Target Ilyas ; ಕಲ್ಲಾಪುವಿನಲ್ಲಿ ಸಮೀರ್‌ ಹತ್ಯೆ ಪ್ರಕರಣ: ನಾಲ್ವರು ವಶಕ್ಕೆ

ಟಾರ್ಗೆಟ್‌ ಇಲ್ಯಾಸ್‌ ಭಾವನ ಮೇಲೆ ಶಂಕೆ ?

Team Udayavani, Aug 14, 2024, 6:50 AM IST

Target Ilyas ; ಕಲ್ಲಾಪುವಿನಲ್ಲಿ ಸಮೀರ್‌ ಹತ್ಯೆ ಪ್ರಕರಣ: ನಾಲ್ವರು ವಶಕ್ಕೆ

ಉಳ್ಳಾಲ: ಟಾರ್ಗೆಟ್‌ ಇಲ್ಯಾಸ್‌ ಕೊಲೆಗೆ ಪ್ರತಿಕಾರವಾಗಿ ಕೊಲೆಯ ಪ್ರಮುಖ ಆರೋಪಿಯಾಗಿದ್ದ ಕಡಪ್ಪರ ಸಮೀರ್‌ ಹತ್ಯೆಗೆ ಸಂಬಂಧಿಸಿದಂತೆ ಹಲವರನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸಿದ ಪೊಲೀಸರಿಗೆ, ಈ ಕೊಲೆಯಲ್ಲಿ ಐವರು ಭಾಗಿಯಾಗಿರುವುದನ್ನು ಖಚಿತಪಡಿಸಿಕೊಂಡಿದ್ದು, ಇಲ್ಯಾಸ್‌ ಪತ್ನಿಯ ಸಹೋದರ ಮೊಹಮ್ಮದ್‌ ನೌಷದ್‌ ಈ ಕೊಲೆಯ ಪ್ರಮುಖ ರೂವಾರಿಯಾಗಿದ್ದು, ಆತನ ತಂಡ ಈ ಕೃತ್ಯ ಎಸಗಿರುವುದು ದೃಢಪಟ್ಟಿದೆ.

ಕಡಪ್ಪರ ಸಮೀರ್‌ ತನ್ನ ತಾಯಿ ಮತ್ತು ಕುಟುಂಬದ ಸದಸ್ಯರೊಂದಿಗೆ ಪಂಪ್‌ವೆಲ್‌ನಲ್ಲಿರುವ ತನ್ನ ಫ್ಲ್ಯಾಟ್‌ಗೆ ತೆರಳುವ ಸಂದರ್ಭದಲ್ಲಿ ಕಲ್ಲಾಪುವಿನ ವಾಣಿಜ್ಯ ಸಂಕೀರ್ಣದ ಬಳಿ ಫೋನ್‌ನಲ್ಲಿ ಮಾತನಾಡುತ್ತಿದ್ದ ಸಮೀರ್‌ನನ್ನು ಕಾರಿನಲ್ಲಿ ಬಂದಿದ್ದ ಅಪರಿಚಿತರ ತಂಡ ತಲವಾರಿನಿಂದ ತಲೆ ಮತ್ತು ಕುತ್ತಿಗೆಗೆ ಕಡಿದು ಪರಾರಿಯಾಗಿತ್ತು.ಇಲ್ಯಾಸ್‌ ಹತ್ಯೆಗೆ ಪ್ರತಿಕಾರವಾಗಿ ಈ ಕೊಲೆ ನಡೆದಿತ್ತು ಎಂಬ ಪ್ರಾಥಮಿಕ ಮಾಹಿತಿಯಂತೆ ಕಮಿಷನರ್‌ ಅನುಪಮ ಅಗರವಾಲ್‌ ನೇತೃತ್ವದ‌ ತಂಡ ಹಲವರನ್ನು ವಶಕ್ಕೆ ತೆಗೆದುಕೊಂಡು ಕೊಲೆ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ.

