Tungabhadra Dam; ಇಂದಿನಿಂದ ಅಣೆಕಟ್ಟಿನಲ್ಲಿ ನೀರು ನಿಲ್ಲಿಸುವ ಸಾಹಸ!


Team Udayavani, Aug 14, 2024, 6:31 AM IST

Tungabhadra Dam; ಇಂದಿನಿಂದ ಅಣೆಕಟ್ಟಿನಲ್ಲಿ ನೀರು ನಿಲ್ಲಿಸುವ ಸಾಹಸ!

ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್‌ಗೇಟ್‌ ಮುರಿದ ಸ್ಥಳದಲ್ಲಿ ಹೊಸ ಗೇಟ್‌ ಅಳವಡಿಕೆ ಸವಾಲಿಗೆ ಸಿದ್ಧವಾಗಿರುವ ತಜ್ಞರು, ಹರಿದು ಹೋಗುತ್ತಿರುವ ನೀರನ್ನು ತಡೆಯಲು ತಾತ್ಕಾಲಿಕವಾಗಿ ಗೇಟ್‌ ಅಳವಡಿಸಲು ಬುಧವಾರ ಕಾರ್ಯಾರಂಭ ಮಾಡಲಿದ್ದಾರೆ.

ಅಣೆಕಟ್ಟು ತಜ್ಞರು 3 ದಿನಗಳಿಂದ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಗೇಟ್‌ ಮುರಿದು ಬಿದ್ದ ಮಾರನೇ ದಿನವೇ ನಾರಾಯಣ ಎಂಜಿನಿಯರಿಂಗ್‌ ವರ್ಕ್ಸ್ ಹಾಗೂ ಹಿಂದೂಸ್ಥಾನ್‌ ಎಂಜಿನಿಯರಿಂಗ್‌ ವರ್ಕ್ಸ್ಗೆ ಹೊಸ ತಾತ್ಕಾಲಿಕ ಗೇಟ್‌ ನಿರ್ಮಿಸುವ ಹೊಣೆ ನೀಡಲಾಗಿತ್ತು. ಒಟ್ಟು 64 ಅಡಿ ಅಗಲ, 4 ಅಡಿ ಎತ್ತರದ 5 ಐದು ಗೇಟ್‌ಗಳನ್ನು ಸಿದ್ಧಪಡಿಸುವ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಬುಧವಾರ ಜಲಾಶಯದ ಪ್ರದೇಶಕ್ಕೆ ತರಲು ಸಿದ್ಧತೆ ನಡೆಸಲಾಗಿದೆ.

ಜಲಾಶಯದ ಭದ್ರತೆ ದೃಷ್ಟಿಯಿಂದ ಎರಡು ಬೃಹತ್‌ ಕ್ರೇನ್‌ಗಳನ್ನು ಎಡ ಹಾಗೂ ಬಲ ಬದಿಯಿಂದ 19ನೇ ಕ್ರೆಸ್ಟ್‌ಗೇಟ್‌ನತ್ತ ತರಲಾಗುತ್ತದೆ. ಮುರಿದ ಗೇಟ್‌ ಸ್ಥಳದ ನದಿಯ ಒಳಭಾಗದಲ್ಲಿ ಕಂಬದ ಮಾದರಿಯ ಎರಡು ಬೃಹತ್‌ ಕಬ್ಬಿಣದ ಕಂಬಗಳನ್ನು ಎರಡು ಬದಿಯಲ್ಲಿ ನಿಲ್ಲಿಸಲಾಗುತ್ತದೆ. ಬಳಿಕ ತಲಾ 10 ಟನ್‌ ಸಾಮರ್ಥ್ಯದ ಗೇಟ್‌ಗಳನ್ನು ಆ ಕಂಬಗಳಿಗೆ ಅನುಗುಣವಾಗಿ ನೀರಿಗೆ ಇಳಿಸುವ ಪ್ರಕ್ರಿಯೆ ಆರಂಭಿಸಲಾಗುತ್ತದೆ. ಅದಕ್ಕೂ ಮುನ್ನ ಅಣೆಕಟ್ಟಿನ ಒಳ ಭಾಗದಲ್ಲಿ ಗೇಟ್‌ ಇಳಿಸುವ ಮೊದಲು ಒಟ್ಟು ನೀರು ಸಂಗ್ರಹದ ಸ್ಥಿತಿ, ನೀರಿನ ಒತ್ತಡ, ಆ ಒತ್ತಡದ ಸಾಮರ್ಥ್ಯಕ್ಕೆ ಅನುಸಾರ ಗೇಟ್‌ ಭದ್ರವಾಗಿ ಇಳಿಯುತ್ತದೆಯೇ ಎಂಬ ಲೆಕ್ಕಾಚಾರ ಸ್ಥಳದಲ್ಲೇ ಹಾಕಲಾಗುತ್ತದೆ.

