Mudhol: ಕೃಷಿಯಲ್ಲೇ ಖುಷಿ ಕಂಡ ಪದವೀಧರರು

ಮಾದರಿ ಕೃಷಿಗೆ ಹೆಸರಾದ ಜಾಲಿಬೇರಿ ಚವಾಣ್‌ ಸಹೋದರರು; ತರಕಾರಿ ಬೆಳೆಯಿಂದ ಲಕ್ಷಾಂತರ ರೂ. ಲಾಭ

Team Udayavani, Aug 12, 2024, 11:02 AM IST

ಕೃಷಿಯಲ್ಲೇ ಖುಷಿ ಕಂಡ ಪದವೀಧರರು

ಮುಧೋಳ: ಕಾಲೇಜು ಮೆಟ್ಟಿಲು ಹತ್ತಿದರೆ ಸಾಕು ಸರ್ಕಾರಿ ನೌಕರಿ, ನಗರ ಜೀವನ ಬಯಸುವ ಇಂದಿನ ದಿನಮಾನದಲ್ಲಿ ಒಂದೇ ಮನೆಯಲ್ಲಿನ ಮೂವರೂ ಸಹೋದರರು ಪದವಿ ಪೂರೈಸಿದರೂ ಯಾವುದೇ ನೌಕರಿಯ ವ್ಯಾಮೋಹಕ್ಕೆ ಒಳಗಾಗದೆ ಕೃಷಿಯಲ್ಲಿಯೇ ಲಾಭದಾಯಕ ಹಾಗೂ ನೆಮ್ಮದಿ ಜೀವನ ಕಂಡುಕೊಂಡು ಇತರರಿಗೆ ಮಾದರಿಯಾಗಿದ್ದಾರೆ.

ಜಾಲಿಬೇರಿ ಗ್ರಾಮದ ಚವಾಣ್‌ ಸಹೋದರರಾದ ತಾತ್ಯಾ, ಗೋವಿಂದ ಹಾಗೂ ವಿನೋದ ಚವಾಣ್‌ ಸಹೋದರರು ತಮ್ಮ ಸ್ವಂತ ಜಮೀನಿನಲ್ಲಿ ಕೃಷಿ ಮಾಡುತ್ತ ಅದರಲ್ಲೂ ಮುಖ್ಯವಾಗಿ ತರಕಾರಿ ಬೆಳೆಯತ್ತ ಲಾಭದಾಯಕ ಜೀವನ ನಡೆಸುತ್ತಿದ್ದಾರೆ.

ತಂದೆ ನಾರಾಯಣ ಚವಾಣ್‌ ಅವರು ಮೊದಲಿನಿಂದಲೂ ತರಕಾರಿ ಬೆಳೆ ಬೆಳೆದು ಜೀವನ ಸಾಗಿಸುತ್ತಿದ್ದರು. ಅವರ ಹಾದಿಯಲ್ಲಿಯೇ ಸಾಗಿರುವ ಮೂವರು ಸಹೋದರರು ತಮ್ಮ ಮೂರು ಎಕರೆ ಜಮೀನಿನಲ್ಲಿ ಟೊಮ್ಯಾಟೋ, ಹೀರೆ, ಸವತಿ ಹಾಗೂ ಬೆಂಡೆ ತರಕಾರಿ ಬೆಳೆದು ಪ್ರತಿನಿತ್ಯ ಸಾವಿರಾರು ರೂ. ಸಂಪಾದಿಸುತ್ತಿದ್ದಾರೆ.

