Udupi: ರಸ್ತೆಯೇ ಇಲ್ಲ: ಬರೀ ಹೊಂಡಗುಂಡಿ!

ಮುಂಗಾರು ಮಳೆ ಇಳಿಕೆ; ನಗರ-ಗ್ರಾಮಾಂತರ ಹೆದ್ದಾರಿಯ ಅಪಾಯಕಾರಿ ಗುಂಡಿಗಳ ದುರಸ್ತಿಗೆ ಸಕಾಲ

Team Udayavani, Aug 13, 2024, 3:42 PM IST

Udupi: ರಸ್ತೆಯೇ ಇಲ್ಲ: ಬರೀ ಹೊಂಡಗುಂಡಿ!

ಉಡುಪಿ: ನಗರ ಮತ್ತು ಗ್ರಾಮಾಂತರ ಭಾಗದಲ್ಲಿ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿ ಸ್ಥಿತಿ ಅಯೋಮಯವಾಗಿದೆ. ಮಳೆ ಕಡಿಮೆಯಾಗಿರುವ ಕಾರಣ ಇನ್ನಾದರೂ ರಸ್ತೆ ಕಾಮಗಾರಿಯನ್ನು ನಡೆಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕರಾವಳಿ ಬೈಪಾಸ್‌ನಿಂದ ಮಲ್ಪೆ ಸಾಗುವ ಮಾರ್ಗ ಕಾಮಗಾರಿ ಹಂತದಲ್ಲಿದ್ದು, ವಾಹನ ಸವಾರರಿಗೆ ಸಂಚರಿಸಲು ಯಾವುದೇ ಸೂಕ್ತ ವ್ಯವಸ್ಥೆಯನ್ನು ಹೆದ್ದಾರಿ ಪ್ರಾಧಿಕಾರ ತೆಗೆದುಕೊಂಡಿಲ್ಲ. ಇದೇ ರೀತಿಯಲ್ಲಿ ಸಂತೆಕಟ್ಟೆ ಓವರ್‌ಪಾಸ್‌ ರಸ್ತೆಯಲ್ಲಿಯೂ ನಡೆಯುತ್ತಿದೆ. ಪೆರಂಪಳ್ಳಿ ರಸ್ತೆ ಪರಿಸ್ಥಿತಿಯು ಹದಗೆಟ್ಟಿದ್ದು, ಇಲ್ಲಿನ ರೈಲ್ವೇ ಸೇತುವೆ ಮೇಲೆ ಜನರು ಕಷ್ಟದಿಂದಲೇ ವಾಹನ ಚಲಾಯಿಸಬೇಕಿದೆ. ಕಟಪಾಡಿ ಕಡೆಯಿಂದ ಉಡುಪಿ ನಗರಕ್ಕೆ ಪ್ರವೇಶಿಸಲು ಕಿನ್ನಿಮೂಲ್ಕಿ ದ್ವಾರಕ್ಕೆ ಹೋಗುವ ಮೊದಲು ಗುಂಡಿಗಳ ದರ್ಶನವಾಗುತ್ತದೆ.

ಸಂತೆಕಟ್ಟೆಯಲ್ಲಿ ಇನ್ನೂ ಜಲ್ಲಿ ಸುರಿಯುತ್ತಿದ್ದಾರೆ

ಸಂತೆಕಟ್ಟೆ ಓವರ್‌ಪಾಸ್‌ ಹದಗೆಟ್ಟ ರಸ್ತೆಗೆ ಇನ್ನೂ ಜಲ್ಲಿ ಸುರಿಯುತ್ತಿದ್ದಾರೆ. ಈ ಜಲ್ಲಿ ಇಡೀ ರಸ್ತೆ ಹರಡಿಕೊಂಡು ಸುಗಮ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಸದ್ಯಕ್ಕೆ ಮಳೆ ಬಿಡುವು ಇರುವುದರಿಂದ ಉತ್ತಮ ರೀತಿಯಲ್ಲಿ ತಾತ್ಕಾಲಿಕವಾಗಿ ರಸ್ತೆಯನ್ನು ದುರಸ್ತಿಪಡಿಸುವ ಬಗ್ಗೆ ಎಂಜಿನಿಯರ್‌ಗಳು ಯೋಜನೆ ರೂಪಿಸಬೇಕು ಎಂದು ಸ್ಥಳೀಯರು ಹೇಳಿದ್ದಾರೆ.

