Mangaluru: ವೆನ್ಲಾಕ್ನಲ್ಲಿ ಶೀಘ್ರ ಕ್ರಿಟಿಕಲ್‌ ಕೇರ್‌ ವಿಭಾಗ

ಅಪಘಾತ, ಸುಟ್ಟಗಾಯ ಸಹಿತ ಜೀವನ್ಮರಣ ಸ್ಥಿತಿಯ ರೋಗಿಗಳಿಗೆ ಅನುಕೂಲವಾಗುವ ವ್ಯವಸ್ಥೆಗೆ ಅಸು

Team Udayavani, Aug 12, 2024, 5:19 PM IST

Mangaluru: ವೆನ್ಲಾಕ್ನಲ್ಲಿ ಶೀಘ್ರ ಕ್ರಿಟಿಕಲ್‌ ಕೇರ್‌ ವಿಭಾಗ

ಮಹಾನಗರ: ಅಪಘಾತ, ಸುಟ್ಟ ಗಾಯ ಸಹಿತ ಜೀವನ್ಮರಣ ಕಾಯಿಲೆಗೆ ಒಳಗಾಗಿ ತುರ್ತು ಚಿಕಿತ್ಸೆ ಅಗತ್ಯ ಇದ್ದವರಿಗೆ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ “ಕ್ರಿಟಿಕಲ್‌ ಕೇರ್‌ ವಿಭಾಗ’ ತೆರೆಯಲು ರಾಜ್ಯ ಸರಕಾರ ನಿರ್ಧರಿಸಿದೆ. ಇದರಿಂದ ಜಿಲ್ಲೆ ಮಾತ್ರವಲ್ಲ, ಹೊರ ಜಿಲ್ಲೆಯವರಿಗೂ ಭಾರಿ ಅನುಕೂಲವಾಗಲಿದೆ.

“ಕ್ರಿಟಿಕಲ್‌ ಕೇರ್‌ ವಿಭಾಗ’ ಆರಂಭಿಸಬೇಕೆಂದು ಸಾರ್ವಜನಿಕರಿಂದ ಬೇಡಿಕೆ ಇತ್ತು. ಈ ಹಿನ್ನೆಲೆಯಲ್ಲಿ ವೆನ್ಲಾಕ್ನಿಂದ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿತ್ತು. ಅದರಂತೆ ಕೆಲವು ತಿಂಗಳ ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಗ್ಗೆ ಚರ್ಚಿಸಿ ಅತ್ಯಾಧುನಿಕ ವಿಭಾಗ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭಕ್ಕೆ ನಿರ್ಧರಿಸಲಾಗಿದ್ದು, ರೋಗಿಗಳಿಗೆ ಶೀಘ್ರ ಅನುಕೂಲ ಒದಗಿಸುವ ಸಾಧ್ಯತೆ ಇದೆ.

ಈವರೆಗೆ ವೆನ್ಲಾಕ್ನ ಹಳೆಯ ಕಟ್ಟಡದ ಕ್ಯಾಶುವಾಲ್ಟಿ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇನ್ನು ಆಸ್ಪತ್ರೆಯ ಹಳೆಯ ಲ್ಯಾಂಡ್ರಿ ಪ್ರದೇಶದಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭಿಸಲು ಚಿಂತನೆ ನಡೆಸಲಾಗಿದೆ. ಒಟ್ಟು ಮೂರು ಅಂತಸ್ತಿನ 50 ಹಾಸಿಗೆಯ ವ್ಯವಸ್ಥೆ ಇರಲಿದೆ. ತಳ ಅಂತಸ್ತಿನಲ್ಲಿ ಬಯೋಮೆಡಿಕಲ್‌ ತ್ಯಾಜ್ಯ ವಿಂಗಡಣೆ-ನಿರ್ವಹಣೆ ಕೊಠಡಿ, ಔಷಧ ಜೋಡಿಸಲು ಘಟಕ ನಿರ್ಮಿಸಲು ಚಿಂತನೆ ನಡೆಸಲಾಗುತ್ತಿದೆ.

ಹೊಸ ವಿಭಾಗದಲ್ಲಿ ಏನೇನಿರಲಿದೆ?

ಕ್ರಿಟಿಕಲ್‌ ಕೇರ್‌ ವಿಭಾಗದಲ್ಲಿ ಮುಖ್ಯವಾಗಿ ಅಪಘಾತ ಮತ್ತು ತುರ್ತು ಚಿಕಿತ್ಸೆ, ಮೆಡಿಕಲ್‌ ಐಸಿಯು, ಸರ್ಜಿಕಲ್‌ ಐಸಿಯು, ಸುಟ್ಟಗಾಯಗಳಿಗೆ ಚಿಕಿತ್ಸೆ, ತುರ್ತು ಚಿಕಿತ್ಸಾ ಕೊಠಡಿ, ಒಬ್ಸರ್ವೇಶನ್ ಬೆಡ್‌, ಸಾಮಾನ್ಯ ಶಸ್ತ್ರಚಿಕಿತ್ಸಾ ಕೊಠಡಿ, ರಕ್ತ ಸಂಗ್ರಹ ಕೊಠಡಿ, ಪ್ರಯೋಗಾಲಯ, ಎಕ್ಸ್‌ರೇ, ಅಲ್ಟ್ರಾಸೌಂಡ್‌, ಹೈ ಡಿಪೆಂಡೆನ್ಸಿ ಘಟಕ, ವೈದ್ಯರ ಕೊಠಡಿ, ಎರಡು ಶಸ್ತ್ರಚಿಕಿತ್ಸಾ ಕೊಠಡಿ, ಐಸೋಲೇಶನ್‌ ಐಸಿಯು, ನೋಂದಣಿ ವ್ಯವಸ್ಥೆ ಸಹಿತ ವಿವಿಧ ಮೂಲಭೂತ ವ್ಯವಸ್ಥೆ ಇರಲಿದೆ.

