Bantwal: ಕಟ್ಟಡ ತೆರವಿನ ಅನುದಾನ ಹೊಣೆ ಪುರಸಭೆಗೆ

ಬಿ.ಸಿ.ರೋಡು: ಅಂಬೇಡ್ಕರ್‌ ವಸತಿ (ಆಶ್ರಮ) ಶಾಲೆಯ ಕಟ್ಟಡ ಶಿಥಿಲ

Team Udayavani, Aug 14, 2024, 1:09 PM IST

Bantwal: ಕಟ್ಟಡ ತೆರವಿನ ಅನುದಾನ ಹೊಣೆ ಪುರಸಭೆಗೆ

ಬಂಟ್ವಾಳ: ಕಟ್ಟಡ ಶಿಥಿಲಾವಸ್ಥೆಯಲ್ಲಿದೆ ಎನ್ನುವ ಕಾರಣಕ್ಕೆ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಗೊಂಡಿರುವ ಬಿ.ಸಿ.ರೋಡಿನ ಭಾರತರತ್ನ ಡಾ| ಬಿ.ಆರ್‌. ಅಂಬೇಡ್ಕರ್‌ ವಸತಿ(ಆಶ್ರಮ) ಶಾಲೆಯ ಹಳೆ ಕಟ್ಟಡದ ತೆರವಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆದೇಶ ಬಂದಿದ್ದು, ಬಂಟ್ವಾಳ ಪುರಸಭೆಯ ಅನುದಾನ ಬಳಸಿ ಕಟ್ಟಡ ತೆರವಿಗೆ ಬಂಟ್ವಾಳ ಸಮಾಜ ಕಲ್ಯಾಣ ಇಲಾಖೆಗೆ ಆದೇಶಿಸಲಾಗಿದೆ.

ಬಿ.ಸಿ.ರೋಡ್‌ನ‌ ತಾ.ಪಂ. ಕಚೇರಿ ಬಳಿ ಇರುವ ಆಶ್ರಮ ಶಾಲೆಯು ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯಾಚರಿಸುತ್ತಿದ್ದು, ಕಟ್ಟಡ ಸುರಕ್ಷಿತ ವಲ್ಲ ಎಂಬ ತಾಂತ್ರಿಕ ವರದಿ ಬಂದ ಹಿನ್ನೆಲೆಯಲ್ಲಿ 2022-23ನೇ ಸಾಲಿನಲ್ಲಿ ಶಾಲೆಯನ್ನು ಬೆಂಜನಪದವಿನ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ ಸ್ಥಳಾಂತರಗೊಂಡು ವರ್ಷ ಕಳೆದರೂ ಕಟ್ಟಡ ತೆರವಿಗೆ ಅನುಮತಿ ಕೇಳಿ ಪ್ರಸ್ತಾವನೆ ಸಲ್ಲಿಕೆಯಾಗಿದ್ದರೂ, ಇಲಾಖೆಯ ಕೇಂದ್ರ ಕಚೇರಿಯಿಂದ ಆದೇಶ ಬಂದಿರಲಿಲ್ಲ.

ಮುಖ್ಯಾಧಿಕಾರಿಗಳಿಗೆ ಪತ್ರ

ಕಟ್ಟಡ ತೆರವಿಗೆ ಯಾವುದೇ ಅಡ್ಡಿ ಇಲ್ಲದಿದ್ದರೂ ಇಲಾಖೆ ಮಾತ್ರ ಸುಮ್ಮನೆ ಕುಳಿತಿದೆ ಎಂಬ ಆರೋಪವೂ ಕೇಳಿಬಂದಿತ್ತು. ಇದೀಗ ಕಳೆದೆರಡು ದಿನಗಳ ಹಿಂದಷ್ಟೇ ತೆರವಿನ ಕುರಿತು ಆದೇಶ ಬಂದಿದ್ದು, ಮುಂದೆ ತೆರವಿನ ಕುರಿತು ಅನುದಾನ ನೀಡುವಂತೆ ಬಂಟ್ವಾಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿಗಳಿಗೆ ಪತ್ರ ಬರೆಯ ಬೇಕಿದೆ.ಆದರೆ ಅವರ ಪತ್ರ ಬಂದ ತತ್‌ಕ್ಷಣ ಪುರಸಭೆ ಅದಕ್ಕೆ ಸ್ಪಂದಿಸುತ್ತದೆಯೇ ಅಥವಾ ಅವರು ಕೂಡ ಅನುದಾನ ಲಭ್ಯವಿಲ್ಲ ಎಂಬ ಉತ್ತರ ನೀಡುವ ಸಾಧ್ಯತೆ ಇದೆ. ಆಶ್ರಮ ಶಾಲೆಗೆ ಸ್ಥಳೀಯಾಡಳಿತ ಪುರಸಭೆಯೇ ಆದರೂ ಒಂದು ಕಟ್ಟಡದ ತೆರವಿಗೆ ಪುರಸಭೆಯಿಂದ ಅನುದಾನ ನೀಡುವುದಕ್ಕೆ ಯಾವ ರೀತಿ ಅವಕಾಶಗಳಿವೆ ಎಂಬುದರ ಕುರಿತು ಕೂಡ ಹಲವು ಅಭಿಪ್ರಾಯಗಳಿವೆ.