ಆದಿ ಉಡುಪಿ ರಸ್ತೆ ಸಂಪೂರ್ಣ ಗುಂಡಿಮಯ

ಎಲ್ಲೆಲ್ಲಿ ಸಂಚಾರಕ್ಕೆ ಸಮಸ್ಯೆಗಳು?

ಕರಾವಳಿ ಬೈಪಾಸ್‌ನಿಂದ ಮಲ್ಪೆ ಸಾಗುವ ಮಾರ್ಗದಲ್ಲಿಕಾಮಗಾರಿ ನಡೆಯುತ್ತಿದ್ದು ಸವಾರರಿಗೆ ಸಂಚಾರಕ್ಕೆ ಸಂಕಷ್ಟ.

ಸಂತೆಕಟ್ಟೆ ಓವರ್‌ಪಾಸ್‌ ರಸ್ತೆಯಲ್ಲಿ ಜಲ್ಲಿ ಹರಡಿಕೊಂಡಿದೆ.

ಪೆರಂಪಳ್ಳಿ ರೈಲ್ವೇ ಸೇತುವೆ ರಸ್ತೆ ಸಂಪೂರ್ಣ ಹದಗೆಟ್ಟಿದೆ.

ಕಿನ್ನಿಮೂಲ್ಕಿ ದ್ವಾರದ ಮುಂದೆ ಗುಂಡಿಗಳ ಸಾಲು.

ಗುಂಡಿ ಮುಚ್ಚುವ ಕಾರ್ಯ

ಮಳೆ ಬಿಡುವು ನೀಡಿದ ಹಿನ್ನೆಲೆಯಲ್ಲಿ ತೀರ ಹದಗೆಟ್ಟ ರಸ್ತೆಗಳನ್ನು ಉತ್ತಮ ರೀತಿಯಲ್ಲಿ ತಾತ್ಕಲಿಕ ನೆಲೆಯಲ್ಲಿ ದುರಸ್ತಿಪಡಿಸುವ ಬಗ್ಗೆ ಹೆದ್ದಾರಿ ಮತ್ತು ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ಗೆ ಸೂಚನೆ ನೀಡಲಾಗಿದೆ. ಇನ್ನೆರಡು ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ. ಈಗಾಗಲೇ ಉಡುಪಿ ನಗರಸಭೆ ವತಿಯಿಂದ ಗುಂಡಿಮುಚ್ಚುವ ಕೆಲಸ ನಡೆಯುತ್ತಿದೆ. -ಯಶ್‌ಪಾಲ್‌ ಸುವರ್ಣ, ಶಾಸಕರು.

