Aranthodu ಶಾಲಾ ವಿದ್ಯಾರ್ಥಿನಿಗೆ ಹಾವು ಕಡಿತ
Team Udayavani, Aug 13, 2024, 11:22 PM IST
ಅರಂತೋಡು: ಶಾಲಾ ವಿದ್ಯಾರ್ಥಿನಿಗೆ ಹಾವು ಕಚ್ಚಿದ ಘಟನೆ ಕೊಡಗು ಸಂಪಾಜೆ ಗ್ರಾಮದ ಕೊಯ ನಾಡಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.
ಸಂಪಾಜೆ ಗ್ರಾ.ಪಂ. ಮಾಜಿ ಸದಸ್ಯೆ ರಾಜೇಶ್ವರಿ ಅವರ ಪುತ್ರಿ ಚೈತನ್ಯಾ ಮನೆಯಲ್ಲಿ ಸೌದೆ ತೆಗೆಯುವ ವೇಳೆ ಕೈ ಬೆರಳಿಗೆ ಹಾವು ಕಚ್ಚಿದೆ. ಆಕೆಯನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪರಿಚಿತ ಸಾವು
ಮಂಗಳೂರು: ಉತ್ತರ ಪೊಲೀಸ್ ಠಾಣೆ ವ್ಯಾಪ್ತಿಯ ಗೊಲ್ಲರಕೇರಿ ಹನುಮಂತ ದೇವಸ್ಥಾನದ ಬಳಿ ಮಂಗಳವಾರ ಬೆಳಗ್ಗೆ ಸುಮಾರು 45ರಿಂದ 50 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ.
ಬೆಳಗ್ಗೆ ಅಂಗಡಿ ಮಾಲಕರು ಬಾಗಿಲು ತೆರೆಯಲು ಬಂದಾಗ ಫುಟ್ಪಾತ್ ಮೇಲೆ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಸುಮಾರು 5.6 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು ಎಡಕೈಯ ತೋಳಿನಲ್ಲಿ ಮುದಣ್ಣ ಎಂಬ ಟ್ಯಾಟೂ ಹಾಗೂ ಬಲ ಕೈಯಲ್ಲಿ ನೀಚನ್ ಎಂಬ ಟ್ಯಾಟೂ ಇದೆ. ಬರ್ಮುಡಾ ಚಡ್ಡಿ, ನೀಲಿ ಬಣ್ಣದ ಶರ್ಟ್ ಧರಿಸಿದ್ದರು. ವಾರಸುದಾರರು ಇದ್ದರೆ ಮಂಗಳೂರು ಉತ್ತರ ಪೊಲೀಸ್ ಠಾಣೆ (0824-2220516) ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.