Bitcoin Scam: ಹಳ್ಳ ಹಿಡಿಯುತ್ತಿದೆ ಬಿಟ್‌ ಕಾಯಿನ್‌ ಪ್ರಕರಣ

8 ಪ್ರಕರಣ ಪೈಕಿ 2 ರಲ್ಲಿ ಮಾತ್ರ ಅಂತಿಮ ವರದಿ, ಸದ್ಯಕ್ಕಿಲ್ಲ ಚಾರ್ಜ್‌ಶೀಟ್‌ ಸಲ್ಲಿಕೆ

Team Udayavani, Aug 12, 2024, 7:30 AM IST

Bitcoin

ಬೆಂಗಳೂರು: ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ “ಬಿಟ್‌ ಕಾಯಿನ್‌’ ಹಗರಣದಲ್ಲಿ ಬಿಟ್‌ ಕಾಯಿನ್‌ ವರ್ಗಾವಣೆಯಾಗಿರುವ ಬಗ್ಗೆ ಸಿಟ್ಜರ್‌ಲ್ಯಾಂಡ್‌ ಸೇರಿ 10ಕ್ಕೂ ಹೆಚ್ಚಿನ ದೇಶಗಳಿಂದ ಸೂಕ್ತ ಮಾಹಿತಿ ದೊರಕದೆ ಇಡೀ ಹಗರಣ ಹಳ್ಳಹಿಡಿಯುವ ಹಂತಕ್ಕೆ ತಲುಪಿದೆ.

ಹಗರಣ ಬೆಳಕಿಗೆ ಬಂದು ಇಲ್ಲಿಗೆ ಬರೋಬ್ಬರಿ 3 ವರ್ಷಗಳೇ ಉರುಳಿದರೂ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯು ಆಮೆಗತಿಯಲ್ಲಿ ಸಾಗಿದೆ. ಸಿಟ್ಜರ್‌ಲ್ಯಾಂಡ್‌, ಟರ್ಕಿ, ರಷ್ಯಾ, ದಕ್ಷಿಣ ಕೊರಿಯಾ, ಫಿನ್ಲಂಡ್‌, ಲುಕ್ಸಂಬರ್ಗ್‌, ಹಾಂಕಾಂಗ್‌, ಸಿಂಗಾಪುರ, ಇರಾನ್‌, ನೈಜೀರಿಯಾ, ಐರ್ಲೆಂಡ್‌, ಸೀಶೆಲ್ಸ್‌ ದೇಶಗಳಲ್ಲಿರುವ ಬಿಟ್‌ಕಾಯಿನ್‌ ಎಕ್ಸ್‌ಚೇಂಜ್‌ ಕಂಪೆನಿಗಳು, ಕ್ರಿಪ್ಟೋ ಎಕ್ಸ್‌ಚೇಂಜ್‌ಗಳು, ಇಂಟರ್‌ ನ್ಯಾಶನಲ್‌ ಎಕ್ಸ್‌ಚೇಂಜ್‌ಗಳಿಂದ ಕಾನೂನು ನಿಯಮಗಳನ್ವಯ ಸಾಕ್ಷ್ಯ ಸಿಗದಿರುವುದೇ ತನಿಖೆಗೆ ಭಾರೀ ಹಿನ್ನಡೆಯಾಗಿದೆ.

ಎಸ್‌ಐಟಿ ತಂಡವು ಇಂಟರ್‌ಪೋಲ್‌ ಮೂಲಕ ಬಿಟ್‌ ಕಾಯಿನ್‌ ವರ್ಗಾವಣೆ ಮಾಡಿರುವ ಸಾಕ್ಷ್ಯ ಕಲೆ ಹಾಕಲು ಪ್ರಯತ್ನಿಸುತ್ತಿದೆ. ಆದರೆ ವಿದೇಶಗಳಿಂದ ನಿಧಾನಗತಿಯಲ್ಲಿ ಮಾಹಿತಿ ದೊರಕುತ್ತಿರುವ ಹಿನ್ನೆಲೆಯಲ್ಲಿ ತನಿಖೆ ವಿಳಂಬವಾಗುತ್ತಿದೆ. ಮತ್ತೂಂದೆಡೆ ತ್ವರಿತಗತಿಯಲ್ಲಿ ತನಿಖೆ ಪೂರ್ಣಗೊಳಿಸುವಂತೆ ಸರಕಾರವು ಎಸ್‌ಐಟಿಗೆ ಇತ್ತೀಚೆಗೆ ಪತ್ರ ಕಳುಹಿಸಿ ಎಚ್ಚರಿಸಿದೆ.

