Hindenburg ಆರೋಪ: ಆ.22ಕ್ಕೆ ಕಾಂಗ್ರೆಸ್‌ ಪ್ರತಿಭಟನೆ

ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ,  ಮಾಧವಿ ರಾಜೀನಾಮೆ, ಜಂಟಿ ಸಂಸದೀಯ ಸಮಿತಿ ತನಿಖೆಗೆ ಆಗ್ರಹ

Team Udayavani, Aug 14, 2024, 6:51 AM IST

Kharge-rahul

ಹೊಸದಿಲ್ಲಿ: ಸೆಬಿ ಅಧ್ಯಕ್ಷೆ ಮಾಧವಿ ಪುರಿ ಬುಚ್‌ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಹಿಂಡನ್‌ಬರ್ಗ್‌ ಆರೋಪ ಪ್ರಕರಣದ ತನಿಖೆಯನ್ನು ಜಂಟಿ ಸಂಸ ದೀಯ ಸಮಿತಿಗೆ ಒಪ್ಪಿಸಬೇಕು. ಇಲ್ಲವಾದಲ್ಲಿ ಆ.22ರಂದು ದೇಶಾ ದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್‌ ಮಂಗಳವಾರ ಘೋಷಿಸಿದೆ.

ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾ ರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷ ಈ ಬಗ್ಗೆ ಗೊತ್ತುವಳಿಯನ್ನು ಅಂಗೀಕರಿಸಿದೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರ ಶೀಘ್ರವೇ ಕ್ರಮ ಕೈಗೊಳ್ಳಬೇಕು. ಈ ಮೂಲಕ ಅದಾನಿ ಗ್ರೂಪ್‌ನ ನಿಯಂತ್ರಕರ ತನಿಖೆಗೆ ಸಂಬಂಧಿಸಿದಂತೆ ಉಂಟಾಗಿರುವ ಸಂಭಾವ್ಯ ಹಿತಾಸಕ್ತಿ ಸಂಘರ್ಷಗಳನ್ನು ಪರಿಹರಿಸಬೇಕು ಎಂದು ಒತ್ತಾ ಯಿಸಿದೆ. ಜತೆಗೆ ಹಗರಣದ ಸಂಪೂರ್ಣ ತನಿಖೆಯನ್ನು ಸಂಸತ್ತಿನ ಜಂಟಿ ಸಮಿತಿಗೆ ವಹಿಸಬೇಕು ಎಂದು ಆಗ್ರಹಿಸಿದೆ.

ಸೆಬಿ ಹಾಗೂ ಅದಾನಿ ಗ್ರೂಪ್‌ನ ನಡುವೆ ಇರುವ ಸಂಬಂಧದ ಕುರಿತಾಗಿ ವಿಸ್ತೃತ ತನಿಖೆ ನಡೆಯಬೇಕು. ಸಣ್ಣ ಪ್ರಮಾಣದ ಹೂಡಿಕೆ ದಾರರನ್ನು ಅವಗಣಿಸಬಾರದು. ಮೋದಿ ಸರಕಾರ ಕೂಡಲೇ ಸೆಬಿ ಮುಖ್ಯಸ್ಥರ ರಾಜೀ ನಾಮೆಯನ್ನು ಕೇಳಬೇಕು. ಇದರ ತನಿಖೆಗೆ ಜಂಟಿ ಸಂಸದೀಯ ಸಮಿತಿಯನ್ನು ರಚಿಸ ಬೇಕು ಎಂದು ಖರ್ಗೆ ಟ್ವೀಟ್‌ ಮಾಡಿದ್ದಾರೆ.

ಪ್ರತಿಭಟನೆಯ ಸಮಯದಲ್ಲಿ ರಾಜ್ಯಗಳಲ್ಲಿ ಇ.ಡಿ. ಕಚೇರಿಯ ಎದುರಲ್ಲೂ ಪ್ರತಿಭಟನೆ ನಡೆಸಲಾಗುವುದು ಎನ್ನಲಾಗಿದೆ. ಈ ಸಭೆ ಯಲ್ಲಿ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳು ಮತ್ತು ಪ್ರದೇಶ ಕಾಂಗ್ರೆಸ್‌ ಸಮಿತಿಯ ಮುಖ್ಯಸ್ಥರು ಭಾಗಿಯಾಗಿದ್ದರು.

ಜಾತಿಗಣತಿ, ಸಂವಿಧಾನ ಪಾಲನೆ ಬಗ್ಗೆಯೂ ಚರ್ಚೆ:
ಮಂಗಳವಾರ ನಡೆದ ಸಭೆಯಲ್ಲಿ ಅದಾನಿ ಹಾಗೂ ಹಿಂಡನ್‌ಬರ್ಗ್‌ ವಿಷಯದ ಜತೆಗೆ ಜಾತಿಗಣತಿ, ಸಂವಿಧಾನ ಪಾಲನೆ, ಅಗ್ನಿ ಪಥ, ನಿರುದ್ಯೋಗ, ಎಂಎಸ್‌ಪಿಗೆ ಕಾನೂನು ಖಾತ್ರಿ, ಮುಂಬರುವ ವಿಧಾನಸಭೆ ಚುನಾವಣೆಗಳಿಗೆ ಸಂಬಂಧಿಸಿದ ವಿಚಾರಗಳನ್ನು ಸಹ ಚರ್ಚಿಸಲಾಯಿತು.

