೋದ್ ಅವರು ಮೇಪ್ಪಾಡಿಯ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ. ವಿನೋದ್ ಕುಟುಂಬ ಗುಂಡ್ಲುಪೇಟೆಯಲ್ಲಿ, ಜಯಶ್ರೀ ಅವರ ಕುಟುಂಬ ಚಾ.ನಗರದಲ್ಲಿದೆ.

ಅಚ್ಚರಿ ಎಂಬಂತೆ ಶನಿವಾರ, ವಿನೋದ್ ಅವರ ಮನೆಯ ಪ್ರದೇಶದ ಹತ್ತಿರವಿರುವ ಟೀ ಎಸ್ಟೇಟ್‌ನಲ್ಲಿ ಮ್ಯಾನೇಜರ್ ಬಂಗಲೆ ಬಳಿ ವಿನೋದ್ ಹಾಗೂ ಜಯಶ್ರೀ ಅವರ 9 ಹಸುಗಳು ಕಾಣಿಸಿಕೊಂಡಿವೆ! ಅಲ್ಲಿ ಹುಲ್ಲು ಮೇಯುತ್ತಾ ನಿಂತಿದ್ದವು. ವಿಷಯ ತಿಳಿದು ವಿನೋದ್ ಸ್ಥಳಕ್ಕೆ ಹೋಗಿ ನೋಡಿ ತಮ್ಮ ಹಸುಗಳು ಎಂದು ಖಚಿತಪಡಿಸಿದ್ದಾರೆ. ಉಳಿದ ಹಸುಗಳು ಎಲ್ಲಿವೆ ಎಂಬುದು ಗೊತ್ತಾಗಿಲ್ಲ. ಅವುಗಳೂ ಮರಳಿ ಬರಬಹುದು ಎಂಬ ಆಶಾವಾದ ಕುಟುಂಬದಲ್ಲಿದೆ.

ಈ ಕುರಿತು ಉದಯವಾಣಿಯೊಂದಿಗೆ ಮಾತನಾಡಿದ ವಿನೋದ್, ನಮ್ಮನ್ನು ರಕ್ಷಿಸಿದ ಹಸುಗಳು ಕೊಚ್ಚಿಕೊಂಡು ಹೋದ ಘಟನೆಯಿಂದ ಮನೆಯವರೆಲ್ಲ ಬಹಳ ನೊಂದುಕೊಂಡಿದ್ದೆವು. ಈಗ ಹಸುಗಳು ಎಸ್ಟೇಟಿನಲ್ಲಿ ಸಿಕ್ಕಿರುವುದು ನಮಗೆ ಬಹಳ ಸಂತೋಷ ತಂದಿದೆ. ಕಾಳಜಿ ಕೇಂದ್ರದಿಂದ ತೆರಳಿ ಅವುಗಳಿಗೆ ಬಾಳೆ ಹಣ್ಣು ತಿನ್ನಿಸಿಬಂದೆ. ಬಂಗಲೆ ಪಕ್ಕದಲ್ಲೇ ಅವುಗಳ ಆಶ್ರಯ ಪಡೆದಿವೆ ಎಂದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.