Udupi ಭೂ ಕುಸಿತ ಪ್ರದೇಶಗಳಿಗೆ ಜಿಎಸ್ಐ ವಿಜ್ಞಾನಿಗಳ ಭೇಟಿ
Team Udayavani, Aug 12, 2024, 12:13 AM IST
ಉಡುಪಿ: ಜಿಲ್ಲೆಯಲ್ಲಿ ಸಂಭವಿಸಿದ್ದ ಭೂ ಕುಸಿತ ಪ್ರದೇಶಗಳಿಗೆ ಜಿಎಸ್ಐ (ಜಿಯಾಲಜಿಕಲ್ ಸರ್ವೇ ಆಫ್ ಇಂಡಿಯಾ) ಭೂ ವಿಜ್ಞಾನಿಗಳ ತಂಡ ಭೇಟಿ ನೀಡಿದೆ.
ಈ ತಂಡವು ಬೈಂದೂರು ತಾಲೂಕಿನ ಕೊಲ್ಲೂರು, ಶಿರೂರು, ಸೋಮೇಶ್ವರ, ಹಾಲಾಡಿ, ಹೆಬ್ರಿ ತಾಲೂಕಿನ ಕನ್ಯಾನ, ಕಾರ್ಕಳ ತಾಲೂಕಿನ ಮಾಳ ಪ್ರದೇಶಕ್ಕೆ ಭೇಟಿ ನೀಡಿದರು. ಹೆದ್ದಾರಿ ಅಭಿವೃದ್ಧಿಗಾಗಿ ಗುಡ್ಡವನ್ನು ಅಗೆದ ರೀತಿಯ ಬಗ್ಗೆ ಪರಿಶೀಲನೆ ನಡೆಸಿತು. ಮಾಳದಲ್ಲಿ ಮನೆಯ ಸಮೀಪ ಗುಡ್ಡ ಜರಿದಿರುವ ಬಗ್ಗೆ ಅಧ್ಯಯನ ನಡೆಸಿತು.
ಜಿಎಸ್ಐ ಬೆಂಗಳೂರು ಪ್ರಾದೇಶಿಕ ಕಚೇರಿ ಭೂ ವಿಜ್ಞಾನಿಗಳಾದ ಸೆಂಥಿಲ್ಕುಮಾರ್, ಸುವೇಶ್, ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ಸಂದೀಪ್ ಯು. ಮತ್ತು ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ತಂಡದಲ್ಲಿದ್ದರು.
ಸರಕಾರಕ್ಕೆ ವರದಿ: ಡಿಸಿ
ಜಿಲ್ಲೆಯ ಭೂ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿದ ಜಿಎಸ್ಐ ವಿಜ್ಞಾನಿಗಳ ತಂಡ ಪರಿಶೀಲನೆ ನಡೆಸಿದೆ. ಭೂಕುಸಿತಕ್ಕೆ ಕಾರಣ ಮತ್ತು ಪರಿಹಾರ ಕ್ರಮಗಳ ಬಗ್ಗೆ ತಂಡವು ವರದಿಯನ್ನು ಸರಕಾರಕ್ಕೆ ಸಲ್ಲಿಸಲಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.