Daily Horoscope; ಈ ರಾಶಿಯವರಿಂದು ಅನವಶ್ಯವಾಗಿ ಯಾರಿಗೂ ಸಲಹೆ ನೀಡದಿರಿ
Team Udayavani, Aug 12, 2024, 7:17 AM IST
12-08-2024
ಮೇಷ: ಚುರುಕು ಬುದ್ಧಿಯನ್ನು ಕಾಯ್ದುಕೊಳ್ಳಲು ಸಹಕಾರಿಯಾಗುವ ಸನ್ನಿವೇಶಗಳು. ಸರಕಾರಿ ಉದ್ಯೋಗಸ್ಥರಿಗೆ ಬದಲಾಗದ ಅನುಭವ. ಸಣ್ಣ ಉದ್ಯಮಿಗಳಿಗೆ ಹೊಸ ಸಮಸ್ಯೆಗಳು. ದೀರ್ಘಾವಧಿ ಹೂಡಿಕೆಗಳಲ್ಲಿ ಲಾಭ.
ವೃಷಭ: ಉದ್ಯೋಗಸ್ಥರೆದುರು ವಿಶಿಷ್ಟ ಅವಕಾಶಗಳು. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಲಾಭ. ವೃತ್ತಿಪರಿಣತರಿಗೆ ಉದ್ಯೋಗಾವಕಾಶ. ಕುಟುಂಬದಲ್ಲಿ ಸಾಮರಸ್ಯ ವೃದ್ಧಿ. ಎಲ್ಲರಿಗೂ ಉತ್ತಮ ಆರೋಗ್ಯ ಭಾಗ್ಯ.
ಮಿಥುನ: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ. ತಪ್ಪು ತಿಳಿವಳಿಕೆಯಿಂದ ಅನವಶ್ಯ ವೈಮನಸ್ಯದ ಸಾಧ್ಯತೆ. ಅನವಶ್ಯವಾಗಿ ಯಾರಿಗೂ ಸಲಹೆ ನೀಡದಿರಿ. ಯುವಜನರಿಗೆ ವೃತ್ತಿಪರ ಶಿಕ್ಷಣ ಆಯೋಜನೆ. ಸಂಸಾರದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.
ಕರ್ಕಾಟಕ: ನೇರ ಮಾರ್ಗದ ನಡೆಯಿಂದ ಕಾರ್ಯಸಾಧನೆ. ಉದ್ಯೋಗಸ್ಥರಿಗೆ ವೇತನ ಏರಿಕೆ. ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ಲಭ್ಯ. ಸರಕಾರಿ ಆಸ್ಪತ್ರೆಗಳ ಸುಧಾರಣೆಗೆ ಪ್ರಯತ್ನ ಮುಂದುವರಿಕೆ. ಮಹಿಳೆಯರ ಸ್ವ ಉದ್ಯೋಗ ಯೋಜನೆ ಉತ್ಪನ್ನಗಳಿಗೆ ಕೀರ್ತಿ.
ಸಿಂಹ: ಒಂದಕ್ಕಿಂತ ಹೆಚ್ಚು ವ್ಯವಹಾರಗಳಿಗೆ ಏಕಕಾಲದಲ್ಲಿ ಗಮನ ಹರಿಸಲು ಒತ್ತಡ. ಉದ್ಯೋಗಸ್ಥರಿಗೆ ಆರ್ಥಿಕ ಲಾಭ ನೀಡದ ಪದೋನ್ನತಿ. ಉದ್ಯಮಕ್ಕೆ ನವಚೈತನ್ಯ ನೀಡುವ ಪ್ರಕ್ರಿಯೆ. ಪರಿಣತರ ಸಲಹೆಯಂತೆ ಹೊಸ ಕ್ರಮಗಳು.
