Independence Day: ಧ್ವಜಾರೋಹಣ ಯಾರು ನೆರವೇರಿಸಬೇಕು?- ಕೇಜ್ರಿವಾಲ್ V/s ಲೆ. ಗವರ್ನರ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ಧಾರ ಅಸಿಂಧುವಾಗಿದೆ...
Team Udayavani, Aug 13, 2024, 5:47 PM IST
ನವದೆಹಲಿ: ಗುರುವಾರ (ಆ.15) ನಡೆಯಲಿರುವ ದೇಶದ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ತ್ರಿವರ್ಣ ಧ್ವಜಾರೋಹಣ ನಡೆಸುವ ವಿಚಾರದಲ್ಲಿ ಮತ್ತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಮತ್ತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಡುವೆ ಅಧಿಕಾರದ ಸಮರ ಮುಂದುವರಿದಿದ್ದು, ಧ್ವಜಾರೋಹಣ ವಿಚಾರದಲ್ಲಿ ಕೇಜ್ರಿವಾಲ್ ಸೂಚಿಸಿದ ಹೆಸರನ್ನು ತಿರಸ್ಕರಿಸಿ, ದೆಹಲಿ ಗೃಹ ಸಚಿವ ಕೈಲಾಶ್ ಗಹ್ಲೋಟ್ ಹೆಸರನ್ನು ಸೂಚಿಸಿರುವ ಬೆಳವಣಿಗೆ ನಡೆದಿದೆ.
ಏನಿದು ಜಟಾಪಟಿ:
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ಪತ್ರ ಬರೆದು, ತನ್ನ ಅನುಪಸ್ಥಿತಿಯಲ್ಲಿ ಶಿಕ್ಷಣ ಸಚಿವೆ ಅತಿಶಿ ದೆಹಲಿ ಸರ್ಕಾರದ ಪರವಾಗಿ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಘೋಷಿಸಿದ್ದರು. ಆದರೆ ಲೆ.ಗ. ಸಕ್ಸೇನಾ ಅವರು ಕೇಜ್ರಿವಾಲ್ ಅವರ ನಿರ್ದೇಶನ ತಿರಸ್ಕರಿಸಿದ್ದರು.
ಈ ವಿಚಾರದಲ್ಲಿ ಲೆ.ಗವರ್ನರ್ ಸಕ್ಸೇನಾ ಅವರ ಕಚೇರಿ ಮಂಗಳವಾರ ಸಂಜೆ ದೀರ್ಘ ಪ್ರಕಟನೆ ಹೊರಡಿಸಿದ್ದು, ಗೃಹ ಸಚಿವ ಗಹ್ಲೋಟ್ ಅವರನ್ನು ಧ್ವಜಾರೋಹಣ ನೆರವೇರಿಸಲು ನೇಮಕ ಮಾಡಲಾಗಿದ್ದು, ಧ್ವಜಾರೋಹಣದ ನಂತರ ದೆಹಲಿ ಪೊಲೀಸರು ಜಾಥಾ ನಡೆಸಲಿದ್ದು, ಈ ಕುರಿತು ಗೃಹ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದೆ.
ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ನೆರವೇರಿಸಲು ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಅವರು ಗೃಹ ಸಚಿವ ಕೈಲಾಶ್ ಗಹ್ಲೋಟ್ ಅವರನ್ನು ನೇಮಕ ಮಾಡಿರುವುದಾಗಿ ವರದಿ ವಿವರಿಸಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ಧಾರ ಅಸಿಂಧುವಾಗಿದೆ ಎಂದು ಲೆ. ಗವರ್ನರ್ ಸಕ್ಸೇನಾ ತಿಳಿಸಿದ್ದಾರೆ. ಏತನ್ಮಧ್ಯೆ ದೆಹಲಿ ಜೈಲು ಕಾಯ್ದೆಯ ಪ್ರಕಾರ ಇದು ಕೇಜ್ರಿವಾಲ್ ಅವರಿಗೆ ನೀಡಲಾದ ಅಧಿಕಾರದ ದುರುಪಯೋಗವಾಗಿದೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.