![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Aug 13, 2024, 8:30 PM IST
ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಸುಕ್ಷೇತ್ರ ದೇವಲಗಾಣಗಾಪುರ ಸಂಗಮದ ಅಷ್ಟತೀರ್ಥದಲ್ಲಿ ಸ್ನಾನ ಮಾಡಲು ಹೋಗಿದ್ದಾಗ ಇಬ್ಬರು ಬಾಲಕರು ನೀರು ಪಾಲಾಗಿರುವ ದುರ್ಘಟನೆ ಮಂಗಳವಾರ ಸಂಭವಿಸಿದೆ.
ನೀರು ಪಾಲಾಗಿರುವ ಬಾಲಕರನ್ನು ಪ್ರಕಾಶ (15) ಮತ್ತು ಸೋನು (16) ಎಂದು ಗುರುತಿಸಾಗಿದೆ.
ರಾಜಸ್ಥಾನ ಮೂಲಕ ಇವರು ಕಳೆದ ಹಲವು ವರ್ಷಗಳಿಂದ ದೇವಲಗಾಣಗಾಪುರದಲ್ಲಿಯೇ ತಂಗಿದ್ದರು. ಮಸಾಲೆ ವ್ಯಾಪಾರ ಮಾಡಿಕೊಂಡಿದ್ದರು.
ಮಂಗಳವಾರ ಅಪರಾಹ್ನ ಸಂಗಮದಲ್ಲಿ ಸ್ನಾನ ಮಾಡಲು ಹೋದಾಗ ಸೋನು ಕಾಲು ಜಾರಿ ನದಿಗೆ ಬಿದ್ದು ಸೆಳೆವಿಗೆ ಸಿಲುಕಿ ಹರಿದು ಹೋಗುತ್ತಿದ್ದ. ಈ ವೇಳೆಯಲ್ಲಿ ಆತನನ್ನು ಕಾಪಾಡಲು ಪ್ರಕಾಶ್ ನೀರಿಗೆ ಧುಮುಕಿದ್ದಾನೆ. ಆತನೂ ನೀರಿನ ಸೆಳವಿಗೆ ಮುಳುಗಿ ಹೋಗಿದ್ದಾನೆ.
ಕೂಡಲೇ ಸ್ಥಳದಲ್ಲಿದ್ದವರು ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ತಿಳಿಸಿದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಮೃತ ದೇಹಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
ಸ್ಥಳದಲ್ಲಿ ಮೃತ ಬಾಲಕರ ಕುಟುಂಬ ಸದಸ್ಯರು ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ದೇವಲಗಾಣಗಾಪುರ ಠಾಣೆಯ ಪಿಎಸ್ಐ ರಾಹುಲ್ ಪವಾರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.