Dakshina Kannada; ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಕ್ರಿಯಾ ಯೋಜನೆ: ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ರೈತ ಮುಖಂಡರ ಸಭೆ

Team Udayavani, Aug 14, 2024, 12:57 AM IST

Dakshina Kannada; ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಕ್ರಿಯಾ ಯೋಜನೆ: ಜಿಲ್ಲಾಧಿಕಾರಿ

ಮಂಗಳೂರು: ದ.ಕ.ಜಿಲ್ಲೆಯನ್ನು ಪೋಡಿ (ಅಳತೆ) ಮುಕ್ತವಾಗಿ ಮಾಡುವ ದಿಶೆಯಲ್ಲಿ ಶೀಘ್ರವೇ ಒಂದು ಗ್ರಾಮವನ್ನು ಪ್ರಾಯೋಗಿಕವಾಗಿ ತೆಗೆದುಕೊಳ್ಳಮುಲ್ಲೈ ಮುಗಿಲನ್‌ ತಿಳಿಸಿದ್ದಾರೆ.

ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾದ ರೈತ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದ.ಕ. ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಸ್ತಿಗಳ ಕ್ರಮಬದ್ಧ ಅಳತೆ (ಪೋಡಿ)ಆಗುತ್ತಿಲ್ಲ. ಸಾಕಷ್ಟು ಅರ್ಜಿಗಳು ಬಾಕಿಯಾಗಿವೆ ಎಂಬ ದೂರು ಇವೆ. ಆಸ್ತಿಗಳ ಪ್ಲಾಟಿಂಗ್‌ ಆಗದಿರುವುದೇ ಜಿಲ್ಲೆಯ ದೊಡ್ಡ ಸಮಸ್ಯೆ. ಶೇ.90ರಷ್ಟು ಆಸ್ತಿಗಳು ಬಳುವಳಿಯಿಂದ ಬಂದಿ ರುತ್ತವೆ. ಇವುಗಳನ್ನು ಹಿಡುವಳಿ ದಾರರು ಅಳತೆ ಮಾಡಿಸದೆ ಬಾಕಿ ಇರಿಸಿದ್ದಾರೆ. ಏಕಮುಕ್ತಿ ಪೋಡಿ ಬದಲು ಸಂಪೂರ್ಣ ಜಮೀನು ಅಳತೆಗೆ ಅವಕಾಶ ನೀಡುತ್ತಿಲ್ಲ. ಒಮ್ಮೆ ಅಳತೆ ಮಾಡಿಸಿದರೆ ಮತ್ತೆ ಸಮಸ್ಯೆ ಆಗುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ತುಂಬೆ ಡ್ಯಾಂ: 15 ದಿನಗಳಲ್ಲಿ ಪರಿಹಾರ ಒದಗಿಸಲು ಸೂಚನೆ
ತುಂಬೆ ವೆಂಟೆಡ್‌ ಡ್ಯಾಂ ಅಣೆಕಟ್ಟನ್ನು 4 ಮೀಟರ್‌ನಿಂದ 6 ಮೀಟರ್‌ವರೆಗೆ ಏರಿಕೆ ಮಾಡುವ ಸಂದರ್ಭ ಮುಳುಗಡೆ ಯಾಗುವ ಭೂಮಿಯ ಪರಿಹಾರ ಬಾಕಿ ಇರುವ ಬಗ್ಗೆ ರೈತರು ಸಭೆಯಲ್ಲಿ ಗಮನ ಸೆಳೆದಾಗ, ಸಂತ್ರಸ್ತರಿಗೆ ಪ್ರಕರಣವಾರು ಚರ್ಚಿಸಿ ಮುಂದಿನ 15 ದಿನಗಳಲ್ಲಿ ಸಮಸ್ಯೆ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.

ಮನಪಾ ಭೂಸ್ವಾಧೀನ ಅಧಿಕಾರಿ ರವಿ ಕುಮಾರ್‌ ಮಾತನಾಡಿ, 5ರಿಂದ 6 ಮೀ. ಏರಿಕೆಯ ವೇಳೆ ಮುಳುಗಡೆಯಾಗುವ ಒಟ್ಟು ಭೂಮಿಗೆ 14.88 ಕೋಟಿ ರೂ. ಪರಿಹಾರ ನಿಗದಿಪಡಿಸಿ 8.26 ಕೋಟಿ ರೂ. ಪರಿಹಾರವನ್ನು ದಾಖಲೆ ಸರಿ ಇದ್ದ ರೈತರಿಗೆ ವಿತರಿಸಲಾಗಿದೆ. ಕೆಲವರ ದಾಖಲೆ ಸರಿ ಇಲ್ಲದೆ ಪರಿಹಾರ ನೀಡಲು ಬಾಕಿಯಾಗಿದೆ ಎಂದರು.
ಅಡಿಕೆಗೆ ಬೆಂಬಲ ಬೆಲೆ ಕುರಿತಂತೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸ ಲಾಗುವುದು ಎಂದು ಡಿಸಿ ಹೇಳಿದರು.

ಶುಲ್ಕ ರಹಿತ ಆಧಾರ್‌ ಲಿಂಕ್‌
ಕೃಷಿ ಪಂಪುಸೆಟ್‌ಗಳಿಗೆ ಮೀಟರ್‌ ಅಳವಡಿಕೆ ಮಾಡಿಲ್ಲ. ಆದರೂ ಮೆಸ್ಕಾಂ ನವರು ಕೃಷಿ ಪಂಪ್‌ಸೆಟ್‌ಗೆ ಆಧಾರ್‌ ಲಿಂಕ್‌ ಕಡ್ಡಾಯ ಗೊಳಿಸಿರುವುದು ಖಂಡನೀಯ. ಆಧಾರ್‌ ಲಿಂಕ್‌ಗೆ ಕೆಲವೆಡೆ 500 ರೂ. ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ದರು.

