Independence Day; ಇಂದು ಮಂಗಳೂರಿನಲ್ಲಿ “ತಿರಂಗಾ ಯಾತ್ರೆ’


Team Udayavani, Aug 14, 2024, 6:17 AM IST

Independence Day; ಇಂದು ಮಂಗಳೂರಿನಲ್ಲಿ “ತಿರಂಗಾ ಯಾತ್ರೆ’

ಮಂಗಳೂರು: ಈ ಬಾರಿಯಸ್ವಾತಂತ್ರ್ಯ ದಿನವನ್ನು ವಿಭಿನ್ನವಾಗಿ ಆಚರಿಸುವ ಉದ್ದೇಶದಿಂದ ಅದರ ಪೂರ್ವಭಾವಿಯಾಗಿ ಎಲ್ಲರ ಸಹಯೋಗದಲ್ಲಿ ಆ.14ರಂದು “ತಿರಂಗಾ ಯಾತ್ರೆ’ ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ತಿಳಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿ, ಸಂಜೆ 3.30ಕ್ಕೆ ಕರಾವಳಿ ಉತ್ಸವ ಮೈದಾನದಲ್ಲಿ ಯಾತ್ರೆಗೆ ಚಾಲನೆ ನೀಡಲಾಗುವುದು, ಯಾತ್ರೆಯು ಮಂಜೇಶ್ವರ ಗೋವಿಂದ ಪೈ ವೃತ್ತದ ವರೆಗೂ ಬಂದು ಸಮಾಪನಗೊಳ್ಳಲಿದೆ ಎಂದರು.

ಕೇವಲ ಕಚೇರಿಗೆ ಸೀಮಿತವಾಗಿದ್ದ ರಾಷ್ಟ್ರೀಯ ಹಬ್ಬಗಳನ್ನು ಪ್ರಧಾನಿ ಮೋದಿಯವರು ಜನಸಾಮಾನ್ಯರ ಮಧ್ಯೆ ತಂದಿದ್ದಾರೆ, ಅದರಿಂದಾಗಿ ಜನಸಾಮಾನ್ಯರೂ ಕೂಡ ರಾಷ್ಟ್ರದ ಹಬ್ಬಗಳನ್ನು ಉತ್ಸವ ರೀತಿಯಲ್ಲಿ ಆಚರಿಸುವಂತಾಗಿದೆ, ಈ ಸಂಭ್ರಮಕ್ಕೆ ಹಾಗೂ ದೇಶದ ಏಕತೆ ಮತ್ತು ಒಗ್ಗಟ್ಟಿನ ಪ್ರತೀಕವಾಗಿ ತಿರಂಗಾ ಯಾತ್ರೆ ನಡೆಸಲಾಗುತ್ತಿದೆ ಎಂದರು.

ಆಸಕ್ತಿ ಇರುವವರೆಲ್ಲರೂ ಆಗಮಿಸಬಹುದು, ಪ್ಲಾಸ್ಟಿಕ್‌ ಧ್ವಜ ಬೇಡ, ಬಟ್ಟೆಯ ಧ್ವಜಗಳನ್ನು ತರಬಹುದು, ಅಗತ್ಯವಿರುವವರಿಗೆ ತ್ರಿವರ್ಣ ಧ್ವಜಗಳನ್ನೂ ಒದಗಿಸಲಾಗುವುದು. ಈಗಾಗಲೇ ಹಲವು ಶಿಕ್ಷಣ ಸಂಸ್ಥೆಗಳ ಆಡಳಿತಕ್ಕೂ ವಿನಂತಿ ಮಾಡಲಾಗಿದ್ದು ವಿದ್ಯಾರ್ಥಿಗಳೂ ಪಾಲ್ಗೊಳ್ಳುವ ನಿರೀಕ್ಷೆ ಇದೆ, ಎಲ್ಲ ಆಸಕ್ತರು ಭಾಗವಹಿಸಬೇಕು ಎಂದರು.

ಇದಕ್ಕೆ ಪೂರಕವಾಗಿ ದೇಶ ವಿಭಜನೆ ಯ ಕರಾಳ ದಿನಗಳನ್ನು ನಾವು ತಿಳಿದು ಕೊಳ್ಳಬೇಕು ಎಂಬ ಕಾರಣಕ್ಕಾಗಿ ಕೆನರಾ
ಡೊಂಗರಕೇರಿ ಶಾಲೆಯ ಭುವನೇಂದ್ರಸಭಾಂಗಣದಲ್ಲಿ ಸಂಜೆ ಪ್ರದರ್ಶಿನಿ ಯನ್ನೂ ಏರ್ಪಡಿಸಲಾಗಿದೆ ಎಂದರು.

ಹರ್‌ ಘರ್‌ ತಿರಂಗ ಯೋಜನೆ
ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಎಲ್ಲ ಪ್ರಧಾನ ಮಂತ್ರಿ ಆವಾಸ್‌ ಯೋಜನೆಯ ಎಲ್ಲ ಫಲಾನುಭವಿಗಳ ಮನೆಗೆ ನಮ್ಮ ಜನಪ್ರತಿನಿಧಿಗಳು ತೆರಳಿ ಅವರಿಗೆ ಸಿಹಿತಿಂಡಿ ನೀಡಿ, ರಾಷ್ಟ್ರಧ್ವಜ ಹಾರಿಸಿ ಪ್ರಧಾನಿ ಮೋದಿಯವರ ಪುಸ್ತಕ ನೀಡುವ ಕಾರ್ಯಕ್ರಮವಿದೆ. ಇದನ್ನು ಸಾಂಕೇತಿಕವಾಗಿ ಎಲ್ಲ ಕ್ಷೇತ್ರದ ತಲಾ 9 ಮನೆಗಳಲ್ಲಿ ಮೂರು ದಿನ ಕಾಲ ನಡೆಸಲಾಗುವುದು ಎಂದರು. ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.