ಅನುದಾನಕ್ಕಾಗಿ ಮನವಿ

ಪುರಸಭೆಯ ಅನುದಾನ ಬಳಸಿಕೊಂಡು ಆಶ್ರಮ ಶಾಲೆಯ ಕಟ್ಟಡ ತೆರವು ಮಾಡುವಂತೆ ಕಳೆದೆರಡು ದಿನಗಳ ಹಿಂದಷ್ಟೇ ಆದೇಶ ಬಂದಿದ್ದು, ಮುಂದೆ ಪುರಸಭೆಗೆ ಪತ್ರ ಬರೆದು ಅನುದಾನಕ್ಕಾಗಿ ಮನವಿ ಮಾಡಲಿದ್ದೇವೆ. ಅವರು ಅನುದಾನ ನೀಡಿದ ಬಳಿಕ ತೆರವು ಕಾರ್ಯ ನಡೆಯಲಿದೆ. -ಸುನೀತಾ, ಸಹಾಯಕ ನಿರ್ದೇಶಕಿ, ಸಮಾಜ ಕಲ್ಯಾಣ ಇಲಾಖೆ, ಬಂಟ್ವಾಳ.

ಕೆಲವು ವರ್ಷ ಬಾಡಿಗೆ ಕಟ್ಟಡ

ಕಟ್ಟಡ ತೆರವು ಪ್ರಕ್ರಿಯೆಗಳು ಪೂರ್ಣ ಗೊಂಡ ಬಳಿಕವೇ ಮುಂದೆ ಇಲಾಖೆಯ ಮೂಲಕ ಹೊಸ ಕಟ್ಟಡಕ್ಕೆ ಕ್ರಿಯಾಯೋಜನೆ ಸಿದ್ಧಗೊಂಡು ಅನುದಾನಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಬೇಕಿದೆ. ಆದರೆ ಈ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳುವುದಕ್ಕೆ ಇನ್ನೂ ಒಂದಷ್ಟು ಸಮಯಗಳು ಹಿಡಿ ಯುವುದರಿಂದ ಸದ್ಯಕ್ಕೆ ಹೊಸ ಕಟ್ಟಡ ನಿರ್ಮಾಣ ಅಸಾಧ್ಯವಾಗಿದ್ದು, ಇನ್ನೂ ಒಂದಷ್ಟು ವರ್ಷ ಬಾಡಿಗೆ ಕಟ್ಟಡದಲ್ಲೇ ಕಾರ್ಯಾಚರಿಸಬೇಕಿದೆ.

4 ದಶಕಗಳಿಂದ ಇ‌ಲ್ಲಿ ಕಾರ್ಯಾಚರಿಸು ತ್ತಿದ್ದ ಆಶ್ರಮ ಶಾಲೆಲ್ಲಿ 1-5ನೇ ತರಗತಿಯ ವರೆಗೆ ರಾಜ್ಯದ ವಿವಿಧ ಜಿಲ್ಲೆಗಳ ವಿದ್ಯಾರ್ಥಿ ಗಳು ವ್ಯಾಸಂಗ ಮಾಡುತ್ತಿದ್ದು, ಶಾಲೆಯ ಒಟ್ಟು ವಿದ್ಯಾರ್ಥಿಗಳ ಸಾಮರ್ಥ್ಯ 125 ಆಗಿದೆ. ಆದರೆ ಕೊರೊನಾ ಬಳಿಕ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸಿದೆ.

ಪರಿಶೀಲನೆ

ಆಶ್ರಮ ಶಾಲೆಯ ಹಳೆ ಕಟ್ಟಡದ ಬಣ್ಣ ಸಂಪೂರ್ಣ ಮಾಸಿ ಹೋಗಿ ಮೇಲ್ಛಾವಣಿ ಸೇರಿದಂತೆ ಅಲ್ಲಲ್ಲಿ ಕಾಂಕ್ರೀಟ್‌ ಪುಡಿ ಬೀಳುತ್ತಿದ್ದವು. ಕಬ್ಬಿಣಗಳು ಸಂಪೂರ್ಣ ತುಕ್ಕು ಹಿಡಿದಿತ್ತು. ಹೀಗಾಗಿ ಸಂಬಂಧಪಟ್ಟ ಎಂಜಿನಿಯರ್‌ಗಳು ಪರಿಶೀಲಿಸಿ ಯೋಗ್ಯ ವಲ್ಲ ಎಂಬ ವರದಿ ನೀಡಿದ್ದರು. ಸಮಾಜ ಕಲ್ಯಾಣ ಇಲಾಖೆಯ ಕಮೀಷನರ್‌ ಡಾ| ರಾಕೇಶ್‌ ಕುಮಾರ್‌ ಕೆ. ಕೂಡ ಭೇಟಿ ನೀಡಿ ಕಟ್ಟಡವನ್ನು ಪರಿಶೀಲನೆ ಮಾಡಿದ್ದರು.

 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.