Kolara; ಇವಿಎಂ ಉಗ್ರಾಣ ಪರಿಶೀಲಿಸಿದರೂ ಕೋರ್ಟ್ ಕೇಳಿದ್ದ ದಾಖಲೆ ಸಿಗಲೇ ಇಲ್ಲ!
Team Udayavani, Aug 13, 2024, 11:58 PM IST
ಕೋಲಾರ: ಕಳೆದ ವಿಧಾನಸಭೆ ಚುನಾವಣೆಯ ಮಾಲೂರು ಕ್ಷೇತ್ರದ ಫಲಿತಾಂಶದ ತಕರಾರು ಅರ್ಜಿ ವಿಚಾರವಾಗಿ ಹೈಕೋರ್ಟ್ ದಾಖಲೆ ಕೇಳಿದ್ದರಿಂದಾಗಿ ಜಿಲ್ಲಾಡಳಿತವು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯ ಸಂಕೀರ್ಣದಲ್ಲಿರುವ ಇವಿಎಂ ಉಗ್ರಾಣದ ಬಾಗಿಲು ತೆರೆದು ಪರಿಶೀಲನೆ ನಡೆಸಲಾಯಿತಾದರೂ ಹೈಕೋರ್ಟ್ ಕೇಳಿದ್ದ ನಿರ್ದಿಷ್ಟ ದಾಖಲೆ ಅಧಿಕಾರಿಗಳಿಗೆ ಲಭ್ಯವಾಗಿಲ್ಲ.
ಮಧ್ಯಾಹ್ನ 12 ಗಂಟೆ ವೇಳೆಗೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಡೀಸಿ ಅಕ್ರಂಪಾಷಾ, ಎಸ್ಪಿ ನಿಖೀಲ್ ಜತೆ ರಾಜಕೀಯ ಪಕ್ಷಗಳ ಸಮ್ಮುಖದಲ್ಲಿ ಮತ ಎಣಿಕೆ ಸಂದರ್ಭದಲ್ಲಿ ಸಂಗ್ರಹಿಸಿಟ್ಟರುವ ದಾಖಲೆ ಪರಿಶೀಲಿಸಿದರು. ಆದರೆ ಒಂದೂವರೇ ಗಂಟೆಗೂ ಅಧಿಕ ಕಾಲ ಪರಿಶೀಲನೆ ನಡೆಸಿದರೂ ಅಗತ್ಯ ದಾಖಲೆ ಸಿಗಲೇ ಇಲ್ಲ.
ತಕರಾರು ಅರ್ಜಿ ಸಲ್ಲಿಸಿರುವ ಮಾಜಿ ಶಾಸಕ ಕೆ.ಎಸ್. ಮಂಜುನಾಥ್ಗೌಡ ಮಾತನಾಡಿ, ಸಿಸಿ ಕೆಮರಾ ದೃಶ್ಯಾವಳಿ, 17 ಸಿ ಫಾರಂಗಳನ್ನು ನೀಡುವಂತೆ ನ್ಯಾಯಾಲಯವು ಆದೇಶ ಮಾಡಿತ್ತು. ಮರು ಮತ ಎಣಿಕೆಗೆ ಅಗತ್ಯವಿದ್ದ ದಾಖಲೆಗಳು ಚುನಾವಣೆ ಫಲಿತಾಂಶದ ದಿನದಂದೇ ಲಭ್ಯವಿತ್ತು. ಆದರೆ ಈಗ ಇಲ್ಲ ಎಂದರೆ ಏನು ಅರ್ಥ ಎಂದು ಪ್ರಶ್ನಿಸಿದರು. ಚುನಾವಣೆಯಲ್ಲಿ ಕಾಂಗ್ರೆಸ್ನ ಕೆ.ವೈ. ನಂಜೇಗೌಡ 50,955 ಮತ ಪಡೆದು ಗೆಲುವು ಸಾಧಿಸಿದರೆ, ಬಿಜೆಪಿಯ ಮಂಜುನಾಥಗೌಡ 50,707 ಮತ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.