TungaBhadra Dam: ಅಚ್ಚುಕಟ್ಟು ರೈತರ 2ನೇ ಬೆಳೆ ಕನಸು ಭಗ್ನ
ಮುಂಗಾರು ಹಂಗಾಮಿನ ಭತ್ತದ ಬೆಳೆ ರೈತರ ಕೈ ಸೇರುವುದು ಅನುಮಾನ
Team Udayavani, Aug 12, 2024, 7:14 AM IST
ಗಂಗಾವತಿ: ಮುರಿದು ಬಿದ್ದಿರುವ ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ಗೇಟ್ ದುರಸ್ತಿಗೆ ಡ್ಯಾಂನಲ್ಲಿರುವ 105 ಟಿಎಂಸಿ ನೀರಿನ ಪೈಕಿ ಸುಮಾರು 60 ಟಿಎಂಸಿ ನೀರನ್ನು ನದಿಗೆ ಅನಿವಾರ್ಯವಾಗಿ ಬಿಡಬೇಕಿದ್ದು ಅಚ್ಚುಕಟ್ಟು ಪ್ರದೇಶದ ರೈತರ ಎರಡನೇ ಬೆಳೆಯ ಕನಸು ಭಗ್ನವಾಗಿದೆ.
4-5 ವರ್ಷಗಳಿಂದ ಒಂದಿಲ್ಲೊಂದು ಕಾರಣಕ್ಕಾಗಿ ಅಚ್ಚುಕಟ್ಟು ಪ್ರದೇಶದ ಕೊಪ್ಪಳ, ಬಳ್ಳಾರಿ, ವಿಜಯನಗರ, ರಾಯಚೂರು ಜಿಲ್ಲೆಗಳ ರೈತರು ಪೂರ್ಣಪ್ರಮಾಣದಲ್ಲಿ ಮುಂಗಾರು, ಬೇಸಗೆ ಬೆಳೆ ಪಡೆಯುವಲ್ಲಿ ವಿಫಲರಾಗಿದ್ದಾರೆ. ಸದ್ಯ ಕ್ರಸ್ಟ್ಗೇಟ್ ದುರಸ್ತಿ ಮಾಡಲು ಸಂಗ್ರಹವಾಗಿರುವ ನೀರಿನ ಪೈಕಿ 60 ಟಿಂಸಿ ನೀರು ನದಿಗೆ ಹರಿಸಬೇಕಿದೆ. ಈ ಬಾರಿ ಜುಲೈ ತಿಂಗಳಲ್ಲಿ ನೀರು ಕಾಲುವೆಗೆ ಹರಿಸಿದ್ದರಿಂದ ಅಚ್ಚುಕಟ್ಟು ಪ್ರದೇಶದಲ್ಲಿ ಶೇ. 80ರಷ್ಟು ಭೂಮಿಯಲ್ಲಿ ಭತ್ತದ ನಾಟಿ ಮಾಡಲಾಗಿದೆ. ಸಪ್ಟೆಂಬರ್-ಅಕ್ಟೋಬರ್ನಲ್ಲಿ ಜಲಾನಯನ ಪ್ರದೇಶದಲ್ಲಿ ಮಳೆಯಾಗದಿದ್ದರೆ ಮುಂಗಾರು ಹಂಗಾಮಿನ ಭತ್ತದ ಬೆಳೆ ರೈತರ ಕೈ ಸೇರುವುದು ಅನುಮಾನವಾಗಿದೆ.
7 ದಶಕಗಳ ಹಿಂದೆ ಮೈಸೂರು ರಾಜ್ಯ ಮತ್ತು ಹೈದರಾಬಾದ್ ನಿಜಾಮ ಸರಕಾರ ಯೋಜನೆ ರೂಪಿಸಿ ಅಂತಾರಾಜ್ಯ ಯೋಜನೆಯಡಿ ಈ ಡ್ಯಾಂ ನಿರ್ಮಿಸಲಾಗಿದೆ. ನೀರು ಹಂಚಿಕೆ, ಡ್ಯಾಂ ನಿರ್ವಹಣೆ ಜವಾಬ್ದಾರಿಯನ್ನು ಕೇಂದ್ರ ಸರಕಾರದ ನೇತೃತ್ವದಲ್ಲಿರುವ ಟಿಬಿ ಬೋರ್ಡ್ಗೆ ವಹಿಸಲಾಗಿದೆ. ಈ ಬೋರ್ಡ್ನಲ್ಲಿರುವ ಕಾರ್ಯದರ್ಶಿ ಸೇರಿ ಬಹುತೇಕ ಹುದ್ದೆಯಲ್ಲಿ ಆಂಧ್ರ ಮತ್ತು ತೆಲಂಗಾಣ ರಾಜ್ಯದ ನೀರಾವರಿ ಅಧಿಕಾರಿಗಳಿದ್ದಾರೆ. ಈ ಅಧಿಕಾರಿಗಳು ತಮ್ಮ ರಾಜ್ಯದ ನೀರಿನ ಪಾಲನ್ನು ಪಡೆಯುವಲ್ಲಿ ಮಾತ್ರ ಆಸಕ್ತಿ ತೋರುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.