ಕನ್ಯಾ: ಉದ್ಯೋಗಸ್ಥರಿಗೆ ಸುಲಭವಾದ ಕಾರ್ಯ ನಿರ್ವಹಣೆ. ಸಂಸ್ಥೆಯ ಪ್ರಮುಖರಿಂದ ನೌಕರರಿಗೆ ಪುರಸ್ಕಾರ. ಹಿರಿಯರ ಆಸ್ತಿಯಲ್ಲಿ ಕೃಷಿ ಪ್ರಯೋಗ ಯಶಸ್ಸಿನತ್ತ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ.
ತುಲಾ: ಉದ್ಯೋಗಸ್ಥರಿಗೆ ಮುಂದುವರಿದ ಹಿತ ಶತ್ರುಗಳ ಕಾಟ. ಉದ್ಯಮಿಗಳಿಗೆ ಎದುರಾಳಿಗಳ ಪೈಪೋಟಿ ಶಮನ. ಉದ್ಯೋಗ ಅರಸುವವರಿಗೆ ಆಶಾದಾಯಕ ವಾತಾವರಣ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.
ವೃಶ್ಚಿಕ: ಉದ್ಯೋಗಸ್ಥರ ಸ್ಥಾನ ಗೌರವ ಭದ್ರ. ಸರಕಾರಿ ಅಧಿಕಾರಿಗಳಿಗೆ ನಿಶ್ಚಿಂತೆ. ರಾಜಕಾರಣಿಗಳ ಹೆಸರು ಕೆಡಿಸುವ ಪ್ರಯತ್ನ ವಿಫಲ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಸಂಸಾರದಲ್ಲಿ ವಿರಸ ಬೆಳೆಸುವ ಪ್ರಯತ್ನ ವಿಫಲ.
ಧನು: ಪಟ್ಟು ಬಿಡದ ಪ್ರಯತ್ನದಿಂದ ಘಟಕದ ಕಾರ್ಯವೈಖರಿ ಸುಧಾರಣೆ. ಉದ್ಯಮದ ವೈವಿಧ್ಯೀಕರಣ ಯೋಜನೆಯಲ್ಲಿ ಮುನ್ನಡೆ.ಮಕ್ಕಳ ಅಧ್ಯಯನಾಸಕ್ತಿ ಹಾಗೂ ಪ್ರತಿಭೆ ವಿಕಸನಕ್ಕೆ ಪ್ರೋತ್ಸಾಹ. ಎಲ್ಲರಿಗೂ ಉತ್ತಮ ಆರೋಗ್ಯ.
ಮಕರ: ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಸೂಚನೆಗಳು. ಉದ್ಯೋಗಸ್ಥರ ಕಾರ್ಯಸಾಮರ್ಥ್ಯಕ್ಕೆ ಹೊಸ ಸವಾಲುಗಳು. ಉದ್ಯಮಿಗಳಿಗೆ ಹಠಾತ್ ನಷ್ಟದ ಭೀತಿ. ಯಂತ್ರೋಪಕರಣ ಉದ್ಯಮಿಗಳಿಗೆ ಅನುಕೂಲದ ವಾತಾವರಣ.
ಕುಂಭ: ಸಪ್ತಾಹ ಆರಂಭದಲ್ಲಿ ಮುಂದೆ ಸಾಗುವ ಕೆಲಸ, ಕಾರ್ಯಗಳು. ಉದ್ಯೋಗಸ್ಥರಿಗೆ ಹಿತ ಕರವಾದ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆಯ ಅನುಭವ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಿಂದ ಲಾಭ.
ಮೀನ: ಅತಿಯಾದ ಪ್ರೋತ್ಸಾಹಕ ವಾತಾವರಣ ಕಾಣಿಸದಿದ್ದರೂ ಯಶಸ್ಸು ಲಭ್ಯ. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಯಶಸ್ವಿ. ಪರಿಸರ ಸುಧಾರಣೆಯ ಸಾಮೂಹಿಕ ಕಾರ್ಯಗಳಲ್ಲಿ ಸಕ್ರಿಯ ಪಾತ್ರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.