TB Dam; ಕ್ರೆಸ್ಟ್ ಗೇಟ್ ಕೊಚ್ಚಿ ಹೋಗಿರುವುದಕ್ಕೆ ಸರಕಾರವೇ ನೇರ ಹೊಣೆ: ವಿಜಯೇಂದ್ರ
ಟಿ.ಬಿ. ಬೋರ್ಡ್ ಶಿಫಾರಸು ನಿರ್ಲಕ್ಷಿಸಿದವರು ಯಾರು?
Team Udayavani, Aug 14, 2024, 2:04 AM IST
ಬೆಂಗಳೂರು: ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್ ಗೇಟ್ ಕೊಚ್ಚಿ ಹೋಗುವುದಕ್ಕೆ ರಾಜ್ಯ ಸರಕಾರವೇ ನೇರ ಹೊಣೆ ಹೊರಬೇಕು. ಅಣೆಕಟ್ಟೆಯ 17ರಿಂದ 33ನೇ ಕ್ರೆಸ್ಟ್ ಗೇಟ್ಗಳ ನಿರ್ವಹಣೆ ಜವಾಬ್ದಾರಿ ರಾಜ್ಯ ಸರಕಾರದ್ದೇ ಆಗಿದ್ದು, ನಿರ್ಲಕ್ಷ್ಯ ಯಾರದ್ದು? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನ ವಸಂತನಗರದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನಿಡಿ ಮಾತನಾಡಿದ ಅವರು, ತುಂಗಭದ್ರಾ ಮಂಡಳಿ ಕೇಂದ್ರ ಸರಕಾರದ ಅಧೀನದಲ್ಲಿದೆ. ಈ ಅವಘಡಕ್ಕೆ ಕೇಂದ್ರವೇ ಹೊಣೆ ಎಂದು ಪ್ರತ್ಯಾರೋಪ ಮಾಡುತ್ತಿದ್ದಾರೆ. ಅಣೆಕಟ್ಟಿನ 17ರಿಂದ 33 ಕ್ರೆಸ್ಟ್ಗೇಟ್ಗಳ ನಿರ್ವಹಣೆ ರಾಜ್ಯ ಸರಕಾರದ್ದಾಗಿದೆ. ಕೇಂದ್ರ ಅಧೀನದ ತುಂಗಭದ್ರಾ ಮಂಡಳಿ ಸುರಕ್ಷೆ ಬಗ್ಗೆ ಮಾಡಿದ ಶಿಫಾರಸುಗಳನ್ನು ನಿರ್ಲಕ್ಷಿಸಿದವರು ಯಾರು? ಎಂದು ಪ್ರಶ್ನಿಸಿದರು.
ಜನೌಷಧ ಕೇಂದ್ರ ಮುಚ್ಚಲು ಯತ್ನ
ಒಂದಿಲ್ಲೊಂದು ಕಾರಣವೊಡ್ಡಿ ಕೇಂದ್ರದ ಜತೆಗೆ ರಾಜ್ಯ ಸರಕಾರ ಸದಾ ಸಂಘರ್ಷದ ಧೋರಣೆ ಪ್ರದರ್ಶಿಸುತ್ತಿದೆ. ಅದೇ ಹಾದಿಯಲ್ಲಿ ಮುಂದುವರಿದು ಜನೌಷಧ ಕೇಂದ್ರಗಳನ್ನು ಮುಚ್ಚಲು ಹೊರಟಿರುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.