Puttur: ಚೆಕ್ ಬೌನ್ಸ್ ಪ್ರಕರಣ: ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ
Team Udayavani, Aug 13, 2024, 9:11 PM IST
ಪುತ್ತೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಗ್ರಾಮದ ಕುಕ್ಕಾಡಿ ನಿವಾಸಿ ಗೋಪಾಲ ನಾಯ್ಕ ಅವರಿಗೆ ಪುತ್ತೂರು ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
2019ರಲ್ಲಿ ಉಪ್ಪಿನಂಗಡಿ ಗ್ರಾಮದ ಕಜೆಕ್ಕಾರು ನಿವಾಸಿ ಮಹಾಲಿಂಗ ಎಂಬವರಿಂದ ಗೋಪಾಲ ನಾಯ್ಕ ಅವರು 50 ಸಾವಿರ ರೂ ಸಾಲವಾಗಿ ಪಡೆದುಕೊಂಡಿದ್ದು ಸಾಲದ ಮೊತ್ತದ ಮರು ಪಾವತಿಯ ಬಗ್ಗೆ ಚೆಕ್ ನೀಡಿದ್ದರು. ಮಹಾಲಿಂಗ ಅವರು ನಗದೀಕರಣಕ್ಕಾಗಿ ಬ್ಯಾಂಕ್ಗೆ ಚೆಕ್ ಹಾಜರುಪಡಿಸಿದಾಗ ಚೆಕ್ ಬೌನ್ಸ್ ಆಗಿತ್ತು. ಗೋಪಾಲ ನಾಯ್ಕ ವಿರುದ್ಧ ಪುತ್ತೂರು ಪ್ರಿನ್ಸಿಪಾಲ್ ಸಿವಿಲ್ ಜಡ್ಜ್ ಮತ್ತು ಜೆಎಮ್ಎಫ್ಸಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.
ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿ ಗೋಪಾಲ ನಾಯ್ಕರವರು ತಪ್ಪಿತಸ್ಥ ಎಂದು ತೀರ್ಮಾನಿಸಿದ್ದು 75 ಸಾವಿರ ರೂಪಾಯಿ ನಗದಾಗಿ ಪಾವತಿಸಬೇಕು. ತಪ್ಪಿದಲ್ಲಿ ಆರು ತಿಂಗಳ ಸೆರೆಮನೆ ವಾಸ ಅನುಭವಿಸಬೇಕು. 75 ಸಾವಿರ ರೂಪಾಯಿಯಲ್ಲಿ 70 ಸಾವಿರ ರೂಪಾಯಿಯನ್ನು ಮಹಾಲಿಂಗ ಅವರಿಗೆ ಮತ್ತು 5 ಸಾವಿರ ರೂಪಾಯಿಯನ್ನು ಸರಕಾರಕ್ಕೆ ಕಾನೂನು ಕ್ರಮದ ಖರ್ಚಿನ ಬಗ್ಗೆ ಪಾವತಿಸಬೇಕು ಎಂದು ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.