Tourists; ಬಿಡುವು ಕೊಟ್ಟ ಮಳೆ: ಮಲ್ಪೆ ಬೀಚ್ನಲ್ಲಿ ಜನಸಂದಣಿ
Team Udayavani, Aug 12, 2024, 12:15 AM IST
ಮಲ್ಪೆ: ಎರಡು ಮೂರು ದಿನಗಳಿಂದ ಮಳೆ ಕೊಂಚ ಬಿಡುವು ಕೊಟ್ಟಿದ್ದು, ರವಿವಾರ ಶುಭ್ರ ವಾತಾವರಣ ಮತ್ತು ವಾರಾಂತ್ಯವಾಗಿದ್ದ ಹಿನ್ನೆಲೆಯಲ್ಲಿ ಮಲ್ಪೆ ಬೀಚ್ ಮತ್ತು ಸೀವಾಕ್ನಲ್ಲಿ ಜನಸಂದಣಿ ಕಂಡು ಬಂದಿದೆ.
ಎರಡು ದಿನಗಳಿಂದ ಕಡಲತೀರಕ್ಕೆ ಪ್ರವಾಸಿಗರು ಆಗಮಿಸುತ್ತಿದ್ದು, ರವಿವಾರ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರು. ಬೆಳಗ್ಗೆ ದೂರದ ಪ್ರವಾಸಿಗರು ಹಾಗೂ ಮಧ್ಯಾಹ್ನದ ಬಳಿಕ ಸ್ಥಳೀಯರು ಕುಟುಂಬ ಸಮೇತ ಬಂದು ಕಡಲತಡಿಯಲ್ಲಿ ಸಮಯ ಕಳೆದಿದ್ದಾರೆ. ಇಲ್ಲಿನ ಸೀ ವಾಕ್ನಿಂದ ಮುಖ್ಯ ಬೀಚ್ನ ವರೆಗೂ ಜನ ಸಂದಣಿ ಕಂಡುಬಂದಿದೆ.
ಬೀಚ್ನಲ್ಲಿ ಯಾರೂ ನೀರಿಗೆ ಇಳಿಯದಂತೆ ಎಚ್ಚರ ವಹಿಸಲಾಗಿದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ಕಡಲ ಅಬ್ಬರ ಹೆಚ್ಚಾಗಿರುವುದರಿಂದ ಪ್ರವಾಸಿಗರು ನೀರಿಗೆ ಇಳಿಯದಂತೆ ಪ್ರತೀವರ್ಷ ಮಳೆಗಾಲದಲ್ಲಿ ಬೀಚ್ ಉದ್ದಕ್ಕೂ ರಿಫ್ಲೆಕ್ಟೆಡ್ ಪಟ್ಟಿ ಮತ್ತು ಫಿಶ್ನೆಟ್ ತಡೆಬೇಲಿ ನಿರ್ಮಿಸಿ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಆದರೂ ಪ್ರವಾಸಿಗರು ಕದ್ದು ಮುಚ್ಚಿ ನೀರಿಗಿಳಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಸಿಬಂದಿಯನ್ನು ನೇಮಿಸಲಾಗಿದೆ. ಹಾಗಾಗಿ ಬೀಚಿಗೆ ಬಂದ ಪ್ರವಾಸಿಗರು ದೂರದಲ್ಲಿ ನೋಡಿ ತೃಪ್ತಿ ಪಟ್ಟುಕೊಳ್ಳುವಂತಾಗಿದೆ. ಬೀಚ್ನಲ್ಲಿ ತಡೆಬೇಲಿ ಅಗಸ್ಟ್ ಅಂತ್ಯದವರೆಗೂ ಇರಲಿದ್ದು, ಸೆಪ್ಟಂಬರ್ ಮೊದಲ ಅಥವಾ ಎರಡನೇ ವಾರದಲ್ಲಿ ನೀರಿನ ಒತ್ತಡವನ್ನು ನೋಡಿಕೊಂಡು ತೆಗೆಯಲಾಗುವುದು ಎಂದು ತಿಳಿದು ಬಂದಿದೆ.
ಖುಷಿ ಕೊಟ್ಟ ಕೈರಂಪಣಿ ಮೀನುಗಾರಿಕೆ
ಕೊಳ ಭಾಗದ ಕಡಲತೀರದಲ್ಲಿ ಸಾಂಪ್ರ ದಾಯಿಕ ಕೈರಂಪಣಿ ಮೀನುಗಾರಿಕೆ ನಿರತರಾದ ಮೀನುಗಾರರು ಮೀನಿಗೆ ಬಲೆ ಬೀಸುತ್ತಿದ್ದು, ಇದು ನೋಡುಗರಿಗೆ ಹೊಸ ಖುಷಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.