2 ಕೇಸ್‌ನಲ್ಲಿ ಮಾತ್ರ ವರದಿ
ಹಗರಣದ ಸಂಬಂಧ ವಿವಿಧ ಪೊಲೀಸ್‌ ಠಾಣೆಗಳಲ್ಲಿ 8 ಪ್ರಕರಣ ದಾಖಲಾಗಿದೆ. ಈ ಪೈಕಿ ಬೆಂಗಳೂರಿನ ಅಶೋಕನಗರ ಹಾಗೂ ಕೆ.ಜಿ.ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಎಸ್‌ಐಟಿಯು ತನಿಖೆ ಪೂರ್ಣಗೊಳಿಸಿ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಪ್ರಕರಣದ ರೂವಾರಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಸೇರಿದಂತೆ 25ಕ್ಕೂ ಹೆಚ್ಚಿನ ಆರೋಪಿಗಳ ಹೇಳಿಕೆ ದಾಖಲಿಸುವ ಕಾರ್ಯ ಬಹುತೇಕ ಮುಕ್ತಾಯಗೊಂಡಿದೆ. ಬಿಟ್‌ ಕಾಯಿನ್‌ ಎಕ್ಸ್‌ಚೇಂಜ್‌ ಕುರಿತು ವಿದೇಶಗಳಿಂದ ಆಗಾಗ್ಗೆ ಬರುತ್ತಿರುವ ಮಾಹಿತಿ ಆಧಾರದಲ್ಲಿ ಎಸ್‌ಐಟಿ ತಂಡವು ಇದಕ್ಕೆ ಪೂರಕವಾದ ಸಾಕ್ಷ್ಯ ಸಂಗ್ರಹಿಸುತ್ತಿದೆ.

ಎಸ್‌ಐಟಿ “ಪರಿಣಿತರ ಮೊರೆ’
ಎಸ್‌ಐಟಿ ಅಧಿಕಾರಿಗಳು ಖಾಸಗಿ ತಾಂತ್ರಿಕ ಪರಿಣಿತರ ಮೊರೆ ಹೋಗಿದ್ದು ಅವರ ಸಲಹೆ ಮೇರೆಗೆ ಇನ್ನಷ್ಟು ಆಳಕ್ಕೆ ಹೋಗಿ ತನಿಖೆ ನಡೆಸಿ ಬಿಟ್‌ಕಾಯಿನ್‌ ಮೂಲಕ ನಡೆದಿರುವ ದುಡ್ಡಿನ ವ್ಯವಹಾರದ ಬಗ್ಗೆ ಕೆದಕುತ್ತಿದೆ.

ಏನಿದು ಬಿಟ್‌ಕಾಯಿನ್‌ ಹಗರಣ?
2020ರಲ್ಲಿ ಬಿಟ್‌ಕಾಯಿನ್‌ ಹಗರಣದ ಸುಳಿವು ಸಿಕ್ಕಿ ಬೆಂಗಳೂರಿನ ಕಾಟನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಶ್ರೀಕಿ ಸೇರಿ ಐವರ ವಿರುದ್ಧ ಎಫ್ಐಆರ್‌ ದಾಖಲಾಗಿತ್ತು. ಆರೋಪಿಗಳು ಹಲವಾರು ವೆಬ್‌ಸೈಟ್‌ಗಳು, ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್‌, ಗೇಮಿಂಗ್‌ ಪೋರ್ಟಲ್‌ಗ‌ಳನ್ನು ಹ್ಯಾಕ್‌ ಮಾಡಿ ಅಕ್ರಮವಾಗಿ ಕೋಟ್ಯಂತರ ರೂ. ಲಪಟಾಯಿಸಿರುವುದು ತನಿಖೆಯಲ್ಲಿ ಕಂಡು ಬಂದಿತ್ತು. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಜಾಲಗಳು ಪ್ರಕರಣದಲ್ಲಿ ಶಾಮೀಲಾಗಿರುವುದು, ಸೈಬರ್‌ನಲ್ಲಿ ಪರಿಣತಿ ಹೊಂದಿದ್ದ ಹಗರಣದ ಆರೋಪಿಗಳು ಡಾರ್ಕ್‌ನೆಟ್‌ನಲ್ಲಿ ಡೀಲ್‌ ಕುದುರಿಸಿರುವುದು ಪತ್ತೆಯಾಗಿತ್ತು. 2023ರ ಜೂನ್‌ 30ರಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ ರಚಿಸಿದ್ದರು.

“ಬಿಟ್‌ ಕಾಯಿನ್‌ ಎಕ್ಸ್‌ಚೇಂಜ್‌ ಕುರಿತು ನಾವು ಕೇಳಿರುವ ಮಾಹಿತಿಗಳು ಹಲವು ದೇಶಗಳಿಂದ ಬರಲು ಬಾಕಿ ಇದೆ. ಶೀಘ್ರದಲ್ಲಿ ಚಾರ್ಜ್‌ಶೀಟ್‌ ಸಲ್ಲಿಸುವ ಸಾಧ್ಯತೆಗಳಿಲ್ಲ. ಹೀಗಾಗಿ ಪ್ರಕರಣದ ತನಿಖೆಯಲ್ಲಿ ಯಾವುದೇ ಮಹತ್ವದ ಬೆಳವಣಿಗೆ ಇಲ್ಲ. ಪ್ರಮುಖ ಆರೋಪಿ ಶ್ರೀಕಿ ಅಲಿಯಾಸ್‌ ಶ್ರೀಕೃಷ್ಣ ವಿಚಾರಣೆ ಬಹುತೇಕ ಮುಗಿದಿದೆ.”  -ಮನೀಷ್‌ ಕರ್ಬೀಕರ್‌, ಎಸ್‌ಐಟಿ ತಂಡದ ಮುಖ್ಯಸ್ಥ

– ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.