Byndoor ಶಾಸಕರ ಅಹೋರಾತ್ರಿ ಧರಣಿ; ಜಿಲ್ಲಾಧಿಕಾರಿ ಭೇಟಿ; ಧರಣಿ ಅಂತ್ಯ


Team Udayavani, Aug 13, 2024, 5:11 PM IST

Byndoor ಶಾಸಕರ ಧರಣಿ: ಜಿಲ್ಲಾಧಿಕಾರಿ ಭೇಟಿ ಅಂತ್ಯಗೊಂಡ ಧರಣಿ

ಬೈಂದೂರು: ಜಿಲ್ಲಾಡಳಿತ ಶಾಸಕರ ಸಂವಿಧಾನಿಕ ಹಕ್ಕುಗಳನ್ನು ಹತ್ತಿಕ್ಕುತ್ತಿದೆ.ಅಧಿಕಾರಿಗಳಿಗೆ ಶಾಸಕರ ಸಭೆಗೆ ತೆರಳಬಾರದೆಂದು ಶಾಸಕರ ಹಕ್ಕುಗಳನ್ನು ಕಸಿಯುತ್ತಿದ್ದಾರೆ.ಕಾಂಗ್ರೆಸ್ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಬೈಂದೂರು ತಾಲೂಕು ಆಡಳಿತ ಸೌಧದ ಎದುರುಗಡೆ ಶಾಸಕ ಗುರುರಾಜ್‌ ಗಂಟಿಹೊಳೆ ನಡೆಸುತ್ತಿದ್ದ ಧರಣಿ ಮಂಗಳವಾರ ಬೆಳಿಗ್ಗೆ ಅಂತ್ಯಗೊಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಭೇಟಿ: ಸೋಮವಾರ ಸಂಜೆಯಿಂದ ಕಾರ್ಯಕರ್ತರೊಂದಿಗೆ ಧರಣಿ ಆರಂಭಿಸಿದ ಬಳಿಕ ತಹಶೀಲ್ದಾರರು,ಸಹಾಯಕ ಕಮಿಷನರ್‌ ಶಾಸಕರ ಮನ ಒಲಿಸುವ ಪ್ರಯತ್ನ ಮಾಡಿದರು ಕೂಡ ಪ್ರಯೋಜನವಾಗಿಲ್ಲ. ಮಾತ್ರವಲ್ಲದೆ ಜಿಲ್ಲಾ ಬಿಜೆಪಿ ಮುಖಂಡರು ಕಾಪು,ಉಡುಪಿ,ಕುಂದಾಪುರ ಶಾಸಕರು ಕೂಡ ಆಗಮಿಸಿ ಬೆಂಬಲ ನೀಡಿದ್ದರು.

ಮಂಗಳವಾರ ಬೆಳಿಗ್ಗೆ ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿಗಳ ಜೊತೆ ಉಡುಪಿ -ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇತರ ಮುಖಂಡರು ಮಾತುಕತೆ ನಡೆಸಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಜಿಲ್ಲಾಡಳಿತದಿಂದ ಶಾಸಕರ ಹಕ್ಕುಚ್ಯುತಿ ಆಗಿಲ್ಲ.ಸಾಂವಿಧಾನಿಕ ನಿಯಮಗಳನ್ನು ಬಿಟ್ಟು ನಾವು ಕೆಲಸ ಮಾಡಲು ಸಾಧ್ಯವಿಲ್ಲ. ಶಾಸಕರ ಖಾಸಗಿ ಕಛೇರಿಯಲ್ಲಿ ಅಧಿಕೃತ ಸಭೆಗೆ ಸರಕಾರದ ನಿಯಮದಲ್ಲಿ ಅವಕಾಶವಿಲ್ಲ. ಶಾಸಕರು ಅಧಿಕಾರಿಗಳ ಸಭೆ ಮಾಡಬಾರದೆಂದು ನಾವು ಹೇಳಿಲ್ಲ.ಬದಲಾಗಿ ಸರಕಾರಿ ಕಛೇರಿ,ಶಾಸಕರ ಭವನದಲ್ಲಿ ನಡೆಯುವ ಅಧಿಕೃತ ಸಭೆಯಲ್ಲಿ ಮಾತ್ರ ಭಾಗವಹಿಸಲು ತಿಳಿಸಿದ್ದೇವೆ.

ಬೈಂದೂರು ಶಾಸಕರ ಮನವಿಯನ್ನು ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.ಸರಕಾರದ ಸ್ಪಷ್ಟನೆ ಬಂದ ಬಳಿಕ ಮಾಹಿತಿ ನೀಡುವುದಾಗಿ ತಿಳಿಸಿದರು. ಮಂಗಳವಾರ ಬೆಳಿಗ್ಗೆಯಿಂದ ಶಾಸಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ಯನ್ನು ಕೈಬಿಡಲಾಯಿತು.

ಮಾಜಿ ಶಾಸಕರ ಮೇಲೆ ಆರೋಪ: ಬೈಂದೂರಿನ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಯವರು ಬೈಂದೂರಿನ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ.ಹಿಂಬಾಗಿಲಿನ ಅಧಿಕಾರ ಶೋಭೆಯಲ್ಲ.ಪಶು ವೈದ್ಯರು ಸೇರಿದಂತೆ ಉತ್ತಮ ಅಧಿಕಾರಿಗಳ ವರ್ಗಾವಣೆ ಮೂಲಕ ಮಾಜಿ ಶಾಸಕರ ನೇತ್ರತ್ವದಲ್ಲಿ ಕಾಂಗ್ರೆಸ್ ತಂಡ ವರ್ಗಾವಣೆ ದಂಧೆಯಲ್ಲಿ ಹಣ ಮಾಡುತ್ತಿದ್ದಾರೆ. ಜನರು ಆರಿಸಿ ಕಳುಹಿಸಿದ ಶಾಸಕ ನಾನು.ಇಂತಹ ಯಾವುದೇ ದಬ್ಟಾಳಿಕೆಗೆ ಬಗ್ಗುವುದಿಲ್ಲ ಮತ್ತು ಶಾಸಕರ ಅಧಿಕಾರ ನನಗೆ ತಿಳಿಸುವ ಅಗತ್ಯವಿಲ್ಲ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

ಈ ಸಂದರ್ಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ,ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್‌ ಕುಮಾರ್‌,ರಾಜೇಶ ಕಾವೇರಿ, ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್‌ ಕುಮಾರ್‌ ಶೆಟ್ಟಿ,ಸುರೇಶ ಶೆಟ್ಟಿ,ಮಹೇಂದ್ರ ಪೂಜಾರಿ,ಜಿ.ಪಂ ಮಾಜಿ ಸದಸ್ಯ ಸುರೇಶ ಬಟ್ವಾಡಿ, ಹಾಗೂ ಬಿಜೆಪಿ ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.