ಸುತ್ತಲಿನ ಜಿಲ್ಲೆಯವರಿಗೂ ಅನುಕೂಲ

ವೆನ್ಲಾಕ್ ಆಸ್ಪತ್ರೆಗೆ ಹತ್ತಿರದ ಸುಮಾರು ಎಂಟು ಜಿಲ್ಲೆಗಳಿಂದ ರೋಗಿಗಳು ಚಿಕಿತ್ಸೆಗೆಂದು ಬರುತ್ತದೆ. ಪ್ರಮುಖವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕಾರವಾರ, ಕಾಸರಗೋಡು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯ ಮಂದಿಯೂ ಚಿಕಿತ್ಸೆಗೆ ಇದೇ ಆಸ್ಪತ್ರೆಗೆ ಬರುತ್ತಾರೆ. ಕ್ಲಿಷ್ಪ ಕಾಯಿಲೆ ಕಾರಣಕ್ಕೆ ತಾಲೂಕು ಆಸ್ಪತ್ರೆಗಳಿಂದ ಬಹುತೇಕ ಪ್ರಕರಣಗಳು ಇಲ್ಲಿಗೆ ಶಿಫಾರಸ್‌ಮಾಡಲಾಗುತ್ತದೆ. ದಿನದ 24 ಗಂಟೆಯೂ ಆಸ್ಪತ್ರೆಯನ್ನು ಚಿಕಿತ್ಸೆ ನೀಡಲಾಗುತ್ತಿದೆ.

ವೆನ್ಲಾಕ್ನಲ್ಲಿ ಇನ್ನಷ್ಟು ಸೌಲಭ್ಯ

ವೆನ್ಲಾಕ್ ಆಸ್ಪತ್ರೆಯಲ್ಲಿ ಕ್ರಿಟಿಕಲ್‌ಕೇರ್‌ ವಿಭಾಗ ತೆರೆಯಲು ಆರಂಭಕ್ಕೆ ಸಿದ್ಧತೆ

ಸ್ಮಾರ್ಟ್‌ಸಿಟಿ ಯೋಜನೆಯ ಮೂಲಕ 55 ಕೋ.ರೂ. ವೆಚ್ಚದಲ್ಲಿ ಸರ್ಜಿಕಲ್‌ ಬ್ಲಾಕ್‌ ಕಟ್ಟಡ ನಿರ್ಮಾಣ ಪೂರ್ಣ

ಹೃದಯ ಸಂಬಂಧಿಸಿದ ರೋಗಗಳ ಅತ್ಯಾಧುನಿಕ ತಪಾಸಣೆ ಮತ್ತು ಚಿಕಿತ್ಸೆಗೆ ಕ್ಯಾಥ್‌ ಲ್ಯಾಬ್‌ ನಿರ್ಮಾಣ

ಶೀಘ್ರ ಶಂಕುಸ್ಥಾಪನೆ

ವೆನ್ಲಾಕ್ ಆಸ್ಪತ್ರೆಯಲ್ಲಿ “ಕ್ರಿಟಿಕಲ್‌ ಕೇರ್‌ ವಿಭಾಗ’ ತೆರೆಯಲು ರಾಜ್ಯ ಸರಕಾರ ನಿರ್ಧರಿಸಿದೆ. ಅದರಂತೆ ಕೆಲವೇ ದಿನಗಳಲ್ಲಿ ಶಂಕುಸ್ಥಾಪನೆ ನಡೆಸಿ, ಕಾಮಗಾರಿ ಆರಂಭವಾಗಲಿದೆ. ತುರ್ತು ಚಿಕಿತ್ಸೆ ಅಗತ್ಯವುಳ್ಳವರಿಗೆ ತ್ವರಿತವಾಗಿ ಚಿಕಿತ್ಸೆ ನೀಡಲು ಈ ವಿಭಾಗ ನೆರವಾಗಲಿದೆ. ಈ ಮೂಲಕ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಮತ್ತಷ್ಟು ಸೇವೆಗಳು ಸಿಗುವಂತಾಗಲಿದೆ.
– ಡಾ| ಜೆಸಿಂತ ಡಿ’ಸೋಜಾ, ಅಧೀಕ್ಷಕರು, ಜಿಲ್ಲಾ ಶಸ್ತ್ರಚಿಕಿತ್ಸಕರು ವೆನ್ಲಾಕ್ ಜಿಲ್ಲಾಸ್ಪತ್ರೆ ಮಂಗಳೂರು

-ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.