![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 13, 2024, 7:20 AM IST
ಬೆಂಗಳೂರು: ದೇಶಿ ಕ್ರಿಕೆಟ್ನ ಆರಂಭಿಕ ಪಂದ್ಯಾವಳಿಯಾದ ದುಲೀಪ್ ಟ್ರೋಫಿ ಟೂರ್ನಿಯ ಮೊದಲ ಹಂತದ ಪಂದ್ಯಗಳನ್ನು ಅನಂತಪುರದಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಇದ ರಲ್ಲಿ ಟೀಮ್ ಇಂಡಿಯಾದ ಬಹುತೇಕ ಟೆಸ್ಟ್ ಆಟಗಾರರು ಆಡುವುದು ವಿಶೇಷ.
ಆದರೆ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ, ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಗಾಯಾಳಾಗಿರುವ ವೇಗಿ ಮೊಹಮ್ಮದ್ ಶಮಿ ಅವರಿಗೆ ರಿಯಾಯಿತಿ ನೀಡಲಾಗಿದೆ. ಹಾಗೆಯೇ ಸೀನಿಯರ್ ಕ್ರಿಕೆಟಿಗರಾದ ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಕೂಡ ವಿನಾಯಿತಿ ಪಡೆಯುವ ಸಾಧ್ಯತೆ ಇದೆ. ಪಂದ್ಯಾವಳಿಯಲ್ಲಿ ಆಡುವ ಅಥವಾ ಆಡದಿರುವ ಆಯ್ಕೆಯನ್ನು ಇವರಿಗೇ ಬಿಡಲಾಗಿದೆ. ಭಾರತ ತಂಡದ ಆಟಗಾರರು ಪೂರ್ತಿ ಸರಣಿಯಲ್ಲಿ ಅಲ್ಲದೇ ಹೋದರೂ ಕೆಲವು ಪಂದ್ಯಗಳಲ್ಲಾದರೂ ಆಡಬೇಕು ಎಂದು ಬಿಸಿಸಿಐ ಈಗಾಗಲೇ ಸೂಚಿಸಿದೆ.
ಚಿನ್ನಸ್ವಾಮಿಯಲ್ಲಿ ಪಂದ್ಯ
ದುಲೀಪ್ ಟ್ರೋಫಿ ಪಂದ್ಯಾವಳಿಯ ಮೊದಲ ಸುತ್ತಿನ 2 ಹಂತದ ಪಂದ್ಯಗಳನ್ನು ಆಂಧ್ರಪ್ರದೇಶದ ಅನಂತಪುರದಲ್ಲಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿತ್ತು. ಆದರೀಗ ಒಂದು ಹಂತದ ಪಂದ್ಯವನ್ನು ಬೆಂಗಳೂರಿನ “ಎಂ. ಚಿನ್ನಸ್ವಾಮಿ ಸ್ಟೇಡಿಯಂ’ಗೆ ಸ್ಥಳಾಂತರಿಸಲಾಗಿದೆ. ಪ್ರಯಾಣ, ಸಾಗಾಣಿಕೆ ಹಾಗೂ ಕೆಲವು ಉನ್ನತ ದರ್ಜೆಯ ಕ್ರಿಕೆಟಿಗರಿಗೆ ಎದುರಾಗುವ ವಸತಿ ಸಮಸ್ಯೆಯಿಂದಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಬಿಸಿಸಿಐ ಮೂಲ ತಿಳಿಸಿದೆ. ಅನಂತಪುರ ಬೆಂಗಳೂರಿನಿಂದ ಸುಮಾರು 230 ಕಿ.ಮೀ. ದೂರದಲ್ಲಿದ್ದು, ಇಲ್ಲಿಗೆ ವಿಮಾನ ಸಂಚಾರ ಇಲ್ಲ.
ದುಲೀಪ್ ಟ್ರೋಫಿ ಪಂದ್ಯಾವಳಿ ಸೆ. 5ರಂದು ಮೊದಲ್ಗೊಳ್ಳಲಿದೆ. ಅನಂತರ ಪ್ರವಾಸಿ ಬಾಂಗ್ಲಾದೇಶ ವಿರುದ್ಧ ಭಾರತ ತಂಡ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಮೊದಲ ಟೆಸ್ಟ್ ಚೆನ್ನೈಯಲ್ಲಿ (ಸೆ. 19-23) ಮತ್ತು ದ್ವಿತೀಯ ಟೆಸ್ಟ್ ಕಾನ್ಪುರದಲ್ಲಿ ನಡೆಯಲಿದೆ (ಸೆ. 27-ಅ. 1).
ಈ ಸರಣಿಯ ಅಭ್ಯಾಸಕ್ಕಾಗಿ ದುಲೀಪ್ ಟ್ರೋಫಿ ಪಂದ್ಯಾವಳಿಯನ್ನು ಬಳಸಿಕೊಳ್ಳುವುದು ಬಿಸಿಸಿಐ ಯೋಜನೆ. ಅಲ್ಲದೇ ಅಂತಾರಾಷ್ಟ್ರೀಯ ಪಂದ್ಯಗಳಿಗೆ ವಿರಾಮವಿದ್ದ ವೇಳೆ ಟೀಮ್ ಇಂಡಿಯಾ ಕ್ರಿಕೆಟಿಗರು ದೇಶಿ ಕ್ರಿಕೆಟ್ನಲ್ಲಿ ಆಡಬೇಕೆಂಬುದು ಬಿಸಿಸಿಐ ಬಯಕೆ. ಹೀಗಾಗಿ ಟೆಸ್ಟ್ ತಂಡದ ಸಂಭಾವ್ಯ ಆಟಗಾರರಾದ ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ರಿಷಭ್ ಪಂತ್, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಕುಲದೀಪ್ ಯಾದವ್ ಮೊದಲಾದವರೆಲ್ಲ ದುಲೀಪ್ ಟ್ರೋಫಿಯ ಕೆಲವು ಪಂದ್ಯಗಳಲ್ಲಿ ಆಡಲಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.