Prajwal Devaraj: ಟೀಸರ್ನಲ್ಲಿ ಭಯಬೀಳಿಸಿದ ರಾಕ್ಷಸ
Team Udayavani, Aug 13, 2024, 4:12 PM IST
ನಟ ಪ್ರಜ್ವಲ್ ದೇವರಾಜ್ ಭರ್ಜರಿ ನಿರೀಕ್ಷೆಯೊಂದಿಗೆ ಎದುರು ನೋಡುತ್ತಿರುವ ಸಿನಿಮಾ “ರಾಕ್ಷಸ’. ಇಲ್ಲಿವರೆಗೆ ಆ್ಯಕ್ಷನ್, ಸೆಂಟಿಮೆಂಟ್, ಫ್ಯಾಮಿಲಿ ಡ್ರಾಮಾ ಸಿನಿಮಾ ಮಾಡಿರುವ ಪ್ರಜ್ವಲ್ ಮೊದಲ ಬಾರಿಗೆ ಹಾರರ್ ಕಂ ಟೈಮ್ ಲೂಪ್ ಕಾನ್ಸೆಪ್ಟ್ ನ ಸಿನಿಮಾದಲ್ಲಿ ನಟಿಸಿದ್ದಾರೆ. ಅದೇ ಕಾರಣದಿಂದ “ರಾಕ್ಷಸ’ ಸಿನಿಮಾ ರಿಲೀಸ್ಗಾಗಿ ಎದುರು ನೋಡುತ್ತಿದ್ದಾರೆ.
ಇತ್ತೀಚೆಗೆ ಈ ಚಿತ್ರದ ಟೀಸರ್ ನಗರದ ಪ್ರಸನ್ನ ಚಿತ್ರಮಂದಿರದಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಯಿತು. ಈ ವೇಳೆ ಮಾತನಾಡಿದ ಪ್ರಜ್ವಲ್ ದೇವರಾಜ್, “ನನಗೆ ಹಾರರ್ ಸಿನಿಮಾ ಎಂದರೆ ತುಂಬಾ ಭಯ. ನಾನು ಹೆಂಡತಿ ಸೆರಗಿನ ಹಿಂದೆ ಬಚ್ಚಿಟ್ಟುಕೊಂಡು ಹಾರರ್ ಸಿನಿಮಾ ನೋಡುತ್ತೇನೆ. ಆದರೆ ಈಗ ನಾನೆ ಹಾರರ್ ಸಿನಿಮಾದಲ್ಲೇ ನಟಿಸಿದ್ದೇನೆ ಇದಕ್ಕೆ ಕಾರಣ ಲೋಹಿತ್. ಸಿನಿಮಾ ತುಂಬಾ ಅದ್ಭುತವಾಗಿ ಮೂಡಿ ಬಂದಿದೆ’ ಎಂದರು.
ಇನ್ನು ನಿರ್ದೇಶಕ ಲೋಹಿತ್ ಮಾತನಾಡಿ “ನನ್ನ ಪಾಲಿಗೆ ಇದು ಸ್ಪೆಷಲ್ ಸಿನಿಮಾ. ಚಿತ್ರಮಂದಿರಗಳಲ್ಲಿ ಅತ್ಯುತ್ತಮ ಅನುಭವ ನೀಡಲಿದೆ. ಇಡೀ ಸಿನಿಮಾ ವಿಶ್ಯುವಲ್ ಎಫೆಕ್ಟ್ ಮೇಲೆಯೇ ನಡೆಯಲಿದೆ’ ಎಂದರು.
ಸಂಭಾಷಣೆಕಾರ ಮಾಸ್ತಿ ಮಾತನಾಡಿ, ಹಾರರ್ ಟೈಮ್ ಲೂಪ್ ಪ್ರಯೋಗ ರಾಕ್ಷಸ “ನಿರ್ದೇಶಕ ಲೋಹಿತ್ ಗೆ ಇಂಡಸ್ಟ್ರಿಯಲ್ಲಿ ಗಾಡ್ ಫಾದರ್ ಅಂತ ಯಾರು ಇಲ್ಲ. ಆದರೆ ನಟಿ ಪ್ರಿಯಾಂಕ ಉಪೇಂದ್ರ ಅವರು ಲೋಹಿತ್ ಅವರ ಎಲ್ಲಾ ಸಿನಿಮಗಳಿಗೂ ಬೆಂಬಲಿಸುತ್ತಿರುವುದು ಖುಷಿಯ ವಿಚಾರ. ಇನ್ನು ಪ್ರಜ್ವಲ್ ನನ್ನ ಗೆಳೆಯ, ಸಿನಿಮಾಗೆ ಒಳ್ಳೆಯದಾಗಲಿ. ಉತ್ತಮ ಸಿನಿಮಾ ಕೊಟ್ಟರೆ ಖಂಡಿತವಾಗಿಯೂ ಜನ ಚಿತ್ರಮಂದಿರಕ್ಕೆ ಬರುತ್ತಾರೆ’ ಎಂದರು.
ಪ್ರಿಯಾಂಕಾ ಉಪೇಂದ್ರ ಕೂಡಾ ಸಿನಿಮಾ ಬಗ್ಗೆ ಮಾತನಾಡಿದರು.
ರಾಕ್ಷಸ ಸಿನಿಮಾವನ್ನು ಸುಮಾರು 55 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. ಸಂಪೂರ್ಣ ಚಿತ್ರೀಕರಣ ರಾಮೋಜಿ ರಾವ್ ಫಿಲಂ ಸಿಟಿಯಲ್ಲಿ ಮಾಡಿರುವುದು ವಿಶೇಷ. ಶಾನ್ವಿ ಎಂಟರ್ಪ್ರೈಸಸ್ನಡಿಯಲ್ಲಿ ಪ್ರದೀಪ್ ಮಹೀಶಿ ಪ್ರಸೆಂಟ್ಸ್ನಲ್ಲಿ ದೀಪು ಬಿ ಎಸ್, ನವೀನ್ ಗೌಡ ಹಾಗೂ ಮಾನಸ ಅವರು ರಾಕ್ಷಸ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇನ್ನು ಈ ಸಿನಿಮಾದಲ್ಕಿ ಪ್ರಜ್ವಲ್ ಜೊತೆಯಾಗಿ ಅರುಣ್ ರಾಥೋಡ್, ಶ್ರೀಧರ್, ಗೌತಮ್ ಸೋಮಶೇಖರ್, ವಿಹಾನ್ ಕೃಷ್ಣ ಜಯಂತ್ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.