ಜಿಲ್ಲಾಧಿಕಾರಿ ಮಾತನಾಡಿ, ಆಧಾರ್‌ ಲಿಂಕ್‌ಗೆ ಶುಲ್ಕ ವಸೂಲಿ ಅನಗತ್ಯ ಎಂದು ತಿಳಿಸಿದರು. ಈ ನಡುವೆ ಮೆಸ್ಕಾಂ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಆಧಾರ್‌ ಜೋಡಣೆ ಕಾರ್ಯ ಪ್ರಗತಿಯಲ್ಲಿದೆ. ಆದರೆ ಇದಕ್ಕೆ ಮೆಸ್ಕಾಂ ಯಾವುದೇ ಶುಲ್ಕ ವಿಧಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ.

ರೈತ ಮುಖಂಡರಾದ ಶ್ರೀಧರ ಶೆಟ್ಟಿ ಬೈಲುಗುತ್ತು, ರವಿಕಿರಣ ಪುಣಚ, ಮನೋಹರ ಶೆಟ್ಟಿ, ಭಾರತೀಯ ಕಿಸಾನ್‌ ಸಂಘ ಪುತ್ತೂರು ಅಧ್ಯಕ್ಷ ಸುಬ್ರಾಯ ಶೆಟ್ಟಿ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ರೈತರ ಅಹವಾಲುಗಳು
– ಹೊರ ರಾಜ್ಯ-ದೇಶಗಳಿಂದ ಆಮದು ಮಾಡಿಕೊಳ್ಳಲಾಗುವ ಅಡಿಕೆಯನ್ನು ನಮ್ಮ ಜಿಲ್ಲೆಯ ಉತ್ತಮ ಗುಣಮಟ್ಟದ ಅಡಿಕೆಯ ಜತೆ ಕಲಬೆರಕೆ ಮಾಡಿಕೊಂಡು ಹೊರ ದೇಶಗಳಿಗೆ ರಫ್ತು ಮಾಡುವ ಕಾರ್ಯ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು.
-ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಜಲವಿದ್ಯುತ್‌ ಯೋಜನೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು.
-ದ.ಕ.ಜಿಲ್ಲೆಯ ಅರಣ್ಯದಂಚಿನ ಗ್ರಾಮಗಳಲ್ಲಿ ಮಂಗನ ಹಾವಳಿ ವಿಪರೀತವಾಗಿವೆ. ಆದ್ದರಿಂದ “ಮಂಕಿ ಪಾರ್ಕ್‌’ ಸ್ಥಾಪನೆಯಾಗಬೇಕು. ಮಂಗನ ಉಪಟಳದಿಂದ ಬೆಳೆ ಹಾನಿಗೆ ಒಳಗಾದರೆ ಸೂಕ್ತ ಪರಿಹಾರ ನೀಡಬೇಕು.
– ರೈತರ ಕೋವಿಗೆ ಈ ಹಿಂದಿನಂತೆ ತಾಲೂಕು ಮಟ್ಟದಲ್ಲೇ ತಹಶೀಲ್ದಾರ್‌ರಿಂದ ಒಪ್ಪಿಗೆ ಸಿಗಬೇಕು.

ವಿದ್ಯುತ್‌ ಲೈನ್‌ಗೆ ವಿರೋಧ
ಉಡುಪಿಯ ಯುಪಿಸಿಎಲ್‌ನಿಂದ ಕಾಸರಗೋಡಿಗೆ 440 ಕೆ.ವಿ. ವಿದ್ಯುತ್‌ ಲೈನ್‌ ಅಳವಡಿಕೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಯೋಜನೆಯನ್ನು ಬೇಕಿದ್ದರೆ, ಸಮುದ್ರ ಮಾರ್ಗ, ಹೆದ್ದಾರಿ ಅಥವಾ ರೈಲ್ವೇ ಮಾರ್ಗದ ಮೂಲಕ ಮಾಡಲಿ ಎಂದು ಸಭೆಯಲ್ಲಿ ಭಾಗವಹಿಸಿದ್ದ ರೈತ ಮುಖಂಡರು ವಿರೋಧಿಸಿದರು.

ಡಿಸಿಯವರು ಮಾತನಾಡಿ, ಇದು ಸರಕಾರದ ಯೋಜನೆ ಯಾಗಿದೆ. ರೈತರ ಹೋರಾಟಕ್ಕೆ ವಿರೋಧವಿಲ್ಲ. ಆದರೆ ರೈತರ ಸಮಸ್ಯೆಗಳನ್ನು ಅರಿತು ಅದಕ್ಕೆ ಪರಿಹಾರ ಕಂಡುಕೊಳ್ಳುವ ಯೋಜನೆಯನ್ನು ಕೈಗೆತ್ತಿ ಗೊಂಡಿರುವ ಸಂಸ್ಥೆಯ ಜತೆ ಚರ್ಚೆ ನಡೆಸಲು ಸಭೆಯ ವ್ಯವಸ್ಥೆ ಮಾಡುತ್ತೇನೆ ಎಂದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.