Bangla ಸರಕಾರ ಪತನದ ಹಿಂದೆ ಅಮೆರಿಕದ ಕೈವಾಡ: ಮಾಜಿ ಪ್ರಧಾನಿ ಹಸೀನಾ ಆರೋಪ
ಅಮೆರಿಕಕ್ಕೆ ದ್ವೀಪ ಬಿಟ್ಟುಕೊಟ್ಟಿದ್ದರೆ ನನ್ನ...
Team Udayavani, Aug 12, 2024, 6:50 AM IST
ಢಾಕಾ: “ಬಾಂಗ್ಲಾದೇಶಕ್ಕೆ ಸೇರಿದ ಸೆಂಟ್ ಮಾರ್ಟಿನ್ ದ್ವೀಪವನ್ನು ಅಮೆರಿಕಕ್ಕೆ ಒಪ್ಪಿಸಿದ್ದಿದ್ದರೆ ಸರಕಾರ ಉಳಿ ಯುತ್ತಿತ್ತು’ ‘ ಹೀಗೆಂದು ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿಕೊಂಡಿ ದ್ದಾರೆ. ಈ ಮೂಲಕ ತಮ್ಮ ಸರಕಾರದ ಪತನದ ಹಿಂದೆ ಅಮೆರಿಕದ ಕೈವಾಡವಿದೆ ಎಂದು ಪರೋಕ್ಷವಾಗಿ ಆರೋಪಿಸಿದ್ದಾರೆ.
ದೇಶ ತೊರೆಯುವುದಕ್ಕೂ ಮುನ್ನ ರಾಷ್ಟ್ರವನ್ನುದ್ದೇಶಿಸಿ ಅವರು ಭಾಷಣ ಮಾಡಲು ಮುಂದಾಗಿದ್ದರೂ, ಸೇನೆ ಅದಕ್ಕೆ ಅವಕಾಶ ಕೊಟ್ಟಿರಲಿಲ್ಲ. ಆ ಭಾಷಣ ಪ್ರತಿ ಆಂಗ್ಲ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.
ಮಾರ್ಟಿನ್ ದ್ವೀಪವನ್ನು ಅಮೆರಿಕದ ಕೈಗೆ ಒಪ್ಪಿಸಿದ್ದಿ ದ್ದರೆ ನನ್ನ ಸರಕಾರ ಉಳಿಯುತ್ತಿತ್ತು. ವಿದ್ಯಾರ್ಥಿಗಳ ಶವಗಳ ಮೇಲೆ ಅಧಿಕಾರ ಸ್ಥಾಪಿಸಲು ಅವರು ಯೋಜಿ ಸಿದ್ದರು. ಬಂಗಾಲಕೊಲ್ಲಿಯ ಈಶಾನ್ಯ ಭಾಗದಲ್ಲಿರುವ ಸೆ.ಮಾರ್ಟಿನ್ ದ್ವೀಪದಲ್ಲಿ ಅಮೆರಿಕ ತನ್ನ ವಾಯುನೆಲೆಯನ್ನು ಸ್ಥಾಪಿಸಲು ಉದ್ದೇಶಿ ಸಿತ್ತು. ನಾನು ಎಂದಿಗೂ ಪ್ರತಿಭಟನಕಾ ರರನ್ನು ರಜಾಕಾರರು ಎಂದು ಕರೆದಿಲ್ಲ. ನನ್ನ ಮಾತುಗಳನ್ನು ತಿರುಚಲಾಗಿದೆ. ಬೇಕಿದ್ದರೆ ಅಂದಿನ ಭಾಷಣದ ಪೂರ್ಣ ವೀಡಿಯೋ ಪರಿಶೀಲಿಸಿ’ ಎಂದಿದ್ದಾರೆ. ಹಸೀನಾರ ಈ ಹೇಳಿಕೆಗೆ ಬಿ ಎನ್ಪಿ ಆಕ್ಷೇಪಿಸಿ, ಇದು ಅಸಂಬದ್ಧ ಹೇಳಿಕೆ ಎಂದಿದೆ.
ಮಾರ್ಟಿನ್ ದ್ವೀಪ ಎಲ್ಲಿದೆ?: ಬಂಗಾಲ ಕೊಲ್ಲಿಯ ಈಶಾನ್ಯದಲ್ಲಿರುವ 88.06 ಚ.ಕಿ.ಮೀ. ವ್ಯಾಪಿಯ ಈ ದ್ವೀಪ ಬ್ರಿಟಿಷ್ ಆಡಳಿತದಲ್ಲಿ ಭಾರತದ ಭಾಗವಾಗಿತ್ತು.
ಅಲ್ಪಸಂಖ್ಯಾಕರು, ಹಿಂದೂಗಳ ಮೇಲಿನ ದಾಳಿ ಹೇಯ: ಯೂನುಸ್
ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾಕರ ಮೇಲಿನ ದಾಳಿಯನ್ನು ಮಧ್ಯಂತರ ಸರಕಾರದ ಮುಖ್ಯಸ್ಥ ಮೊಹಮ್ಮದ್ ಯೂನುಸ್ ಖಂಡಿಸಿದ್ದಾರೆ. ಅಲ್ಪಸಂಖ್ಯಾ ಕರು ಈ ದೇಶದ ಪ್ರಜೆಗಳು. ಅವರ ಮೇಲೆ ದಾಳಿ ನಡೆಸುವುದು ಹೇಯ ಕೃತ್ಯ. ಅಲ್ಪಸಂಖ್ಯಾಕರಿಗೆ ರಕ್ಷಣೆ ಒದಗಿಸಬೇಕು’ ಎಂದಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿ, “ದೇಶವನ್ನು ರಕ್ಷಿಸಿದ ನಿಮಗೆ ಕೆಲವು ಅಲ್ಪಸಂಖ್ಯಾಕ ಕುಟುಂಬ ಗಳನ್ನು ರಕ್ಷಿಸಲು ಸಾಧ್ಯವಿಲ್ಲವೇ? ಎಂದು ಪ್ರಶ್ನಿಸಿದರು. ಮಾಜಿ ಪ್ರಧಾನಿ ಶೇಖ್ ಹಸೀನಾ ದೇಶ ತೊರೆದ ಬಳಿಕ ಹಿಂದೂಗಳ ಮೇಲೆ 205 ದಾಳಿ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.