Bengaluru ಜೆ.ಪಿ.ನಗರ ಕುಕ್ಕರ್ ಸ್ಫೋಟ ಪ್ರಕರಣ: ಎನ್ಐಎ ತಂಡದಿಂದಲೂ ಪರಿಶೀಲನೆ
ಎಲ್ಲ ಆಯಾಮಗಳ ತನಿಖೆಗೆ ಎನ್ಐಎ ಅಧಿಕಾರಿಗಳಿಗೆ ಸ್ಥಳೀಯ ಪೊಲೀಸರ ಸಾಥ್
Team Udayavani, Aug 14, 2024, 8:56 PM IST
ಬೆಂಗಳೂರು: ರಾಜಧಾನಿಯಲ್ಲಿ ಸಂಭವಿಸಿದ ಮತ್ತೊಂದು ಅನುಮಾನಾಸ್ಪದ ಸ್ಫೋಟವು ಹಲವು ಆಯಾಮಗಳಲ್ಲಿ ತನಿಖೆ (Investigation) ನಡೆಸಲು ಪೊಲೀಸರು (Police) ಮುಂದಾಗಿದ್ದಾರೆ. ನಗರದ ಜೆಪಿ ನಗರದ ಉಡುಪಿ ಉಪಹಾರದ ಬಳಿಯ ಮನೆಯೊಂದರಲ್ಲಿ ನಡೆದ ಕುಕ್ಕರ್ ಸ್ಫೋಟ ಘಟನೆಗೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (NIA) ತಂಡವೂ ವಿವರ ಕಲೆ ಹಾಕಲು ಸ್ಥಳಕ್ಕೆ ಭೇಟಿ ನೀಡಿದೆ.
ಜೆಪಿ ನಗರದಲ್ಲಿಸೋಮವಾರ ಬೆಳಿಗ್ಗೆ ನಡೆದಿರುವ ಕುಕ್ಕರ್ ಸ್ಫೋಟದಿಂದ ದಿಲ್ಲಿ ಮೂಲದ ಮೋಸಿನ್ (23) ಹಾಗೂ ಖಾದರ್ ಖಾನ್ (27) ಗಾಯಗೊಂಡಿದ್ದರು. ಸ್ಫೋಟದ ಶಬ್ದ ಬರುತ್ತಿದ್ದಂತೆ ಸ್ಥಳೀಯರು ಬಂದು ಗಾಯಾಳುಗಳ ಆಸ್ಪತ್ರೆಗೆ ಕರೆದೊಯ್ದರು. ಸ್ಪೋಟದ ತೀವ್ರತೆಗೆ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿದೆ.
ಸ್ಥಳೀಯ ಪೊಲೀಸರ ಸಹಕಾರದಲ್ಲಿ ಪರಿಶೀಲನೆ:
ಕುಕ್ಕರ್ ಬ್ಲಾಸ್ಟ್ಗಿಂತಲೂ ತೀವ್ರವಾಗಿ ಸ್ಪೋಟ ನಡೆದಿದ್ದು, ಸ್ಪೋಟದ ತೀವ್ರತೆಗೆ ಕೊಠಡಿ ಸಂಪೂರ್ಣ ಛಿದ್ರವಾಗಿದೆ. ಸ್ಪೋಟದ ತೀವ್ರತೆಯ ಎನ್ಐಎ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕುಕ್ಕರ್ ಸ್ಪೋಟಕ್ಕಿಂತ ತೀವ್ರತರವಾದ ಹಾನಿ ಹಿನ್ನೆಲೆಯಲ್ಲಿ ಈ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಎನ್ ಐಎ ಅಧಿಕಾರಿಗಳಿಗೆ ಸ್ಥಳೀಯ ಪೊಲೀಸರು ಸಾಥ್ ನೀಡಿದ್ದು, ಗಾಯಗೊಂಡ ಯುವಕರ ಪೂರ್ವಾಪರವನ್ನು ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.
ಒಬ್ಬ ಯುವಕ ಮೃತ್ಯು: ಸೋಮವಾರ ಬೆಳಿಗ್ಗೆ ನಡೆದಿರುವ ಕುಕ್ಕರ್ ಸ್ಫೋಟದಲ್ಲಿ ಗಾಯಗೊಂಡವರಲ್ಲಿ ಒಬ್ಬ ಮೋಸಿನ್ ಎಂಬ ಯುವಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಈ ಹಿಂದೆ ಬ್ರೂಕ್ಫೀಲ್ಢ್ ಪ್ರದೇಶದ ರಾಮೇಶ್ವರಂ ಕೆಫೆಯಲ್ಲಿ ಸಿಲಿಂಡರ್ ಸ್ಫೋಟವೆಂದು ಮೊದಲು ಅನುಮಾನಿಸಿ ಬಳಿಕ ಉಗ್ರಕೃತ್ಯವೆಂದು ತಿಳಿದು ಬಂದಿತ್ತು. ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ 10 ಮಂದಿ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Chamarajanagara: ಲಂಚ ಪಡೆಯುತ್ತಿದ್ದ ಡಿಆರ್ಎಫ್ಒ ಲೋಕಾಯುಕ್ತ ಬಲೆಗೆ
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.