Rabkavi-Banhatti: ಕೆಳಸ್ತರದ ಜನರಿಗಾಗಿ ಜನ ಸಂಪರ್ಕ ಕಾರ್ಯಾಲಯ – ಉಮಾಶ್ರೀ
Team Udayavani, Aug 14, 2024, 6:24 PM IST
ರಬಕವಿ-ಬನಹಟ್ಟಿ: ತೇರದಾಳ ವಿಧಾನ ಸಭಾ ಕ್ಷೇತ್ರದ ರಬಕವಿ ಬನಹಟ್ಟಿ, ರಾಮಪುರ ಮತ್ತು ಹೊಸೂರ ಊರಿನ ಅತ್ಯಂತ ಕೆಳಸ್ತರದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಬಕವಿ ಬನಹಟ್ಟಿ ನಗರಸಭೆಯ ಕಾರ್ಯಾಲಯದಲ್ಲಿ ಜನ ಸಂಪರ್ಕ ಕಾರ್ಯಾಲಯವನ್ನು ಆರಂಭಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ತಿಳಿಸಿದರು.
ಅವರು ಬುಧವಾರ ಇಲ್ಲಿನ ನಗರಸಭೆಯ ಕಾರ್ಯಾಲಯದಲ್ಲಿ ಜನ ಸಂಪರ್ಕ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದರು.ಕ್ಷೇತ್ರದ ಜನರನ್ನು ನೇರವಾಗಿ ಹೋಗಿ ಭೇಟಿಯಾಗಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಇಲ್ಲಿನ ಜನರು ತಮ್ಮ ಸಮಸ್ಯೆಗಳನ್ನು ಮತ್ತು ಅಹವಾಲುಗಳನ್ನು ಜನ ಸಂಪರ್ಕ ಕಾರ್ಯಾಲಯದಲ್ಲಿರುವ ವ್ಯಕ್ತಿಗೆ ನೀಡಬೇಕು. ನಂತರ ಬಂದಂಧ ಸಮಸ್ಯೆಗಳ ಕುರಿತು ನಾನು ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತರುವುದರ ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ಜನರ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಜನ ಸಂಪರ್ಕ ಕಾರ್ಯಾಲಯವನ್ನು ಆರಂಭಿಸಲಾಗಿದೆ.
ಸರ್ಕಾರ ಕೊಟ್ಟಿರುವ ಅಧಿಕಾರವು ಸದುಪಯೋಗವಾಗಲಿ ಎಂಬ ದೃಷ್ಠಿಯಿಂದ ಮತ್ತು ಪಕ್ಷಾತೀತವಾಗಿ ಎಲ್ಲ ಪಕ್ಷದ ಜನರ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಜನ ಸಂಪರ್ಕ ಕಾರ್ಯಾಲಯವನ್ನು ಆರಂಭಿಸಲಾಗಿದೆ. ಸ್ಥಳೀಯರು ಜನ ಸಂಪರ್ಕ ಕಾರ್ಯಾಲಯದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ತಿಳಿಸಿದರು.
ಜನ ಸಂಪರ್ಕ ಕಾರ್ಯಾಲಯದಲ್ಲಿ ಪೂಜಾ ಕಾರ್ಯಕ್ರಮವನ್ನು ಪಕ್ಷದ ಕಾರ್ಯಕರ್ತರು ನಡೆಸಿದರು. ಡಾ. ಎ.ಕೆ. ನಾಡಗೌಡಪಾಟೀಲ, ಡಾ. ಎ.ಆರ್. ಬೆಳಗಲಿ, ನೀಲಕಂಠ ಮುತ್ತೂರ, ಮಲ್ಲಪ್ಪ ಸಿಂಗಾಡಿ, ಲಕ್ಷ್ಮಣ ದೇಸಾರಟ್ಟಿ, ಈಶ್ವರ ಚಮಕೇರಿ, ಭೀಮಶಿ ಮಗದುಮ್, ರಾಜೇಂದ್ರ ಭದ್ರನವರ, ನೇಮಣ್ಣ ಸಾವಂತನವರ, ಅಶೋಕ ಆಳಗೊಂಡ, ರಾಜು ದೇಸಾಯಿ, ಬಸವರಾಜ ಗುಡೋಡಗಿ, ಸಂಗಪ್ಪ ಕುಂದಗೋಳ, ಹರ್ಷವರ್ಧನ ಪಟವರ್ಧನ, ರಾಹುಲ ಕಲಾಲ, ವಿಠ್ಠಲ ಹೊಸಮನಿ, ಅಶೋಕ ಉಳ್ಳಾಗಡ್ಡಿ, ನಿಲೇಶ ದೇಸಾಯಿ, ಕಿರಣ ದೇಸಾಯಿ, ಹಾರೂನ್ ಸಾಂಗ್ಲಿಕರ್, ರೇಣುಕಾ ಮಡ್ಡಿಮನಿ, ಕುಂಬಾರ, ಆಶಾ ಭೂತಿ, ಚರ್ಕಿ, ಸದಾಶಿವ ಗೊಂದಕರ್, ರಾಜು ನಂದೆಪ್ಪನವರ, ಸತ್ಯಪ್ಪ ಮಗದುಮ್, ಶ್ರೀಶೈಲ ಮೇಣಿ ಸೇರಿದಂತೆ ತೇರದಾಳ ವಿಧಾನ ಸಭಾ ಮತಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ
Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.