TungaBhadra Dam ರಕ್ಷಣೆಗೆ ಶತಪ್ರಯತ್ನ: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌

ಆಂಧ್ರ, ತೆಲಂಗಾಣದಿಂದ ಪರಿಣತರು ಎಲ್ಲ 32 ಗೇಟ್‌ಗಳ ದುರಸ್ತಿ

Team Udayavani, Aug 12, 2024, 7:20 AM IST

DK-Shivakumer

ಹೊಸಪೇಟೆ: ತುಂಗಭದ್ರಾ ಜಲಾಶಯದ ರಕ್ಷಣೆಗೆ ಶತಪ್ರಯತ್ನ ನಡೆಸಲಾಗುತ್ತಿದೆ. ನಾಲ್ಕೈದು ದಿನದೊಳಗೆ ಜಲಾಶಯದಲ್ಲಿ 53 ಟಿಎಂಸಿ ನೀರು ಉಳಿಸಲು ಕ್ರಮ ವಹಿಸಲಾಗುವುದು. ರೈತರಿಗೆ ನೀರು ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಪರಿಣತರ ತಂಡ ಜಲಾಶಯದ ಗೇಟ್‌ ದುರಸ್ತಿಗೆ ಕ್ರಮ ಕೈಗೊಂಡಿದೆ ಎಂದು ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಹೇಳಿದರು.

ತುಂಗಭದ್ರಾ ಜಲಾಶಯದ ವೈಕುಂಠ ಅತಿಥಿ ಗೃಹದಲ್ಲಿ ರವಿವಾರ ಸಭೆ ನಡೆಸಿದ ಬಳಿಕ ಅವರು ಮಾತನಾಡಿ, ಶನಿವಾರ ರಾತ್ರಿ 10.50ಕ್ಕೆ 19ನೇ ಗೇಟ್‌ ಮುರಿದು ಬಿದ್ದಿದೆ. ತತ್‌ಕ್ಷಣ ತುಂಗಭದ್ರಾ ಮಂಡಳಿ ಅ ಧಿಕಾರಿಗಳು ಈ ಭಾಗದ ಜಿಲ್ಲಾಡಳಿತಗಳಿಗೆ ಮಾಹಿತಿ ರವಾನಿಸಿದ್ದಾರೆ. ಈಗ ನಾವು ರೈತರನ್ನು ಬದುಕಿಸಬೇಕಿದೆ. ಜಲಾಶಯದಿಂದ ನೀರಾವರಿ ಮಾಡಲು ಎರಡೂ ಬೆಳೆಗಳಿಗೂ 115 ಟಿಎಂಸಿ ನೀರು ದೊರೆಯಬೇಕಿದೆ. ಈಗ ನಾವು 53 ಟಿಎಂಸಿ ನೀರು ಉಳಿಸಬೇಕಿದೆ. 19ನೇ ಗೇಟ್‌ ಜತೆಗೆ ಇನ್ನೂ 10 ಗೇಟ್‌ ದುರಸ್ತಿ ಕೆಲಸವೂ ನಡೆಯಲಿದೆ ಎಂದರು.

ಜಲಾಶಯದ 19ನೇ ಗೇಟ್‌ ಸೇರಿ ಜಲಾಶಯದ ಎಲ್ಲ ಗೇಟ್‌ಗಳ ದುರಸ್ತಿಗಾಗಿ ನಾರಾಯಣ ಎಂಜಿನಿಯರ್ಸ್‌, ಜೆಎಸ್‌ಡಬ್ಲ್ಯು ಸೇರಿದಂತೆ ಪರಿಣತರನ್ನು ಸಂಪರ್ಕಿಸಲಾಗಿದೆ. ಈಗಾಗಲೇ ಜಲಾಶಯದ ಹಳೇ ಮಾದರಿ ಕೂಡ ಪರಿಣತರಿಗೆ ನೀಡಲಾಗಿದೆ. ಹಳೇ ಮಾದರಿ ರೂಪಿಸಿದವರು ಕೂಡ ಆಗಮಿಸಲಿದ್ದಾರೆ. ನೀರಾವರಿ ಇಲಾಖೆಯ ಪರಿಣತರ ತಂಡ ಕೂಡ ಆಗಮಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ತರಲಾಗಿದೆ ಎಂದರು.

ಜಲಾಶಯದ 2 ಕಿಮೀ ಸುತ್ತಮುತ್ತ ಭದ್ರತೆ
ಎಲ್ಲ 32 ಗೇಟ್‌ಗಳಿಂದ ಒಟ್ಟು 98 ಸಾವಿರ ಕ್ಯುಸೆಕ್‌ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ. 19ನೇ ಗೇಟ್‌ನಿಂದಲೇ 38 ಸಾವಿರ ಕ್ಯುಸೆಕ್‌ ನೀರು ನದಿಗೆ ಬಿಡಲಾಗಿದೆ. ಟೆಕ್ನಿಕಲ್‌ ಟೀಂ ಕೆಲಸ ಮಾಡುತ್ತಿದೆ. ಮುಖ್ಯ ಎಂಜಿನಿಯರ್ಸ್‌ಗಳೂ ಇದ್ದಾರೆ. ಬೇರೆ ದುರಸ್ತಿ ಮಾದರಿಗಳನ್ನು ಪರಿಶೀಲಿಸಲಾಗುತ್ತಿದೆ. ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳ ನುರಿತ ತಜ್ಞರೂ ಇದ್ದಾರೆ. ದುರಸ್ತಿ ಕೆಲಸ ಪ್ರಾರಂಭವಾಗಿದೆ. ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು. ಜಲಾಶಯದ 2 ಕಿಮೀ ಸುತ್ತಮುತ್ತ ಭದ್ರತೆ ಕೈಗೊಳ್ಳಲಾಗುವುದು. ಟೆಕ್ನಿಕಲ್‌ ತಂಡ ಹೊರತುಪಡಿಸಿ ರಾಜಕಾರಣಿಗಳನ್ನು ಕೂಡ ಒಳ ಬಿಡಲಾಗುವುದಿಲ್ಲ. ಜಲಾಶಯದ ರಕ್ಷಣೆಗೆ ಆದ್ಯತೆ ನೀಡಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.