ಮೂವರೂ ಪದವೀಧರರೇ: ಚವಾಣ್‌ ಸಹೋದರರಲ್ಲಿ ಹಿರಿಯವನಾದ ತಾತ್ಯಾ ಬಿ.ಎ ಪದವಿ ಮುಗಿಸಿದ್ದಾರೆ. ಇನ್ನೋರ್ವ ಸಹೋದರ ಗೋವಿಂದ ಹಾಗೂ ವಿನೋದ ಬಿಕಾಂ ಪದವಿ ಪೂರ್ಣಗೊಳಿಸಿ ನೌಕರಿಯ ಹಂಬಲ ತೊರೆದು ದೀರ್ಘಾವಧಿ ಬೆಳೆಯಾದ ಕಬ್ಬು ಹಾಗೂ ಅಲ್ಪಾವಧಿ ಬೆಳೆಯಾದ ತರಕಾರಿಯ ಬೆಳೆದು ಕೃಷಿಯಲ್ಲಿಯೇ ನೆಮ್ಮದಿ ಜೀವನ ಕಂಡುಕೊಂಡಿದ್ದಾರೆ. ದಿನಂಪ್ರತಿ ತರಕಾರಿ ವಿಲೇವಾರಿ, ಔಷಧಿ ಸಿಂಪಡಣೆ, ಕಟಾವು ಸೇರಿದಂತೆ ಎಲ್ಲ ಬಗೆಯ ಕೆಲಸಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಾರೆ.

ತಾವು ಕಟಾವು ಮಾಡಿದ ತರಕಾರಿಯನ್ನು ಮುಧೋಳ, ಜಮಖಂಡಿ, ಬೀಳಗಿ ಹಾಗೂ ಬಾಗಲಕೋಟೆ ಮಾರುಕಟ್ಟೆಗೆ ಸಾಗಿಸಿ ಹೆಚ್ಚಿನ ಲಾಭಗಳಿಸುತ್ತಾರೆ. ಪ್ರತಿನಿತ್ಯ 8-10 ಮಹಿಳಾ ಕೃಷಿ ಕಾರ್ಮಿಕರೊಂದಿಗೆ ತರಕಾರಿ ಕಟಾವಿನಲ್ಲಿ ತೊಡಗುವ ಸಹೋದರರು ಸರಿಯಾದ ಸಮಯಕ್ಕೆ ಮಾರುಕಟ್ಟೆಗೆ ತಲುಪಿಸಿ ತಾಜಾ ತರಕಾರಿ ಮಾರಾಟಕ್ಕೆ ಹೆಸರುವಾಸಿಯಾಗಿದ್ದಾರೆ.

ಕಬ್ಬಿಗೆ ಪೂರಕ ಬೆಳೆ: ಒಟ್ಟು 16 ಎಕರೆ ಜಮೀನು ಹೊಂದಿರುವ ಚವಾಣ್‌ ಸಹೋದರರು ತರಕಾರಿ ಯನ್ನು ಕಬ್ಬಿಗೆ ಪೂರಕ ಬೆಳೆಯೆಂಬಂತೆ ಬೆಳೆಯುತ್ತಾರೆ. ವರ್ಷಪೂರ್ತಿ ಕಬ್ಬಿನಿಂದ ಮುಚ್ಚಿರುವ ಭೂಮಿಯಲ್ಲಿ ಕೆಲ ವರ್ಷ ತರಕಾರಿ ಬೆಳೆದು ಭೂಮಿಯಲ್ಲಿನ ಪೌಷ್ಠಿಕಾಂಶ ಹೆಚ್ಚಿಸುತ್ತಾರೆ. ಇದರಿಂದ ಕಬ್ಬಿಗೆ ಸಾವಯವ ಗೊಬ್ಬರದೊಂದಿಗೆ ಇಳುವರಿ ಹೆಚ್ಚಳಕ್ಕೂ ದಾರಿಯಾಗುತ್ತದೆ ಎನ್ನುತ್ತಾರೆ ಚವಾಣ್‌ ಸಹೋದರರು.