ಕೊಲೆ ಕಣ್ಣಾರೆ ಕಂಡಿದ್ದ ನೌಷಾದ್‌: ದಾವೂದ್‌, ಸಮೀರ್‌ ಕಡಪ್ಪರ ನೇತೃತ್ವದಲ್ಲಿ 2018ರ ಜ. 13ರಂದು ಬೆಳ್ಳಂಬೆಳಗ್ಗೆ ಮಂಗಳೂರಿನ ಫ್ಲ್ಯಾಟ್‌ನಲ್ಲಿ ಇಲ್ಯಾಸ್‌ ಮಲಗಿದ್ದ ವೇಳೆಯೇ ನುಗ್ಗಿ ಕೊಲೆ ಮಾಡಿ ಪರಾರಿಯಾಗಿತ್ತು. ಮನೆಯಲ್ಲಿ ಇಲ್ಯಾಸ್‌ ಅವರ ಅತ್ತೆ ಆಸ್ಮತ್‌, ಬಾವ ಮೊಹಮ್ಮದ್‌ ನೌಷದ್‌ ಮತ್ತು ಇಲ್ಯಾಸ್‌ನ ಸಣ್ಣ ಮಗು ಈ ಘಟನೆಗೆ ಪ್ರತ್ಯಕ್ಷ ಸಾಕ್ಷಿಯಾಗಿದ್ದರು. ಆದರೆ ಕೊಲೆ ಕೇಸ್‌ 2013ರ ಡಿಸೆಂಬರ್‌ನಲ್ಲಿ ಖುಲಾಸೆಯಾದ ಹಿನ್ನೆಲೆಯಲ್ಲಿ ಇಲ್ಯಾಸ್‌ನ ತಂಡ ಪ್ರತಿಕಾರಕ್ಕಾಗಿ ಕಾದಿತ್ತು. ಕೊಲೆ ನಡೆದ ಸಂದರ್ಭದಲ್ಲಿಯೇ ಇಲ್ಯಾಸ್‌ನ ದೊಡ್ಡ ಬಾವ ಫಾರೂಕ್‌ ಕೊಲೆಗೆ ಸ್ಕಚ್‌ ರೂಪಿಸಿರುವ ಮಾಹಿತಿಯನ್ನು ಪೊಲೀಸರು ಪಡೆದು ಆ ಸಂದರ್ಭದಲ್ಲಿ ಕಾಲಿಗೆ ಶೂಟ್‌ ಮಾಡಿ ಆರೋಪಿಗಳನ್ನು ಹಿಮ್ಮೆಟ್ಟಿಸಿದ್ದರು. ಆದರೆ ಕೊಲೆಯನ್ನು ಕಣ್ಣಾರೆ ಕಂಡಿದ್ದ ನೌಷಾದ್‌ ಈ ಕೊಲೆಯಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಈ ಕೊಲೆಯಲ್ಲಿ ನೌಷದ್‌ನೊಂದಿಗೆ ನಾಟೇಕಲ್‌ನ ನಿಯಾಝ್, ಬಜಾಲ್‌ನ ತನ್ವೀರ್‌, ಪಡುಬಿದ್ರೆಯ ಇಕ್ಬಾಲ್‌ ಸಹಕರಿಸಿರುವ ಮಾಹಿತಿಯಂತೆ ಆವರನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಸಮೀರ್‌ನನ್ನು ಚಿನ್ನ ದರೋಡೆ ವಿಚಾರದಲ್ಲಿ ಉಪ್ಪಳದ ತಂಡ ಕೊಲೆ ನಡೆಸಿರಬೇಕು ಎಂದು ಶಂಕಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಈ ಹತ್ಯೆ ಇಲ್ಯಾಸ್‌ ಕೊಲೆಗೆ ಪ್ರತಿಕಾರವಾಗಿ ನಡೆದಿರುವುದು ದೃಡಪಟ್ಟಿದೆ. ಉಳ್ಳಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.