Paris Olympics; ವೆಸ್ಟ್‌ ಇಂಡೀಸ್‌ ನ ಮಾಜಿ ವೇಗಿ ಪುತ್ರ ಅಮೆರಿಕದ ಹರ್ಡಲ್ಸ್‌ ಹೀರೋ


Team Udayavani, Aug 12, 2024, 6:30 AM IST

1-USAA

ಪ್ಯಾರಿಸ್‌: ಅಮೆರಿಕದ ರಾಯ್‌ ಬೆಂಜಮಿನ್‌ ಪ್ಯಾರಿಸ್‌ ಒಲಿಂಪಿಕ್ಸ್‌ನ 400 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ಚಾಂಪಿಯನ್‌ ಆದದ್ದು ಈಗ ಇತಿಹಾಸ. ಇವರ ಸಾಧನೆ ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ನಲ್ಲಿ ಭಾರೀ ಸಂಚಲನ ಮೂಡಿಸಿದೆ. ಕಾರಣ, ಈ ರಾಯ್‌ ಬೆಂಜಮಿನ್‌ ಬೇರೆ ಯಾರೂ ಅಲ್ಲ, ವಿಂಡೀಸ್‌ನ ಮಾಜಿ ವೇಗಿ ವಿನ್‌ಸ್ಟನ್‌ ಬೆಂಜಮಿನ್‌ ಅವರ ಪುತ್ರ!

“ಮಗನ ಸಾಧನೆಯಿಂದ ಬಹಳ ಹೆಮ್ಮೆಯಾಗಿದೆ. ಇದಕ್ಕಾಗಿ ಅವನು ಅದೆಷ್ಟು ಕಷ್ಟಪಟ್ಟಿದ್ದಾನೆಂಬುದು ನನಗೆ ಗೊತ್ತು. ಇವನ ಚಿನ್ನದ ಸಾಧನೆಯಿಂದ ಆ್ಯಂಟಿಗುವಾದಲ್ಲಿ ಹಬ್ಬದ ವಾತಾವರಣ ಮನೆಮಾಡಿದೆ. ರಾಯ್‌ ಬೆಂಜಮಿನ್‌ ಅಮೆರಿಕನ್‌. ಹೀಗಾಗಿ ಅಮೆರಿಕದವರಷ್ಟೇ ಸಡಗರ, ಖುಷಿ ನಮ್ಮದೂ ಆಗಿದೆ’ ಎಂಬುದಾಗಿ 59 ವರ್ಷದ ವಿನ್‌ಸ್ಟನ್‌ ಬೆಂಜಮಿನ್‌ ಹೇಳಿದರು. ಇವರ 6 ಮಕ್ಕಳಲ್ಲಿ ರಾಯ್‌ ಒಬ್ಬರು. ಈಗ 27 ವರ್ಷ. ಟೋಕಿಯೊ ಒಲಿಂಪಿಕ್ಸ್‌ನ 400 ಮೀ. ಹರ್ಡಲ್ಸ್‌ನಲ್ಲಿ ಬೆಳ್ಳಿ ಪದಕ ಜಯಿಸಿದ್ದರು. ಪ್ಯಾರಿಸ್‌ನಲ್ಲಿ ಇದು ಚಿನ್ನಕ್ಕೆ ಪರಿವರ್ತನೆಗೊಂಡಿದೆ.

ರಾಯ್‌ ಬೆಂಜಮಿನ್‌ ಆರಂಭದಲ್ಲಿ ಕ್ರಿಕೆಟ್‌, ಬಳಿಕ ಅಮೆರಿಕನ್‌ ಫುಟ್‌ಬಾಲ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಅಂತಿಮವಾಗಿ ಟ್ರ್ಯಾಕ್‌ ಸ್ಪರ್ಧೆಗಳಿಗೆ ಧುಮುಕಿದರು.

ಕೆರಿಬಿಯನ್‌ ಕ್ರಿಕೆಟ್‌ನ “ವೇಗದ ಬೌಲಿಂಗ್‌ ಯುಗ’ದ ಕೊನೆಯ ದಿನಗಳಲ್ಲಿ ವಿನ್‌ಸ್ಟನ್‌ ಬೆಂಜಮಿನ್‌ ವಿಂಡೀಸ್‌ ತಂಡದ ಪ್ರಮುಖ ಬೌಲರ್‌ ಆಗಿದ್ದರು. 1980-1990ರ ಅವಧಿ ಯಲ್ಲಿ 21 ಟೆಸ್ಟ್‌ ಹಾಗೂ 85 ಏಕದಿನ ಪಂದ್ಯಗಳನ್ನಾಡಿದ್ದರು. ಒಮ್ಮೆ ಇವರ ಎಸೆತಕ್ಕೆ ಸಂಜಯ್‌ ಮಾಂಜ್ರೇಕರ್‌ ಅವರಿಗೆ ಗಂಭೀರ ಏಟು ಬಿದ್ದಿತ್ತು.

ಮಗನ ಸಾಧನೆಯನ್ನವರು ಸ್ಟೇಡಿಯಂನಲ್ಲಿ ಕುಳಿತು ವೀಕ್ಷಿಸಿದ್ದರು. ತನ್ನ ಪಾಲಿಗೆ ಒಲಿಂಪಿಕ್ಸ್‌ ಅಂದರೆ ವಿಶ್ವಕಪ್‌ ಕ್ರಿಕೆಟ್‌ ಫೈನಲ್‌ ಇದ್ದಂತೆ ಎಂಬುದಾಗಿ ಹೋಲಿಕೆ ಮಾಡಿ ದ್ದಾರೆ. ಸದ್ಯ ಆ್ಯಂಟಿಗುವಾದಲ್ಲಿ ಕ್ರಿಕೆಟ್‌ ಅಕಾ ಡೆಮಿಯೊಂದನ್ನು ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.