ಕೇಂದ್ರ ಸರಕಾರ ದೇಶಾದ್ಯಂತ ಜಾತಿ ಗಣತಿಯನ್ನು ನಡೆಸಬೇಕು. ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷವನ್ನು ಅಣಿಗೊಳಿಸುವುದು, ಪ್ರಚಾರದ ವೇಳೆ ರಾಷ್ಟ್ರದ ಹಿತವನ್ನು ಕುರಿತ ಯಾವೆಲ್ಲ ವಿಚಾರವನ್ನು ಜನರ ಮುಂದಿಡಬೇಕು ಎಂಬುದರ ಬಗ್ಗೆ ಮಂಗಳವಾರ ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ.

ಹಿಂಡನ್‌ಬರ್ಗ್‌ ಮುಂದೊಂದು ದಿನ ನ್ಯಾಯಾಂಗವನ್ನೂ ಪ್ರಶ್ನಿಸಬಹುದು: ಸಾಳ್ವೆ
ಅಮೆರಿಕದ ಶಾರ್ಟ್‌ ಸೆಲ್ಲರ್‌ ಸಂಸ್ಥೆ ಹಿಂಡನ್‌ಬರ್ಗ್‌ ರಿಸರ್ಚ್‌ಗೆ ಸಂಬಂಧಿಸಿದಂತೆ ಎಚ್ಚರಿಕೆ ನೀಡಿರುವ ಹಿರಿಯ ಕಾನೂನು ತಜ್ಞ ಹರೀಶ್‌ ಸಾಳ್ವೆ, ಇದು ಭಾರತವನ್ನು ಅಪಹಾಸ್ಯ ಮಾಡುತ್ತಿದೆ ಎಂದು ಹೇಳಿದ್ದಾರೆ. ಇಂತಹವುಗಳನ್ನು ಸರಿಯಾಗಿ ಪರಿಶೀಲನೆ ನಡೆಸಬೇಕು, ಇಲ್ಲದಿದ್ದರೆ ಈಗ ಸೆಬಿಯನ್ನು ಪ್ರಶ್ನಿಸುತ್ತಿರುವ ಇದು ಮುಂದೊಂದು ದಿನ ಭಾರತದ ನ್ಯಾಯಾಂಗವನ್ನು ಪ್ರಶ್ನಿಸಬಹುದು ಎಂದು ಅವರು ಹೇಳಿದ್ದಾರೆ.

ತನಿಖೆ ತೀವ್ರಗೊಳಿಸಲು ಕೋರಿ ಸ್ರುಪೀಂಗೆ ಅರ್ಜಿ
ಅದಾನಿ ಗ್ರೂಪ್‌ಗೆ ಸಂಬಂಧಿಸಿದಂತೆ ಬಾಕಿ ಇರುವ 2 ಪ್ರಕರಣಗಳ ತನಿಖೆಯನ್ನು ತೀವ್ರಗೊಳಿಸುವಂತೆ ಸೂಚಿಸಲು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಸೆಬಿ ಮುಖ್ಯಸ್ಥೆಗೆ ಸಂಬಂಧಿಸಿದಂತೆ ಹಿಂಡನ್‌ಬರ್ಗ್‌ ಬಿಡುಗಡೆ ಮಾಡಿರುವ ಹೊಸ ವರದಿಯು ದೇಶದ ಜನರಲ್ಲಿ ಅನುಮಾನ ಮೂಡಿಸಿದೆ.

ಈ ಹಿಂದಿನ ವರದಿ ಬಂದಾಗ ಸೆಬಿ ಆರಂಭಿಸಿದ 2 ತನಿಖೆಗಳು ಇನ್ನೂ ಬಾಕಿ ಇವೆ. ಇವುಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೆಬಿಗೆ ಸೂಚಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ವಿಶಾಲ್‌ ತಿವಾರಿ ಎಂಬ ವ್ಯಕ್ತಿ ಈ ಅರ್ಜಿ ಸಲ್ಲಿಕೆ ಮಾಡಿದ್ದು, ಮೊದಲ ಬಾರಿ ವರದಿ ಬಂದಾಗಲೂ ಇವರು ಅರ್ಜಿ ಸಲ್ಲಿಸಿದ್ದರು.

5 ತಿಂಗಳಲ್ಲಿ ಷೇರು ಹೂಡಿಕೆಯಿಂದ ರಾಹುಲ್‌ಗೆ 46.50 ಲಕ್ಷ ರೂ. ಲಾಭ!
ಕಳೆದ 5 ತಿಂಗಳಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿಯವರು ಷೇರು ಮಾರುಕಟ್ಟೆ ಹೂಡಿಕೆ ಮೂಲಕ ಗಳಿ ಸಿದ ಲಾಭ ವೆಷ್ಟು ಗೊತ್ತಾ? ಬರೋ ಬ್ಬರಿ 46.5 ಲಕ್ಷ ರೂ.! ಖಾಸಗಿ ಸುದ್ದಿ ಸಂಸ್ಥೆ ಐಎಎನ್‌ಎಸ್‌, ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ರಾಹುಲ್‌ ನೀಡಿದ್ದ ಆಸ್ತಿ ವಿವರದ ಆಧರಿಸಿ ಈ ವರದಿ ಸಿದ್ಧಪಡಿಸಿದೆ. ರಾಹುಲ್‌ ಹೂಡಿಕೆ ಮೌಲ್ಯ 4.33 ಕೋಟಿ ರೂ.ಗಳಿಂದ 4.80 ಕೋಟಿ ರೂ.ಗಳಿಗೆ ಹೆಚ್ಚಿದೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.