Bangladesh ಮಧ್ಯಾಂತರ ಸರಕಾರ ಹಿಂದೂಗಳ ಕಾಳಜಿ ವಹಿಸಲಿ: ಸುಬ್ರಹ್ಮಣ್ಯ ಶ್ರೀ ಆಗ್ರಹ
Team Udayavani, Aug 14, 2024, 10:31 PM IST
ಮಂಗಳೂರು: ಬಾಂಗ್ಲಾದೇಶದ ಮಧ್ಯಾಂತರ ಸರಕಾರದ ಮುಖ್ಯಸ್ಥರು ಅಲ್ಪಸಂಖ್ಯಾಕ ಹಿಂದೂಗಳ ಬಗ್ಗೆ ಕಾಳಜಿ ವಹಿಸಬೇಕು. ಭಾರತ ಸರಕಾರವೂ ಹಿಂದೂಗಳ ರಕ್ಷಣೆಗಾಗಿ ಅಲ್ಲಿನ ಸರಕಾರವನ್ನು ಒತ್ತಾಯಿಸಬೇಕು. ಇನ್ನೂ ಹೆಚ್ಚಿನ ಘಟನೆಗಳು ನಡೆಯುವ ಮೊದಲು ಅಲ್ಪಸಂಖ್ಯಾಕರನ್ನು ರಕ್ಷಿಸುವುದು ಎಲ್ಲರ ಕರ್ತವ್ಯ. ವಿಶ್ವಸಂಸ್ಥೆ, ಮಾನವ ಹಕ್ಕು ಆಯೋಗವೂ ಇದರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಗ್ರಹಿಸಿದ್ದಾರೆ.
ಸೋಮವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಅಲ್ಪಸಂಖ್ಯಾಕ ಹಿಂದೂಗಳ ನರಮೇಧ ದಿಗ್ಭ್ರಮೆ ಉಂಟು ಮಾಡಿದೆ. ಭಾರತ ಎಷ್ಟು ಸೌಹಾರ್ದ ದೇಶವೆಂದರೆ ಇಲ್ಲಿ ಅಲ್ಪಸಂಖ್ಯಾಕರು ನಿರ್ಭೀತಿಯಿಂದ ಬದುಕುತ್ತಾರೆ. ಆದರೆ ಪ್ರಪಂಚದ ಬೇರೆ ದೇಶಗಳಲ್ಲಿ ಅಲ್ಪಸಂಖ್ಯಾಕರಾಗಿರುವ ಹಿಂದೂಗಳ ಪರಿಸ್ಥಿತಿ ಅತ್ಯಂತ ಭಯಾನಕವಾಗಿದೆ. ದೇವಸ್ಥಾನಗಳ ಲೂಟಿ, ಹಿಂದೂ ಹೆಣ್ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ನಡೆಯುತ್ತಿರುವುದು ನೋವು ತಂದಿದೆ. ಈ ಕ್ರೌರ್ಯದ ಪರಾಕಾಷ್ಠೆಯಿಂದ ಅಲ್ಪಸಂಖ್ಯಾಕ ಹಿಂದೂಗಳು ಬದುಕುವುದೇ ಕಷ್ಟ ಎನ್ನುವ ಪರಿಸ್ಥಿತಿಯಲ್ಲಿ ಒದ್ದಾಡುತ್ತಿದ್ದಾರೆ. ಹಿಂದೂ ಮಂದಿಗೆ ಅಲ್ಲಿ ಬಲವಾದ ಆಶ್ರಯ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.