ಸದ್ಯ ಮುರಿದ ಗೇಟ್‌ ಮೂಲಕ 35 ಸಾವಿರ ಕ್ಯುಸೆಕ್‌ ನೀರು ಹರಿದು ನದಿ ಸೇರುತ್ತಿದ್ದು, ಆ ನೀರಿನ ಸಾಮರ್ಥ್ಯ ತಡೆಯುವಂತೆ ಗೇಟ್‌ಗಳ ಇಳಿಸುವ ಪ್ರಕ್ರಿಯೆ ಆರಂಭಿಸಲಾಗುತ್ತದೆ. ಮೊದಲು ಒಂದು ಗೇಟ್‌ ನೀರಿನಲ್ಲಿ ಕೆಳಗಿಳಿಸಿ ಪರಿಸ್ಥಿತಿ ಅವಲೋಕಿಸಲಾಗುತ್ತದೆ. ಮೊದಲ ಗೇಟ್‌ ಯಶಸ್ವಿಯಾಗಿರುವುದು ಖಚಿತ ಆದ ಬಳಿಕ 2ನೇ ಗೇಟ್‌ ಇಳಿಸಲಾಗುತ್ತದೆ. ಅದೇ ರೀತಿ 5 ಗೇಟ್‌ಗಳನ್ನು ಇಳಿಸಲಾಗುತ್ತದೆ. ಇದೊಂದು ಸವಾಲಿನ ಕೆಲಸ ಎಂದು ತಜ್ಞರು ತಿಳಿಸಿದ್ದಾರೆ.

ಗೇಟ್‌ ಇಳಿಕೆ ವೇಳೆ ಅಣೆಕಟ್ಟಿನಲ್ಲಿ ನಿಶಬ್ದ!

ಕಾರ್ಯಾಚರಣೆ ವೇಳೆ ತಜ್ಞರ ತಂಡ ಹೊರತುಪಡಿಸಿ ಯಾರಿಗೂ ಪ್ರವೇಶ ನೀಡದಂತೆ ಅಣೆಕಟ್ಟು ತಜ್ಞ ಕನ್ನಯ್ಯ ನಾಯ್ಡು ಅವರು ಸಚಿವ ಶಿವರಾಜ ತಂಗಡಗಿ ಹಾಗೂ ತುಂಗಭದ್ರಾ ಬೋರ್ಡ್‌ಗೆ ಸೂಚನೆ ನೀಡಿದ್ದಾರೆ. ಅಣೆಕಟ್ಟು ಪ್ರದೇಶದಲ್ಲಿ ಆ ದಿನ ಎಲ್ಲವೂ ನಿಶಬ್ದವಾಗಿರುತ್ತದೆ. ಇದೊಂದು ತಾತ್ಕಾಲಿಕ ಯೋಜನೆ. ಬೇಸಗೆಯಲ್ಲಿ ಅಣೆಕಟ್ಟಿನ ನೀರು ಖಾಲಿಯಾದ ಬಳಿಕ ಅಥವಾ ಕ್ರೆಸ್ಟ್‌ಗೇಟ್‌ಗಿಂತ ಅಣೆಕಟ್ಟಿನ ನೀರಿನ ಮಟ್ಟ ಕೆಳಗಿಳಿದ ವೇಳೆ ಮತ್ತೆ ಮೊದಲಿದ್ದ ಮಾದರಿಯ ಗೇಟ್‌ ನಿರ್ಮಾಣ ಮಾಡಬೇಕಿದೆ.

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.