ಇಲಾಖೆಗಳ ನಿರ್ಲಕ್ಷ್ಯವೇ ಕಾರಣ

ಸರ್ವ ಋತುವಿನಲ್ಲೂ ಉಪಯೋಗಿಸುವ ಡಾಮರು (ಬಿಟುಮಿನ್‌) ಸಿಗುವ ಕಾಲಘಟ್ಟದಲ್ಲಿ ರಾಷ್ಟ್ರೀಯ, ರಾಜ್ಯ, ಜಿಲ್ಲಾ, ಪಂಚಾಯತ್‌, ನಗರ ಸ್ಥಳೀಯ ಸಂಸ್ಥೆಗಳ ರಸ್ತೆಗಳ ಹೊಂಡಗಳು ಬೃಹದಾಕಾರ ಹೊಂದಿ ಮೃತ್ಯುಕೂಪವಾಗಲು ಇಲಾಖೆಗಳ ದಿವ್ಯ ನಿರ್ಲಕ್ಷ್ಯವೇ ಕಾರಣ ಎಂದು ಜಿಲ್ಲಾ ಕಾಂಗ್ರೆಸ್‌ ವಕ್ತಾರ ಕೆ. ವಿಕಾಸ್‌ ಹೆಗ್ಡೆ ಆರೋಪಿಸಿದ್ದಾರೆ. ಹಿಂದೆ ಮಳೆಗಾಲದಲ್ಲಿ ರಸ್ತೆ ದುರಸ್ತಿ ಇತ್ಯಾದಿ ಮಾಡಲು ಸಾಧ್ಯವಿರಲಿಲ್ಲ. ಆದರೆ ಇಂದು ಸರ್ವ ಋತುವಿನಲ್ಲೂ ಉಪಯೋಗಿಸಲು ಯೋಗ್ಯವಾದ ಡಾಮರು (ಬಿಟುಮಿನ್‌) ಸಿಗುವಾಗ ಸಂಬಂಧಿತ ಇಲಾಖೆಗಳು ರಸ್ತೆ ದುರಸ್ತಿ ಮಾಡದೆ ಇರುವುದು ಅವರ ಕರ್ತವ್ಯಲೋಪವಾಗಿದೆ. ಇದೂ ಕೂಡ ಭ್ರಷ್ಟಾಚಾರದ ಒಂದು ಭಾಗವಾಗಿದೆ. ರಸ್ತೆ ಹೊಂಡ ಮೊದಲ ಹಂತದಲ್ಲೇ ದುರಸ್ತಿ ಮಾಡಿದರೆ ಇದು ಕಡಿಮೆ ಖರ್ಚಿನಲ್ಲಿ ಆಗುವ ಕೆಲಸವಾಗಿದ್ದು ಇದರಿಂದ ಇಲಾಖಾ ಅಧಿಕಾರಿಗಳಿಗೆ ವೈಯಕ್ತಿಕ ಲಾಭ ಕಡಿಮೆ. ಆದುದರಿಂದ ಸಂಬಂಧಿತ ಇಲಾಖೆಗಳು ರಸ್ತೆಯ ಹೊಂಡಗಳು ಮೃತ್ಯುಕೂಪಗಳಾಗುವ ತನಕ ಕಾಯುತ್ತಿವೆ. ಇಲಾಖೆಯ ಜಾಣ ನಡೆಗೆ ಸಂಬಂಧಿತ ಜನಪ್ರತಿನಿಧಿಗಳು ಕೂಡ ಜಾಣ ಮೌನಕ್ಕೆ ಶರಣಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಓಡಾಡಲು ಪರದಾಟ

ಶಾಲೆ, ಎಪಿಎಂಸಿ ಮಾರುಕಟ್ಟೆ, ಮೀನು ಮಾರುಕಟ್ಟೆ ಸಹಿತ ಪ್ರಮುಖ ಆರ್ಥಿಕ ಕೇಂದ್ರವಾದ ಆದಿ ಉಡುಪಿ ಪರಿಸರದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸವಾರರು, ಪಾದಚಾರಿಗಳು ಓಡಾಡಲು ಪರದಾಡುವಂತಾಗಿದೆ.
-ಶಿವಾನಂದ್‌, ಆದಿ ಉಡುಪಿ.

ವಾಹನಗಳಿಗೆ ಹಾನಿ

ಸಂತೆಕಟ್ಟೆ ಓವರ್‌ಪಾಸ್‌ ರಸ್ತೆಯಲ್ಲಿನ ಗುಂಡಿಗಳನ್ನು ದುರಸ್ತಿಪಡಿಸಿ ವ್ಯವಸ್ಥಿತ ಮಾಡದಿದ್ದರೆ ಸರಣಿ ಅಪಘಾತ ಸಂಭವಿಸಬಹುದು. ಪೆರಂಪಳ್ಳಿ ರಸ್ತೆಯ ಕಥೆಯೂ ಇದೆ ಹಾಗಿದೆ. ಈಗಾಗಲೇ ಕಾರು, ಬೈಕುಗಳ ಬಿಡಿಭಾಗಗಳು ಹದಗೆಟ್ಟ ರಸ್ತೆಗಳಿಂದ ಹಾಳಾಗುತ್ತಿವೆ.
-ಸುರೇಶ್‌ ಪೂಜಾರಿ, ಕಲ್ಯಾಣಪುರ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.