ಗಜೇಂದ್ರಗಡ: ಮಠಗಳ ಜನಪರ ಕೆಲಸ ಸರ್ಕಾರಕ್ಕೆ ಪ್ರೇರಣೆ


Team Udayavani, Aug 14, 2024, 2:16 PM IST

ಗಜೇಂದ್ರಗಡ: ಮಠಗಳ ಜನಪರ ಕೆಲಸ ಸರ್ಕಾರಕ್ಕೆ ಪ್ರೇರಣೆ

ಉದಯವಾಣಿ ಸಮಾಚಾರ
ಗಜೇಂದ್ರಗಡ: ಸರ್ಕಾರಗಳಿಗೂ ಮೊದಲೇ ನಾಡಿನ ಮಠ ಮಾನ್ಯಗಳು ಜನಪರ ಯೋಜನೆ ಜಾರಿಗೆ ತಂದಿದ್ದು, ಅವುಗಳಿಂದ ಪ್ರೇರೇಪಿತರಾಗಿ ಸರ್ಕಾರಗಳು ವಿವಿಧ ಯೋಜನೆ ಜಾರಿಗೆ ತಂದಿವೆ. ಎಲ್ಲ ಯೋಜನೆಗಳ ಶ್ರೇಯ ನಾಡಿನ ಮಠಮಾನ್ಯಗಳಿಗೆ ಸಲ್ಲುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಸಮೀಪದಲ್ಲಿ ಹಾಲಕೆರೆಯ ಲಿಂ| ಅನ್ನದಾನ ಶ್ರೀ ಅವರ 47ನೇ ಪುಣ್ಯಸ್ಮರಣೆ ನಿಮಿತ್ತ ಸೋಮವಾರ ಸಂಜೆ ಬೆಳ್ಳಿ ರಥೋತ್ಸವದ ನಂತರ ನಡೆದ ಶಿವಾನುಭಗೋಷ್ಠಿಯಲ್ಲಿ ಶ್ರೀ ಅನ್ನದಾನೇಶ್ವರ ಕೃಪಾ ಪೋಷಿತ ಅಕ್ಕಮಹಾದೇವಿ ಮಾತೃ ಬಳಗಕ್ಕೆ ಚಾಲನೆ ನೀಡಿ
ಅವರು ಮಾತನಾಡಿದರು.

ರಾಜ್ಯದ ಮಠಗಳು ಸ್ವಾತಂತ್ರ್ಯ ಪೂರ್ವದಲ್ಲೇ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸುವ ಮೂಲಕ ಉಚಿತ ಶಿಕ್ಷಣ, ವಸತಿ, ಆಹಾರ ನೀಡುವ ಮೂಲಕ ತಮ್ಮದೇ ಆದ ಕೊಡುಗೆ ನೀಡಿವೆ. ವಿಶೇಷವಾಗಿ ಹಾಲಕೆರೆಯ ಶ್ರೀಮಠವು ಗ್ರಾಮೀಣ ಭಾಗದಲ್ಲಿ ಉಚಿತ ಅನ್ನ, ಅಕ್ಷರದ ದಾಸೋಹ ಮಾಡುವ ಮೂಲಕ ಈ ಭಾಗದ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡಿದೆ.

ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯ ಪಾತ್ರದ ಬಗ್ಗೆ ಗಮನ ಹೆಚ್ಚಿಸುವ ಉದ್ದೇಶದಿಂದ ಶ್ರೀಮಠದಿಂದ ಬೆಳ್ಳಿ ರಥ ನಿರ್ಮಾಣ ಮಾಡಿ, ಅದನ್ನು ಅವರಿಂದಲೇ ಎಳೆಯುವ ಮೂಲಕ ಸಮಾಜದಲ್ಲಿ ಮಹಿಳೆಯರಿಗೂ ಸಮಾನವಾದ ಅವಕಾಶ ಕಲ್ಪಿಸಿದ ಕೀರ್ತಿ ಶ್ರೀಮಠಕ್ಕೆ ಸಲ್ಲುತ್ತದೆ ಎಂದರು.

