Padubidriಕಂಚಿನಡ್ಕ ಟೋಲ್‌ ನಿರ್ಮಾಣಕ್ಕೆ ಯತ್ನ:ಅಧಿಕಾರಿಗಳನ್ನು ಹಿಮ್ಮೆಟ್ಟಿಸಿದ ಹೋರಾಟಗಾರರು


Team Udayavani, Aug 14, 2024, 12:53 AM IST

Padubidriಕಂಚಿನಡ್ಕ ಟೋಲ್‌ ನಿರ್ಮಾಣಕ್ಕೆ ಯತ್ನ:ಅಧಿಕಾರಿಗಳನ್ನು ಹಿಮ್ಮೆಟ್ಟಿಸಿದ ಹೋರಾಟಗಾರರು

ಪಡುಬಿದ್ರಿ: ಸೋಮವಾರವಷ್ಟೇ ಟೋಲ್‌ ಸಂಬಂಧಿ ಸರಕು ಸರಂಜಾಮುಗಳನ್ನು ಇಳಿಸಲು ಬಿಡದ ಪಡುಬಿದ್ರಿ ಕಂಚಿನಡ್ಕ ರಾಜ್ಯ ಹೆದ್ದಾರಿ 1ರ ಟೋಲ್‌ ವಿರೋಧಿ ಹೋರಾಟಗಾರರು, ಸಂಜೆಯ ವೇಳೆ ಟೋಲ್‌ ಪ್ರಸ್ತಾವನೆಯನ್ನು ರಾಜ್ಯ ಸರಕಾರ ಹಿಂಪಡೆಯಬೇಕೆಂಬ ನಿರ್ಣಯದೊಂದಿಗೆ ಇಂದೂ ಸಹಾ ಸ್ಥಳ ತನಿಖೆ, ಸರ್ವೇಗಳಿಗೆ ಆಗಮಿಸಿದ್ದ ಕೆಆರ್‌ಡಿಸಿಎಲ್‌ ಕಾರ್ಯಪಾಲಕ ಎಂಜಿನಿಯರ್‌ ರಘು ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಹೇಮಂತ್‌ ಅವರನ್ನು ಬರಿಗೈಲಿ ಹಿಮ್ಮೆಟ್ಟಿಸಿದ್ದಾರೆ.

ಜನತೆಗಾಗಿ ಇರಬೇಕಾದ ಸರಕಾರವು ಪಡುಬಿದ್ರಿ ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ಸ್ಥಾಪಿಸಲುದ್ದೇಶಿ ಸಿರುವ ಟೋಲ್‌ ಗೇಟ್‌ಗೆ ಪಡುಬಿದ್ರಿಯಿಂದ ಕಾರ್ಕಳದ ವರೆಗಿನ 40 ಹಳ್ಳಿÛಗರ ವಿರೋಧವಿರುವುದಾಗಿ ಸರಕಾರಕ್ಕೆ ವರದಿ ನೀಡಿ ಎಂದು ಪಡುಬಿದ್ರಿ ಟೋಲ್‌ ವಿರೋಧಿ ಹೋರಾಟಗಾರರ ಸಮಿತಿಯ ಅಧ್ಯಕ್ಷ ಸುಹಾಸ್‌ ಹೆಗ್ಡೆ ನಂದಳಿಕೆ ಅಧಿಕಾರಿಗಳಿಗೆ ಈ ವೇಳೆ ತಿಳಿಸಿದರು.

ಒಮ್ಮೆ ಕಂಚಿನಡ್ಕಕ್ಕೆ ಆಗಮಿಸಿ ಹೋರಾಟಗಾರರು ಒಟ್ಟಾಗುತ್ತಿರುವು ದನ್ನು ಕಂಡು ಮತ್ತೆ ಪೊಲೀಸರೊಂದಿಗೆ ಸ್ಥಳಕ್ಕಾಗಮಿಸಿದ ಎಂಜಿನಿಯರ್‌ಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಈ ವೇಳೆ ಪರಸ್ಪರ ಮಾತಿನ ಚಕಮಕಿಯೂ ನಡೆಯಿತು. ಪಡುಬಿದ್ರಿ ಪಿಎಸ್‌ಐ ಪ್ರಸನ್ನ ಹಾಗೂ ಸಿಬಂದಿ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

ಈ ಸಂದರ್ಭ ಪಡುಬಿದ್ರಿ ಗ್ರಾ. ಪಂ. ಅಧ್ಯಕ್ಷೆ ಶಶಿಕಲಾ ವೈ, ಅಶೋಕ್‌ ಶೆಟ್ಟಿ, ದಿನೇಶ್‌ ಕೋಟ್ಯಾನ್‌, ನವೀನ್‌ ಎನ್‌. ಶೆಟ್ಟಿ , ಕರವೇ ಜಿಲ್ಲಾಧ್ಯಕ್ಷ ಅನ್ಸಾರ್‌ ಅಹಮ್ಮದ್‌, ನವೀನ್‌ಚಂದ್ರ ಜೆ. ಶೆಟ್ಟಿ, ಮುಂತಾದವರು ಇದ್ದರು.

ಆ. 24ರಂದು ಬೃಹತ್‌ ಜನಾಂದೋಲನ
ಪಡುಬಿದ್ರಿ: ಪಡುಬಿದ್ರಿ-ಬೆಳ್ಮಣ್‌-ಕಾರ್ಕಳ ಟೋಲ್‌ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಆ. 24ರಂದು ಬೆಳಗ್ಗೆ 9ಕ್ಕೆ ಕಂಚಿನಡ್ಕದಿಂದ ಪಡುಬಿದ್ರಿ ವರೆಗೆ ಪಾದಯಾತ್ರೆ ನಡೆಸುವ ಮೂಲಕ ಪ್ರಸ್ತಾವಿತ ಕಂಚಿನಡ್ಕ ಟೋಲ್‌ಗೇಟನ್ನು ಹಿಂಪಡೆಯಲು ಬೃಹತ್‌ ಜನಾಂದೋಲನವನ್ನು ಹಮ್ಮಿಕೊಳ್ಳಲಾಡಿದೆ.

ಪ್ರಸ್ತಾವಿತ ಟೋಲ್‌ ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆಸಲಾದ ಸಮಿತಿಯ ಸಭೆಯಲ್ಲಿ ಈ ಕುರಿತಾದ ನಿರ್ಣಯವನ್ನು ಕೈಗೊಳ್ಳಲಾಗಿದೆ.

ಈಗಾಗಲೇ ಸುತ್ತಮುತ್ತಲ ಗ್ರಾಮಗಳ ಸಮಿತಿಯನ್ನು ರಚಿಸಲಾಗಿದ್ದು ಈ ಜನಾಂದೋಲನದಲ್ಲಿ ವಿದ್ಯಾರ್ಥಿಗಳು, ಕೈಗಾರಿಕಾ ಕಾರ್ಮಿಕರು, ಬಸ್‌ ಮಾಲಕರ ಸಂಘಟನೆಗಳು, ಕಾರು, ಟೆಂಪೋ ಚಾಲಕ ಮಾಲಕರು ಸೇರಿದಂತೆ ಸುಮಾರು 10 ಸಾವಿರ ಮಂದಿ ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.