College ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ; ಅಂಗಡಿಗಳ ಮೇಲೆ ದಾಳಿ: ಪ್ರಕರಣ ದಾಖಲು!
Team Udayavani, Aug 12, 2024, 5:38 PM IST
ತೀರ್ಥಹಳ್ಳಿ : ಕಾಲೇಜು ವಿದ್ಯಾರ್ಥಿಗಳಿಗೆ ಪಟ್ಟಣದ ವಿವಿಧ ಭಾಗದಲ್ಲಿನ ಕಾಲೇಜು ಸಮೀಪದ ಅಂಗಡಿಗಳಲ್ಲಿ ಸಿಗರೇಟ್ ಹಾಗೂ ಪಾನ್ ಪರಾಕ್ ನೀಡುತ್ತಿದ್ದ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ದಕ್ಷ ಪೊಲೀಸ್ ಅಧಿಕಾರಿ ಡಿವೈಎಸ್’ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ದಾಳಿ ನಡೆಸಿ ಎರಡು ಅಂಗಡಿಗಳ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಪಟ್ಟಣದ ಯಡೇಹಳ್ಳಿಕೆರೆ ಸಮೀಪದ ಸಹ್ಯಾದ್ರಿ ಪಾಲಿಟೆಕ್ನಿಕ್ ಕಾಲೇಜು ಅಕ್ಕ ಪಕ್ಕದ ಎರಡು ಪೆಟ್ಟಿಗೆ ಅಂಗಡಿಗಳಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಸಿಗರೇಟ್ ಹಾಗೂ ಪಾನ್ ಪರಾಕ್ ನೀಡುತ್ತಿರುವ ಬಗ್ಗೆ ದೂರು ಕೇಳಿ ಬಂದಿತ್ತು. ಸ್ಥಳಕ್ಕೆ ಭೇಟಿ ನೀಡಿ ಮಾದಕ ವಸ್ತು ನೀಡುತ್ತಿದ್ದಾರೆ ಎಂಬ ಕಾರಣದಿಂದ ಎರಡು ಅಂಗಡಿ ಮಾಲೀಕರ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.
ಉಳಿದಂತೆ ಪಟ್ಟಣದ ವಿವಿಧ ಭಾಗದಲ್ಲಿ ಕಾಲೇಜು ಸಮೀಪ ಇರುವ ಅಂಗಡಿಗಳಲ್ಲಿ ಮಕ್ಕಳಿಗೆ ಸಿಗರೇಟ್ ಹಾಗೂ ಪಾನ್ ಪರಾಕ್ ಸೇರಿ ಮಾದಕ ವಸ್ತು ಮಾರಾಟ ಮಾಡುವುದು ತಿಳಿದು ಬಂದರೆ ಕೂಡಲೇ ಮುಟ್ಟುಗೊಲು ಮಾಡಿಕೊಳ್ಳುವುದರ ಜೊತೆಗೆ ಕೇಸ್ ದಾಖಲು ಮಾಡಲಾಗುತ್ತದೆ ಎಂದು ಡಿವೈಎಸ್’ಪಿ ಗಜಾನನ ವಾಮನ ಸುತಾರ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.