ಹಾಲಕೆರೆ ಅನ್ನದಾನೇಶ್ವರ ಸಂಸ್ಥಾನ ಮಠದ ಶ್ರೀ ಮುಪ್ಪಿನ ಬಸವಲಿಂಗ ಶ್ರೀ ಆಶೀರ್ವಚನ ನೀಡಿದರು. ಮುಂಡರಗಿ ಸಾಹಿತಿ ವೀಣಾ ಪಾಟೀಲ ಕೌಟುಂಬಿಕ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಸಂತೆಕೆಲ್ಲೂರ ಘನಮಠೇಶ್ವರ ಮಠದ ಗುರುಬಸವ ಶ್ರೀ, ನಿಲಗುಂದ ಪ್ರಭುಲಿಂಗ ಶ್ರೀ, ನಿಡಗುಂದಿಕೊಪ್ಪ ಶಾಖಾ ಶಿವಯೋಗ ಮಂದಿರದ ಅಭಿನವ ಚನ್ನಬಸವ ಶ್ರೀ, ಕರೆಗುಡ್ಡ ಮಹಾಂತೇಶ್ವರ ಮಠದ ಮಹಾಂತಲಿಂಗ ಶಿವಾಚಾರ್ಯರು, ಖೇಳಗಿ ಶಿವಲಿಂಗೇಶ್ವರ ಸಂಸ್ಥಾನ ಮಠದ ಶಿವಲಿಂಗ ಶ್ರೀ, ಗುಳೇದಗುಡ್ಡ ಮರಡಿಮಠದ ಅಭಿನವ ಕಾಡಸಿದ್ಧೇಶ್ವರ ಶಿವಾಚಾರ್ಯರು, ವಳಬಳ್ಳಾರಿ ಸುವರ್ಣಗಿರಿ ವಿರಕ್ತಮಠದ ಸದಾಶಿವ ದೇವರು, ಕುರಗೋಡ ನಾಗಲಾಪೂರ ವಿರಕ್ತಮಠದ ಪರ್ವತ ದೇವರು. ಸೋಮಸಮುದ್ರ ವಿರಕ್ತಮಠದ ಸಿದ್ಧಲಿಂಗ ದೇವರು, ಶ್ರೀಧರಗಡ್ಡೆ ವಿರಕ್ತಮಠದ ಮರಿ ಕೊಟ್ಟೂರ ದೇವರು ನೇತೃತ್ವ ವಹಿಸಿದ್ದರು. ಅಅನ್ನಪೂರ್ಣ ಪಾಟೀಲ, ಮಹಿಳಾ ಮಂಡಳದ ಅಧ್ಯಕ್ಷೆ ಸಂಯುಕ್ತಾ ಬಂಡಿ, ಕೆವಿಜಿ ಬ್ಯಾಂಕ್‌ ವ್ಯವಸ್ಥಾಪಕಿ ಕದರಿ ಇದ್ದರು.

ಭಾರತ ಇತಿಹಾಸ ಹೊಂದಿದ ದೇಶ. ಸಂಸ್ಕೃತಿಯ ಪ್ರತೀಕ. ನಾಡಿನ ಕಲೆ, ಸಂಪ್ರದಾಯಗಳನ್ನು ಪ್ರತಿನಿಧಿಸುವ ಕಲೆಗಳನ್ನು ಮಕ್ಕಳಿಗೆ ಕಲಿಸಲು ತಾಯಂದಿರು ಹೆಚ್ಚಿನ ಆಸಕ್ತಿ ತೋರಬೇಕು.
●ಲಕ್ಷ್ಮೀ ಹೆಬ್ಬಾಳಕರ, ಸಚಿವೆ

 

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

18-gadaga

ತುಂಗಭದ್ರಾ ನದಿ‌ಯಲ್ಲಿ ಅಕ್ರಮ‌ ಮರಳುಗಾರಿಕೆ! ನಸುಕಿನ ವೇಳೆ ಡಿಸಿ ಹಾಗೂ‌ ಎಸಿ ದಿಢೀರ್ ದಾಳಿ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.