![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 13, 2024, 1:02 PM IST
ನವದೆಹಲಿ: ಪತಂಜಲಿ(Patanjali) ಆಯುರ್ವೇದ ಉತ್ಪನ್ನಗಳಿಗೆ ಸಂಬಂಧಿಸಿದಂತೆ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನೀಡುವುದಿಲ್ಲ ಎಂದು ಕ್ಷಮೆಯಾಚಿಸಿರುವ ಯೋಗ ಗುರು ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಕೈಬಿಟ್ಟಿರುವುದಾಗಿ ಸುಪ್ರೀಂಕೋರ್ಟ್(Supreme court) ಮಂಗಳವಾರ (ಆಗಸ್ಟ್ 13) ಆದೇಶ ನೀಡಿದೆ.
ನ್ಯಾಯಾಂಗ ನಿಂದನೆ ಕೈಬಿಟ್ಟಿರುವ ಸುಪ್ರೀಂಕೋರ್ಟ್, ಒಂದು ವೇಳೆ ಆದೇಶ ಉಲ್ಲಂಘಿಸಿ ಯಾವುದೇ ನಿರ್ಧಾರ ಕೈಗೊಂಡರೇ ಕಠಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ನ್ಯಾಯಾಂಗ ನಿಂದನೆ ಕುರಿತು ಮೇ 14ರಂದು ಸುಪ್ರೀಂಕೋರ್ಟ್ ಪೀಠದ ಜಸ್ಟೀಸ್ ಹಿಮಾ ಕೊಹ್ಲಿ ಮತ್ತು ಜಸ್ಟೀಸ್ ಅಸಾದುದ್ದೀನ್ ಅಮಾನುಲ್ಲಾ ಆದೇಶವನ್ನು ಕಾಯ್ದಿರಿಸಿದ್ದರು.
ಆಧುನಿಕ ವೈದ್ಯ ಪದ್ಧತಿ ಮತ್ತು ಕೋವಿಡ್ ಲಸಿಕೆ ವಿರುದ್ಧ ಪತಂಜಲಿ ಆಕ್ಷೇಪಾರ್ಹ ಪ್ರಚಾರ ಕೈಗೊಂಡಿತ್ತು. ಇದರ ವಿರುದ್ಧ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ (IMA) ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
2023ರ ನವೆಂಬರ್ ನಲ್ಲಿ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಬಾಬಾ ರಾಮ್ ದೇವ್ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೇ ಇಂತಹ ಜಾಹೀರಾತು ನೀಡುವುದನ್ನು ನಿಲ್ಲಿಸುವುದಾಗಿ ಭರವಸೆ ನೀಡಿದ್ದರು.
ಆದರೆ ಪತಂಜಲಿ ಸಂಸ್ಥೆ ಫೆಬ್ರವರಿಯಲ್ಲಿ ಹಾದಿತಪ್ಪಿಸುವ ಜಾಹೀರಾತು ನೀಡುವುದನ್ನು ಮುಂದುವರಿಸಿರುವುದನ್ನು ಗಮನಿಸಿ ಪತಂಜಲಿ ಕಂಪನಿ ಮತ್ತು ಆಡಳಿತ ನಿರ್ದೇಶಕ ಬಾಲಕೃಷ್ಣ ವಿರುದ್ಧ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿತ್ತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.