Heavy Rain: ಸುಳ್ಯ, ಕಡಬ ತಾಲೂಕಿನಲ್ಲಿ ಭಾರೀ ಮಳೆ… ಹಲವೆಡೆ ಹಾನಿ


Team Udayavani, Aug 14, 2024, 8:50 PM IST

Heavy Rain: ಸುಳ್ಯ, ಕಡಬ ತಾಲೂಕಿನಲ್ಲಿ ಭಾರೀ ಮಳೆ… ಹಲವೆಡೆ ಹಾನಿ

ಸುಳ್ಯ: ಸುಳ್ಯ ಹಾಗೂ ಕಡಬ ತಾಲೂಕಿನಲ್ಲಿ ಮಂಗಳವಾರ ರಾತ್ರಿ ಗುಡುಗು ಸಹಿತ ಭಾರೀ ಗಾಳಿ-ಮಳೆಯಾಗಿದ್ದು, ಹಲವೆಡೆ ಹಾನಿ ಸಂಭವಿಸಿದೆ.
ಮಂಗಳವಾರ ದಿನವಿಡೀ ಬಿಸಿಲಿನಿಂದ ಕೂಡಿದ್ದು, ರಾತ್ರಿಯಾಗುತ್ತಲೇ ಗುಡುಗು ಸಹಿತ ಮಳೆಯಾಗಿದೆ. ಕೆಲವು ಪ್ರದೇಶದಲ್ಲಿ ಭಾರೀ ಗಾಳಿ ಬೀಸಿದ ಪರಿಣಾಮ ತೋಟದಲ್ಲಿ ಮರಗಳು ಮುರಿದುಬಿದ್ದಿವೆ.

ಸುಳ್ಯ ತಾಲೂಕಿನ ನಿಂತಿಕಲ್ಲು ಪೇಟೆಯ ವನದುರ್ಗೆ ದೇವಾಲಯ ಸಮೀಪದಲ್ಲಿ ಹೊಳೆಯ ನೀರು ಅಂಗಡಿಗಳಿಗೆ ನೀರು ನುಗ್ಗಿದೆ. ಕಲ್ಲೇರಿಯಲ್ಲಿ ಮನೆಯಂಗಳಕ್ಕೂ ನೀರು ನುಗ್ಗಿದೆ. ಪಂಜ-ಸುಬ್ರಹ್ಮಣ್ಯ ಹೆದ್ದಾರಿಯ ಪಂಜ ಸಮೀಪದ ಬೊಳ್ಮಲೆಯಲ್ಲಿ ನೀರು ಹೆದ್ದಾರಿಯಲ್ಲೇ ಹರಿದ ಪರಿಣಾಮ ವಾಹನ ಸಂಚಾರ ವ್ಯತ್ಯಯವಾಯಿತು. ಸಂಪಾಜೆಯ ಚೌಕಿಯಲ್ಲಿ ಬಾವಿಯ ತಡೆಗೋಡೆ ಕುಸಿತವಾಗಿದೆ.

ಪಂಜ ಪೇಟೆಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ಪಂಜ ಹಾಲು ಉತ್ಪಾದಕರ ಸೊಸೈಟಿಯ ಗೋದಾಮಿಗೆ ನುಗ್ಗಿದ್ದು, ಅಲ್ಲಿ ಸಂಗ್ರಹಿಸಲಾಗಿದ್ದ ಪಶು ಆಹಾರಕ್ಕೆ ಹಾನಿಗೀಡಾಗಿದೆ. ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿಯ ಪಂಜ ಸಮೀಪದ ಕರಿಕ್ಕಳದಲ್ಲಿ ರಸ್ತೆ ಬದಿ ಮರ ಬಿದ್ದು ವಿದ್ಯುತ್‌ ಲೈನ್‌ಗೆ ಹಾನಿಯಾಗಿದೆ. ಕರಿಕ್ಕಳದಿಂದ ಪುತ್ಯ ತನಕ ಹಲವೆಡೆ ರಸ್ತೆ ಬದಿ ಮಣ್ಣು ಕುಸಿದಿದೆ. ಬಾಳಿಲ ಗ್ರಾಮದ ಪೊಸೋಡು ಧನಂಜಯ ಅವರ ಮನೆಯೊಳಗೆ ನೀರು ನುಗ್ಗಿದೆ. ಸಂಪಾಜೆ ಗ್ರಾಮದ ಗೂಮಡ್ಕ ಬೈಲೆಯಲ್ಲಿ ಪುಷ್ಪಾವತಿ ಅವರ ಮನೆ ಹಿಂಭಾಗದ ಬರೆ ಕುಸಿದಿದೆ. ಅಮರಪಟ್ನೂರು ಗ್ರಾಮದ ಪೋನಡ್ಕ ಕೆ.ಬಿ.ನಾಯ್ಕ ಅವರ ಮನೆ ಸಮೀಪದ ಶೆಡ್‌ಗೆ ಬರೆ ಕುಸಿದು ಬಿದ್ದು, ಕಾರು ಜಖಂಗೊಂಡಿದೆ.

ಕಡಬ ತಾಲೂಕಿನ ಎಡಮಂಗಲದಲ್ಲಿ ವಿಜಯ ಕುಮಾರ್‌ ಮಾಲೆಂಗಿರಿ ಅವರ ಮನೆ ಸಮೀಪದ ಬರೆ ಕುಸಿದಿದ್ದು, ಅವರ ಕೆಲವು ಅಡಿಕೆ ಮರಗಳು ಮುರಿದುಬಿದ್ದಿವೆ. ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಬಳಿಕ ತಡೆಗೋಡೆ ಕುಸಿದು ಬಿದ್ದಿದೆ. ಆಸ್ಪತ್ರೆ ಕಟ್ಟಡವರೆಗೂ ಕುಸಿತ ಭೀತಿ ಉಂಟಾಗಿದ್ದು, ಕಟ್ಟಡಕ್ಕೂ ಅಪಾಯ ಸ್ಥಿತಿ ನಿರ್ಮಾಣವಾಗಿದೆ. ಪಂಜದ ಪಾಂಡಿಗದ್ದೆ ಶಾಲಾ ಆವರಣ ಗೋಡೆ ಕುಸಿದು ಬಿದ್ದಿದೆ. ಪಂಬೆತ್ತಾಡಿ ಗ್ರಾಮದ ಜಾಕೆ ಜಯರಾಮ ಅವರ ಮನೆಗೆ ಬರೆ ಕುಸಿದು ಹಾನಿಯಾಗಿದೆ. ನಿಂತಿಕಲ್ಲು ಸಮೀಪ ಸಂಚರಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಟಾಪ್ ನ್ಯೂಸ್

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

4-belthangady

Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.