3ದಶಕದ ಸುದೀರ್ಘ‌ ನಂಟು: ಇನ್ನು ಚವಾಣ್‌ ಮನೆತನದ ಹಿರಿಯನಾದ ನಾರಾಯಣ ಚವಾಣ್‌ ಅವರು ತಮ್ಮ ತಿಳಿವಳಿಕೆ ದಿನಮಾನ ದಿಂದಲೂ ತರಕಾರಿ ಬೆಳೆಯಲ್ಲಿ ಆಸಕ್ತಿ ಬೆಳೆಸಿ ಕೊಂಡು ಬಂದವರು. ದೀರ್ಘಾವಧಿಯಿಂದ ತರಕಾರಿ ಬೆಳೆಯನ್ನು ಲಾಭದಾಯಕವಾಗಿ ಪರಿವರ್ತಿಸಿಕೊಂಡಿರುವ ಇವರು ಲಕ್ಷಾಂತರ ರೂ. ಲಾಭ ಪಡೆಯುತ್ತಿದ್ದಾರೆ. ದೀರ್ಘಾವಧಿ ಬೆಳೆಯಾಗಿರುವ ಕಬ್ಬು ಹೊರತುಪಡಿಸಿ ತರಕಾರಿಗೆ ಬೆಳೆಗೆ ಹೆಚ್ಚಿನ ಒತ್ತು ನೀಡಿ ಆ ಮೂಲಕ ಆರ್ಥಿಕ ಸಬಲತೆಯನ್ನು ಸಾಧಿ ಸಿಕೊಂಡಿದ್ದಾರೆ.

ಸದ್ಯ ಅರ್ಧ ಎಕರೆ ಟೊಮ್ಯಾಟೋ, ಅರ್ಧ ಎಕರೆ ಹೀರೆ, ಅರ್ಧ ಎಕರೆ ಸವತೆ ಹಾಗೂ ಒಂದೂವರೆ ಎಕರೆಯಲ್ಲಿ ಬೆಂಡೆ ಬೆಳೆಯುತ್ತಿ ರುವ ಇವರು ನಿತ್ಯ ಬೇರೆ ಬೇರೆ ಮಾರುಕಟ್ಟೆಗೆ ತೆರಳಿ ತರಕಾರಿ ಮಾರಾಟ ಮಾಡುತ್ತಾರೆ.

ವಿದ್ಯಾಭ್ಯಾಸ ಮುಗಿದ ಬಳಿಕ ನೌಕರಿಗಾಗಿ ಬೇರೆಡೆ ಅಲೆಯುವುದಕ್ಕಿಂತ ನಮ್ಮ ಜಮೀನಿನಲ್ಲಿಯೇ ಪರಿಶ್ರಮದಿಂದ ದುಡಿದರೆ ನೆಮ್ಮದಿಯ ಜೀವನ ಸಾಗಿಸಬಹುದು. ನಮ್ಮ ಕೃಷಿ ಪದ್ಧತಿಯಲ್ಲಿ ಸುಧಾರಿತ ವ್ಯವಸ್ಥೆ ಅಳವಡಿಸಿಕೊಂಡರೆ ಹೆಚ್ಚಿನ ಲಾಭ ಪಡೆಯಬಹದು. – ವಿನೋದ ಚವಾಣ್‌, ಬಿಕಾಂ ಪದವೀಧರ ಕೃಷಿಕ

ತರಕಾರಿ ಬೆಳೆಯಲ್ಲಿ ಕಬ್ಬಿಗಿಂತ ಹೆಚ್ಚಿನ ಲಾಭವಿದೆ. ಪರಿಶ್ರಮ ಹಾಕಿ ಬೆಳೆಯುವ ತರಕಾರಿಯಿಂದ ನಿತ್ಯದ ಜೀವನಕ್ಕೆ ಹೆಚ್ಚಿನ ಅನುಕೂಲವಾಗುತ್ತದೆ.  ಗೋವಿಂದ ನಾರಾಯಣ ಚವಾಣ್‌, ಬಿಕಾಂ ಪದವೀಧರ ಕೃಷಿಕ

– ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.